Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೊಹಿದಿನ್ ಸಾಹೇಬರಿಗೆ ಅರಸು ಪ್ರಶಸ್ತಿ...

ಮೊಹಿದಿನ್ ಸಾಹೇಬರಿಗೆ ಅರಸು ಪ್ರಶಸ್ತಿ ನೀಡಿದ್ದು ಶ್ಲಾಘನೀಯ. ಆದರೆ...

ಸೈದುದ್ದೀನ್ ಯು., ಬಜ್ಪೆಸೈದುದ್ದೀನ್ ಯು., ಬಜ್ಪೆ13 Sept 2016 9:44 AM IST
share
ಮೊಹಿದಿನ್ ಸಾಹೇಬರಿಗೆ ಅರಸು ಪ್ರಶಸ್ತಿ ನೀಡಿದ್ದು ಶ್ಲಾಘನೀಯ. ಆದರೆ...

ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ. ಮೊಹಿದಿನ್ ಅವರಿಗೆ ಇತ್ತೀಚಿಗೆ ಪ್ರತಿಷ್ಠಿತ ದೇವರಾಜ ಅರಸು ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಏಕೆಂದರೆ , ದೇವರಾಜ ಅರಸರು ಪ್ರತಿಪಾದಿಸಿದ ಉನ್ನತ ಮೌಲ್ಯಗಳನ್ನು ತಮ್ಮ ರಾಜಕೀಯ ಬದುಕಿನುದ್ದಕ್ಕೂ ಎತ್ತಿ ಹಿಡಿದ ಮುತ್ಸದ್ದಿ ರಾಜಕಾರಣಿ ಮೊಹಿದಿನ್ ಸಾಹೇಬರು. ಈ ಅತ್ಯುತ್ತಮ ಆಯ್ಕೆ ಮಾಡಿದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೂ ಹಾರ್ದಿಕ ಅಭಿನಂದನೆಗಳು. ಈ ಮೂಲಕ ಅವರು ಅರಸು ಅವರಿಗೆ ನಿಜವಾದ ಗೌರವ  ಸಲ್ಲಿಸಿದ್ದಾರೆ. 

ಆದರೆ ಮೊಹಿದಿನ್ ಸಾಹೇಬರಿಗೆ ಅರಸು ಪ್ರಶಸ್ತಿ ನೀಡಿರುವುದನ್ನು ಮುಸ್ಲಿಂ ಸಮುದಾಯ ಸಂಭ್ರಮಿಸುತ್ತಿರುವುದು ನೋಡಿದರೆ ಅಯ್ಯೋ ಅನಿಸುತ್ತದೆ. ಮೊಹಿದಿನ್ ಸಾಹೇಬರ ರಾಜಕೀಯ ಮುತ್ಸದ್ದಿತನ, ಅವರ ಶ್ರೀಮಂತ ರಾಜಕೀಯ ಅನುಭವ, ನಿಷ್ಕಳಂಕ ಸಾರ್ವಜನಿಕ ಜೀವನ, ಅವರು ಮಾಡಿರುವ ಜನಪರ ಕೆಲಸಗಳು, ನೀಡಿರುವ ಪಾರದರ್ಶಕ ಆಡಳಿತ , ದೂರದೃಷ್ಟಿಯ ನಿರ್ಧಾರಗಳು - ಇವುಗಳನ್ನೆಲ್ಲ ಗಣನೆಗೆ ತೆಗೆದುಕೊಂಡರೆ ಅವರಿಗೆ ಕಾಂಗ್ರೆಸ್ ಪಕ್ಷ ಸೂಕ್ತ ಸ್ಥಾನಮಾನ, ಗೌರವ ನೀಡಿದೆ ಎಂದು ಯಾರಿಗಾದರೂ ಅನಿಸುತ್ತದೆಯೇ ? ಒಂದು ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ಪಡೆಯುವುದಕ್ಕಿಂತ ಹೆಚ್ಚಿನ ಅರ್ಹತೆ ಆ ಹಿರಿಯರಿಗೆ ಇಲ್ಲವೇ ?

ಹತ್ತು ವರ್ಷಗಳ ಯುಪಿಎ ಆಡಳಿತದ ಸಂದರ್ಭದಲ್ಲಿ ಕಾಂಗ್ರೆಸ್ ಹಲವರನ್ನು ರಾಜ್ಯಪಾಲರಾಗಿ ನೇಮಿಸಿತು. ಅವರ ಅರ್ಹತೆ, ಗಾಂಧೀ ಕುಟುಂಬಕ್ಕೆ ಅವರ ನಿಷ್ಠೆ , ಅವರ ಪ್ರಾಮಾಣಿಕತೆ ಇತ್ಯಾದಿಗಳ ಬಗ್ಗೆ ಇಲ್ಲಿ ಚರ್ಚೆ ಬೇಡ. ಆದರೆ ಮೊಹಿದಿನ್ ಸಾಹೇಬರು ಆ ಹುದ್ದೆಗೆ ಅರ್ಹರಾಗಿ ಕಾಣಲಿಲ್ಲವೇಕೆ ? ಡೊಗ್ಗು ಸಲಾಮು ಹಾಕುವವರು, ಪ್ರಶ್ನಿಸದೆ ಪಾಲಿಸುವವರು, ಸ್ವಾಭಿಮಾನವನ್ನು ಮನೆಯಲ್ಲಿ ಬಿಟ್ಟು ಬಂದವರು, ಆತ್ಮ ಗೌರವ ಎಂದರೆ ಏನೆಂದೇ ಗೊತ್ತಿಲ್ಲದವರು, ಪಕ್ಷಕ್ಕಾಗಿ ಸಮುದಾಯವನ್ನೇ ಮಾರಿ ಬಿಡುವವರು - ಇವರು ಮಾತ್ರ ಇಂತಹ ಉನ್ನತ ಹುದ್ದೆಗಳಿಗೆ ಅರ್ಹರೇ ? 

ಹೋಗಲಿ , ಕರ್ನಾಟಕದಲ್ಲೇ ಕಾಂಗ್ರೆಸ್ ಸರಕಾರ ಇದೆ. ಸಿದ್ದರಾಮಯ್ಯನವರಿಗೂ ಮೊಹಿದಿನ್ ಸಾಹೇಬರು ಏನೆಂದು ಚೆನ್ನಾಗಿ ಗೊತ್ತಿದೆ. ಕನಿಷ್ಠ ಒಂದು ವಿಧಾನ ಪರಿಷತ್ ಸ್ಥಾನವನ್ನಾದರೂ ಕೊಡಬಹುದಿತ್ತು. ಏಕೆ ಆಗಲಿಲ್ಲ ? ಅವರು ಸದನದ ಒಳಗಿದ್ದಿದ್ದರೆ ಅದರಿಂದ ಪಕ್ಷಕ್ಕೆ ದೊಡ್ಡ ಬಲ ಬರುತ್ತಿತ್ತು. ಸದನದ ಘನತೆ ಹೆಚ್ಚುತ್ತಿತ್ತು, ಜೊತೆಗೆ ಪಕ್ಷದ ಗೌರವ ಕೂಡ. ಯಾವುದೇ ವಿಷಯದ ಬಗ್ಗೆ ತೂಕದ ಮಾತನಾಡುತ್ತಿದ್ದರು. ಆದರೆ ಪಕ್ಷಕ್ಕೇ ಬೇಡವಾದರೆ ಏನು ಮಾಡೋಣ ? 

ಈಗ ಅವರಿಗೆ ಒಂದು ದೊಡ್ಡ ಪ್ರಶಸ್ತಿಯನ್ನು ನೀಡಿ ' ಸಮಾಧಾನಕರ ಬಹುಮಾನ ' ನೀಡಲಾಗಿದೆ. ಅದನ್ನು ನಾವು ಹೇಳಿಕೊಂಡು ತಿರುಗುತ್ತಿದ್ದೇವೆ. ಇದು ನಮ್ಮ ದುರಂತ ! 

ಸೈದುದ್ದೀನ್ ಯು., ಬಜ್ಪೆ

share
ಸೈದುದ್ದೀನ್ ಯು., ಬಜ್ಪೆ
ಸೈದುದ್ದೀನ್ ಯು., ಬಜ್ಪೆ
Next Story
X