Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಣಿವೆಯಿಡೀ ಕರ್ಫ್ಯೂ:...

ಕಣಿವೆಯಿಡೀ ಕರ್ಫ್ಯೂ: ಹೆಲಿಕಾಪ್ಟರ್-ಡ್ರೋನ್ ಕಣ್ಗಾವಲು

ವಾರ್ತಾಭಾರತಿವಾರ್ತಾಭಾರತಿ13 Sept 2016 10:55 PM IST
share

ಶ್ರೀನಗರ, ಸೆ.13: ಕಣಿವೆಯಲ್ಲಿ ಹಿಂಸಾಚಾರ ಮುಂದುವರಿದ್ದಲ್ಲಿ ಸಿದ್ಧವಾಗಿರುವ ಸೇನೆ ಕಾರ್ಯಾಚರಣೆಗಿಳಿಯುವ ಸಾಧ್ಯತೆಯಿದೆ.

ನ್ಯೂಯಾರ್ಕ್‌ನ ವಿಶ್ವಸಂಸ್ಥೆಯ ಮುಖ್ಯಾ ಲಯದಲ್ಲಿ ಅದರ ಸಾಮಾನ್ಯ ಸಭೆಯ 71ನೆ ಅಧಿವೇಶನದ ಆರಂಭದ ದಿನವಾದ ಇಂದು, ಕಾಶ್ಮೀರದಲ್ಲಿರುವ ವಿಶ್ವಸಂಸ್ಥೆಯ ಸ್ಥಳೀಯ ಕಚೇರಿಗಳಿಗೆ ಮೆರವಣಿಗೆ ನಡೆಸುವ ಕರೆಯನ್ನು ಪ್ರತ್ಯೇಕತಾವಾದಿಗಳು ನೀಡಿರುವ ಹಿನ್ನೆಲೆಯಲ್ಲಿ ಕಣಿವೆಯಾದ್ಯಂತ ಕರ್ಫ್ಯೂ ವಿಧಿಸಲಾಗಿದ್ದು, ಪ್ರದೇಶದಲ್ಲಿ ಹೆಲಿಕಾಪ್ಟರ್ ಹಾಗೂ ಡ್ರೋನ್‌ಗಳ ಮೂಲಕ ಕಣ್ಗಾವಲು ನಡೆಸಲಾಗುತ್ತಿದೆ.
ಮುಂದಿನ 72 ತಾಸುಗಳ ಕಾಲ ಕಾರ್ಯಾ ಚರಣೆ ನಿಲ್ಲಿಸುವಂತೆ ಏರ್‌ಟೆಲ್, ಏರ್‌ಸೆಲ್, ವೊಡಾಫೋನ್ ಹಾಗೂ ರಿಲಯನ್ಸ್ ಟೆಲಿಕಾಂಗಳಿಗೆ ಆದೇಶ ನೀಡಲಾಗಿದೆ. ಬಿಎಸ್ಸೆನ್ನೆಲ್‌ಗೂ ಇಂಟರ್ನೆಟ್ ಸೇವೆ ನಿಲ್ಲಿಸುವಂತೆ ಸೂಚಿಸಲಾಗಿದೆ.

ಕಾಶ್ಮೀರ ಹಿಂಸೆಗೆ ಇನ್ನೂ 2 ಬಲಿ
ಕಾಶ್ಮೀರದಲ್ಲಿ ಇಂದು ಭದ್ರತಾ ಪಡೆಗಳು ಹಾಗೂ ಕಲ್ಲುತೂರಾಟ ನಿರತ ಪ್ರತಿಭಟನಕಾರರ ನಡುವೆ ಹೊಸದಾಗಿ ನಡೆದ ಘರ್ಷಣೆಗಳಲ್ಲಿ ಇಬ್ಬರು ಯುವಕರು ಹತರಾಗಿದ್ದಾರೆ. ಅಧಿಕಾರಿಗಳು ಎಲ್ಲ 10 ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ.
 ಬಂಡಿಪೊರಾದಲ್ಲಿ ಈದ್ ಪ್ರಾರ್ಥನೆ ಮುಗಿದೊಡನೆಯೇ, ಪ್ರತಿಭಟನಾಕಾರರ ಗುಂಪೊಂದು ಭದ್ರತಾ ಪಡೆಗಳತ್ತ ಕಲ್ಲೆಸೆಯಲು ಆರಂಭಿಸಿತು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ದುಷ್ಕರ್ಮಿಗಳತ್ತ ಅಶ್ರುವಾಯು ಹಾಗೂ ಪಾಲೆಟ್ ಗನ್‌ಗಳಿಂದ ದಾಳಿ ನಡೆಸಿದವು. ಅಶ್ರುವಾಯು ಶೆಲ್ ಬಡಿದು 20ರ ಹರೆಯದ ಮುರ್ತಾಝಾ ಅಹ್ಮದ್ ಎಂಬಾತ ಸಾವಿಗೀಡಾಗಿದ್ದು, ಹಲವರು ಗಾಯಗೊಂಡರೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೋಪಿಯಾನ್ ಜಿಲ್ಲೆಯ ಬೋಂಪೊರಾದಲ್ಲಿ ಹೊಸ ಪ್ರತಿಭಟನೆಯ ವೇಳೆ ಯುವಕನೊಬ್ಬ ಅಸು ನೀಗಿದ ಬಳಿಕ ಘರ್ಷಣೆಗಳು ನಡೆದ ಬಗ್ಗೆ ವರದಿಯಾಗಿದೆಯೆಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೂಂಛ್: ಎಲ್ಲಾ ನಾಲ್ವರು ಉಗ್ರರ ಹತ್ಯೆ
ಮೂರು ದಿನಗಳ ಕಾರ್ಯಾಚರಣೆ ಅಂತ್ಯ
ಜಮ್ಮು, ಸೆ.13: ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ನಿರ್ಮಾಣ ಹಂತದ ಮಿನಿ ಸೆಕ್ರಿಟರಿಯೇಟ್ ಕಟ್ಟಡದಲ್ಲಿ ಅಡಗಿಕೊಂಡಿದ್ದ ಎಲ್ಲಾ ನಾಲ್ವರು ಉಗ್ರಗಾಮಿಗಳನ್ನು ಹತ್ಯೆಗೈಯಲಾಗಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿರುವುದಾಗಿ ಸೇನೆ ಹಾಗೂ ಪೊಲೀಸರು ಮಂಗಳವಾರ ಘೋಷಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಸೇನೆ ಹಾಗೂ ಭದ್ರತಾ ಪಡೆಗಳು ನಿರ್ಮಾಣ ಹಂತದಲ್ಲಿರುವ ಮಿನಿ ಸೆಕ್ರಿಟರಿಯೇಟ್ ಕಟ್ಟಡ ಸಂಕೀರ್ಣದಲ್ಲಿ ನುಸುಳಿದ್ದ ಉಗ್ರರನ್ನು ಹೊರದಬ್ಬಲು ಕಾರ್ಯಾಚರಣೆಯನ್ನು ನಡೆಸುತ್ತಿತ್ತು. ಇಂದು ಸಂಜೆಯ ವೇಳೆ ಎಲ್ಲಾ ನಾಲ್ವರು ಉಗ್ರರು ಹತರಾಗಿದ್ದಾರೆಂದು ಜಮ್ಮುವಲಯದ ಪೊಲೀಸ್ ಮಹಾನಿರ್ದೇಶಕ ದಾನಿಶ್ ರಾನಾ ತಿಳಿಸಿದ್ದಾರೆ.
 


ಭಾರತೀಯ ಸೇನಾ ಪಡೆಯ ಇಂಜಿನಿಯರಿಂಗ್ ರೆಜಿಮೆಂಟ್‌ನ ಸಿಬ್ಬಂದಿ ಸುಧಾರಿತ ಸ್ಫೋಟಕಗಳನ್ನು ಬಳಸಿ ಕಟ್ಟಡದ ಗೋಡೆಯಲ್ಲಿ 5 ಅಡಿ ಅಗಲದ ರಂಧ್ರ ವೊಂದನ್ನು ನಿರ್ಮಿಸಿದ್ದರು. ಕಟ್ಟಡದ ಪ್ರವೇಶದ್ವಾರದಲ್ಲಿ ಉಗ್ರರು ಸ್ಫೋಟಕಗಳನ್ನು ಹುದುಗಿರಿಸಿರುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಆ ರಂಧ್ರದ ಮೂಲಕ ಕಟ್ಟಡದೊಳಗೆ ಪ್ರವೇಶಿಸಿ ಉಗ್ರರ ಮೇಲೆ ದಾಳಿ ನಡೆಸಿದರೆಂದು ಮೂಲ ಗಳು ತಿಳಿಸಿವೆ. ರವಿವಾರ ಮುಂಜಾನೆ 7:30ರ ಸುಮಾರಿಗೆ ಆರಂಭವಾಗಿತ್ತು. ಕಾರ್ಯಾಚರಣೆಯ ವೇಳೆ ಒಬ್ಬ ಪೊಲೀಸ್ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X