Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದನದ ಸೆಗಣಿ ತಿನ್ನಿಸಿದರು! ಕೋವಿಯಿಂದ...

ದನದ ಸೆಗಣಿ ತಿನ್ನಿಸಿದರು! ಕೋವಿಯಿಂದ ಎದೆಗೆ ಹೊಡೆದರು!: ಗೋರಕ್ಷಕರಿಂದ ಹಲ್ಲೆಗೊಳಗಾದ ಯುವಕ ಹೇಳಿಕೆ

ಮಡಿಕೇರಿಯಲ್ಲಿ ಗೋ ಸಾಗಾಟ ವಾಹನದ ಮೇಲೆ ಗುಂಡಿನ ದಾಳಿ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ13 Sept 2016 9:14 PM IST
share
ದನದ ಸೆಗಣಿ ತಿನ್ನಿಸಿದರು! ಕೋವಿಯಿಂದ ಎದೆಗೆ ಹೊಡೆದರು!: ಗೋರಕ್ಷಕರಿಂದ ಹಲ್ಲೆಗೊಳಗಾದ ಯುವಕ ಹೇಳಿಕೆ

ಮಂಗಳೂರು, ಸೆ. 13: ''ಕೃಷಿಗಾಗಿ ದನವನ್ನು ಖರೀದಿಸಿ ಪಿಕಪ್ ವಾಹನದಲ್ಲಿ ತರುತ್ತಿದ್ದಾಗ ಮಾರ್ಗಮಧ್ಯೆ ಸುಮಾರು 20 ಮಂದಿಯ ತಂಡದಲ್ಲಿ ಓರ್ವ ತನ್ನ ಬಳಿಯಿಂದ ಕೋವಿ ತೆಗೆದು ಪಿಕಪ್‌ನತ್ತ ಎರಡು ಬಾರಿ ಗುಂಡು ಹಾರಿಸಿದ. ನಾವಿಬ್ಬರೂ ವಾಹನದಿಂದ ಹೊರಬಂದು ಓಡಿದೆವು. ಅಟ್ಟಾಡಿಸಿದ ತಂಡ ನನ್ನನ್ನು ಹಿಂಬಾಲಿಸಿ ಯದ್ವಾ ತದ್ವಾ ಹಲ್ಲೆ ನಡೆಸಿತು. ಗುಂಡು ಹೊಡೆದಾತ ತನ್ನ ಕೋವಿಯಿಂದ ನನ್ನ ಎದೆಗೆ ಹೊಡೆದ. ನಾನು ಅಂಗಾಲಾಚಿದರೂ ಬಿಡಲಿಲ್ಲ. ಇದೇ ಹೊತ್ತಿಗೆ ಗುಂಪಿನಲ್ಲಿದ್ದ ಕೆಲವು ನನ್ನನ್ನು ಬಲವಂತವಾಗಿ ಸೆಗಣಿ ತಿನ್ನಿಸಿದರು.''

ಮಡಿಕೇರಿ ತಾಲೂಕಿನ ಕಗ್ಗೋಡ್ಲು ಎಂಬಲ್ಲಿ ರವಿವಾರ ಬೆಳಗ್ಗೆ ದನ ಸಾಗಾಟದ ವಾಹನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿರುವ ವೀರಾಜಪೇಟೆ ತಾಲೂಕಿನ ಕೊಂಡಂಗೇರಿ ನಿವಾಸಿ ಪಿ.ಎ.ಬಶೀರ್ (35) ಅವರು ಅಂದಿನ ಘಟನೆಯನ್ನು 'ವಾರ್ತಾಭಾರತಿ'ಗೆ ವಿವರಿಸಿದ್ದು ಹೀಗೆ.

''ಕಗ್ಗೋಡ್ಲು ಎಂಬಲ್ಲಿ ರವಿವಾರ ಬೆಳಗ್ಗೆ ಗಣಪತಿ ಎಂಬವರಿಂದ ಕೃಷಿಗಾಗಿ ದನವನ್ನು ಖರೀದಿಸಿದ್ದೆ. ಕಗ್ಗೋಡ್ಲುಯಿಂದ ವಾಹನದಲ್ಲಿ ದನವನ್ನು ಸಾಗಾಟ ಮಾಡಿ ಕೇವಲ ಅರ್ಧ ಕಿ.ಮೀ. ಹೋಗುತ್ತಿದ್ದಂತೆ ಕೆಂಪು ಬಣ್ಣದ ಮಾರುತಿ 800 ವಾಹನವೊಂದು ಪಿಕಪ್‌ಗೆ ಅಡ್ಡವಾಗಿ ನಿಂತಿತು. ಕ್ಷಣಾರ್ಧದಲ್ಲಿ ಅಲ್ಲಿ ಓಮ್ನಿ ಮತ್ತು ಕೆಲವು ಬೈಕ್‌ಗಳಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಸೇರಿದರು. ಗುಂಪಿನಲ್ಲಿದ್ದ ಮಡಿಕೇರಿ ಬಳಿಯ ನಿವಾಸಿ ವಿಠಲ ಎಂಬಾತ ಕೋವಿಯಿಂದ ನಾವಿದ್ದ ಪಿಕಪ್ ವಾಹನದತ್ತ ಎರಡು ಬಾರಿ ಗುಂಡು ಹಾರಿಸಿದ. ಒಂದು ಗುಂಡು ಪಿಕಪ್ ವಾಹನದ ಗಾಜುಗಳನ್ನು ಪುಡಿಗೈದಿತು. ಇದರಿಂದ ನಾವಿಬ್ಬರೂ ಹೆದರಿದೆವು. ಚಾಲಕ ಅಬ್ದುಲ್ ಸಲಾಂ ಮೊದಲು ವಾಹನದಿಂದ ಇಳಿದು ಓಡ ತೊಡಗಿದ. ನಾನು ಇನ್ನೊಂದು ಕಡೆಯಿಂದ ಓಡಿದೆ. ಗುಂಪಿನಲ್ಲಿದ್ದವರು ನನ್ನನ್ನು ಹಿಂಬಾಲಿಸಿ ಹಿಡಿದು ಹೊಡೆಯಲು ಪ್ರಾರಂಭಿಸಿದರು. ಗಂಪಿನಲ್ಲಿದ್ದವರು ಕೆಲವರು ಕೈ, ಕಾಲು ಸಹಿತ ಸಿಕ್ಕಿದ ವಸ್ತುಗಳಿಂದ ಹೊಡೆದಿದ್ದಾರೆ. ವಿಠಲ ಎಂಬಾತ ಕೋವಿಯಿಂದ ನನ್ನ ಎದೆಗೆ ಬಲವಾಗಿ ಹೊಡೆದಿದ್ದಾರೆ. ಘಟನೆಯಲ್ಲಿ ಕೈ ಮೂಳೆ ಮುರಿತಕ್ಕೊಳಗಾಗಿದೆ. ತಲೆ, ಎದೆಯ ಭಾಗಗಳಿಗೆ ಗಂಭೀರ ಗಾಯಗಳಾಗಿವೆ'' ಎಂದು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಶೀರ್ ನಡೆದ ಘಟನೆಯನ್ನು ವಿವರಿಸಿದ್ದಾರೆ.

ಅಬ್ದುಲ್ ಸಲಾಂ ಹಾಗೂ ಪಿ.ಎ. ಬಶೀರ್ ಕೃಷಿಕರಾಗಿದ್ದು, ಸಲಾಂ ತೋಟವನ್ನು ಹೊಂದಿದ್ದು, ಕಾಫಿ, ಕರಿಮೆಣಸು, ಏಲಕ್ಕಿ ಮೊದಲಾದ ಬೆಳೆಗಳನ್ನು ಬೆಳೆಸಿ ಮಾರಾಟ ಮಾಡುವವರಾಗಿದ್ದರೆ, ಬಶೀರ್ ಅವರು ತೋಟದಿಂದ ತೋಟಕ್ಕೆ ಹೋಗಿ ಬಾಳೆ ಕಾಯಿಯನ್ನು ಸಂಗ್ರಹಿಸಿ ಮಾರಾಟ ಮಾಡುವ ಕಾಯಕವನ್ನು ಹೊಂದಿದ್ದಾರೆ.

ಘಟನೆಯಲ್ಲಿ ಆರೋಪಿಗಳ ಹಲ್ಲೆಯಿಂದ ಸಲಾಂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಗಂಭೀರ ಗಾಯಗೊಂಡ ಬಶೀರ್‌ನನ್ನು ಪೊಲೀಸರ ಸಹಕಾರದಿಂದ ಮಡಿಕೇರಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆ ತರಲಾಗಿತ್ತು.

ಘಟನೆಗೆ ಸಂಬಂಧಿಸಿ ಒಟ್ಟು 20 ಮಂದಿಯ ವಿರುದ್ಧ ದೂರು ದಾಖಲಾಗಿದ್ದು, ಈವರೆಗೂ ಯಾರನ್ನೂ ಬಂಧಿಸಿಲ್ಲ. ತನಿಖೆ ಮುಂದುವರಿದಿದೆ ಎಂದು ಮಡಿಕೇರಿ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X