Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯದ ಯುವಕನ ಮತಾಂತರಕ್ಕೆ ಯತ್ನ :...

ಸುಳ್ಯದ ಯುವಕನ ಮತಾಂತರಕ್ಕೆ ಯತ್ನ : ಮನೆಯವರ ಆರೋಪ

ಆರೋಪ ಅಲ್ಲಗಳೆದ ಯುವಕ

ವಾರ್ತಾಭಾರತಿವಾರ್ತಾಭಾರತಿ13 Sept 2016 6:52 PM IST
share

ಸುಳ್ಯ, ಸೆ.13: ಪಂಜದ ಯುವಕನೊಬ್ಬನನ್ನು ಮತಾಂತರಿಸಲು ಯತ್ನಗಳು ನಡೆಯುತ್ತಿವೆ ಎಂದು ಆತನ ಮನೆಯವರು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಜ್ಜಾವರದ ಚೈತನ್ಯ ಆಶ್ರಮದ ಯೋಗೇಶ್ವರಾನಂದ ಸ್ವಾಮೀಜಿ, ಪಂಜದ ಬಾಬ್ಲುಬೆಟ್ಟು ವಾಸುದೇವ ಹಾಗೂ ಜಯಲಕ್ಷ್ಮಿ ದಂಪತಿಯ ಪುತ್ರ ಜಯನಾರಾಯಣ ಎಂಬವರು ವಿಟ್ಲ ಸಮೀಪದ ಕಾಂತಡ್ಕದ ಡಿ.ಕೆ.ಮುಸ್ತಫಾ ಎಂಬವರ ಲಾರಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಅಲ್ಲಿ ಆತನಿಗೆ ಆಮಿಷವೊಡ್ಡಿ ಬ್ರೈನ್‌ವಾಶ್ ಮಾಡಿದ್ದಾರೆ ಎಂದು ಆರೋಪಿಸಿದರು.

ಜಯನಾರಾಯಣ ಸಣ್ಣದಿರುವಾಗಲೇ ಅವರ ತಾಯಿ ಮೃತಪಟ್ಟಿದ್ದು, ಅಜ್ಜಾವರದ ಮೂಡೂರಿನಲ್ಲಿರುವ ತಾಯಿಯ ತವರು ಮನೆಯಲ್ಲಿ ಬೆಳೆದಿದ್ದರು. 9ನೆ ತರಗತಿವರೆಗೆ ಓದಿದ್ದ ಜಯನಾರಾಯಣ ಬಳಿಕ ಮೈಸೂರು, ಬೆಂಗಳೂರುಗಳಲ್ಲಿ ಉದ್ಯೋಗ ಮಾಡಿಕೊಂಡಿದ್ದರು. ಕಳೆದ 2 ವರ್ಷದಿಂದ ವಿಟ್ಲದಲ್ಲಿ ಲಾರಿ ಚಾಲಕನಾಗಿದ್ದು, ಆಗಾಗ ಮೂಡೂರಿಗೆ ಬಂದು ಹೋಗುತ್ತಿದ್ದರು. ಕಳೆದ ಶುಕ್ರವಾರ ವಿಟ್ಲದಲ್ಲಿ ಅಪಘಾತವಾಗಿ ಅವರ ಕಾಲಿಗೆ ಗಾಯವಾಗಿತ್ತು. ಆದರೆ ಆ ವಿಷಯ ಮನೆಯವರಿಗೂ ತಿಳಿಸಿರಲಿಲ್ಲ. ಸಂಬಂಧಿಕರಿಂದ ವಿಷಯ ತಿಳಿದ ಮನೆಯವರು ವಿಟ್ಲಕ್ಕೆ ತೆರಳಿದಾಗ ಅಲ್ಲಿ ಗೋದಾಮಿನಲ್ಲಿ ಹಾಸಿಗೆಯಲ್ಲಿ ಮಲಗಿಸಲಾಗಿತ್ತು. ಅಲ್ಲಿಂದ ಕರೆತಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಮನೆಯವರು ಆರೋಪಿಸಿದರು.

ಕೆಲವು ಸಮಯದ ಹಿಂದೆ ಜಯನಾರಾಯಣ ಮೂಡೂರಿನ ಮನೆಗೆ ಬಂದಿದ್ದಾಗ ತಾನು ಮುಸ್ಲಿಂ ಹುಡುಗಿಯನ್ನು ಮದುವೆಯಾಗುವುದಾಗಿ ತಿಳಿಸಿದ್ದ. ತಾನು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾಗಿ ಆತನ ಅತ್ತೆ ಗೀತಾ ದೂರಿದರು. ಆತ ಹೆಚ್ಚಾಗಿ ಮುಸ್ಲಿಂ ಯುವಕರೊಂದಿಗೆ ಸುತ್ತಾಟ ನಡೆಸುತ್ತಿದ್ದ ಎಂದು ಮಾವ ಚಿತ್ರಕುಮಾರ್ ದೂರಿದರು.

ಜಯನಾರಾಯಣರ ಮಾವ ಜಗನ್ನಾಥ, ಚಿಕ್ಕಮ್ಮ ಗೀತಾ, ಎಪಿಎಂಸಿ ಸದಸ್ಯ ಶಂಕರ್ ಪೆರಾಜೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆರೋಪ ಅಲ್ಲಗಳೆದ ಯುವಕ

 ಮತಾಂತರದ ಕುರಿತು ತನ್ನ ಮನೆಯವರು ಮಾಡಿರುವ ಆರೋಪವನ್ನು ಜಯನಾರಾಯಣ ಅಲ್ಲಗಳೆದಿದ್ದಾರೆ.

ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯನಾರಾಯಣ ಅವರನ್ನು ಈ ಕುರಿತು ಮಾತನಾಡಿಸಿದಾಗ, ತಾನು ಅಪಘಾತವಾಗಿರುವ ವಿಷಯ ಮನೆಯವರಿಗೆ ತಿಳಿಸಿಲ್ಲ. ತಿಳಿಸಬೇಕು ಎಂದು ತನಗೆ ಗೊತ್ತಾಗಿಲ್ಲ. ಆದರೆ ತಾನು ಮತಾಂತರದ ಕುರಿತು ಯೋಚನೆಯನ್ನೇ ಮಾಡಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X