Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 9ವರ್ಷದ ಮಗನನ್ನು ಕೊಂದೆ ಎಂದು ಪೊಲೀಸ್...

9ವರ್ಷದ ಮಗನನ್ನು ಕೊಂದೆ ಎಂದು ಪೊಲೀಸ್ ಠಾಣೆಗೆ ಬಂದು ತಿಳಿಸಿದ ತಂದೆ !

ವಾರ್ತಾಭಾರತಿವಾರ್ತಾಭಾರತಿ14 Sept 2016 2:12 PM IST
share
9ವರ್ಷದ ಮಗನನ್ನು ಕೊಂದೆ ಎಂದು ಪೊಲೀಸ್ ಠಾಣೆಗೆ ಬಂದು ತಿಳಿಸಿದ ತಂದೆ !

ಕೋತಮಂಗಲಂ,ಸೆ.14: 9 ವರ್ಷದ ಪುತ್ರನನ್ನು ಉಸಿರುಗಟ್ಟಿಸಿ ಕೊಂದೆ ಎನ್ನುತ್ತಾ ತಂದೆಯೊಬ್ಬ ಪೊಲೀಸ್ ಠಾಣೆಯ ಮೊರೆ ಹೋದ ಘಟನೆ ಕೋತಮಂಗಲಂ ಸಮೀಪದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮನೆಸಮೀಪವಿರುವ ರಬ್ಬರ್ ತೋಟದ ಪಾಳುಬಾವಿಯಲ್ಲಿ ಬಾಲಕ ಮೃತದೇಹ ಪತ್ತೆಯಾಗಿದೆ. ಈ ಧೂರ್ತ ತಂದೆ ಹತ್ಯೆನಡೆಸಲು ಕಾರಣವೇನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಕೊಡಾನಾಟ್ ಚುರಮುಡಿ ವೆಳ್ಳಪಾಯಿಲ್ ಬಾಬು ನಿನ್ನೆ ಬೆಳಗ್ಗೆ ಕೊಡಾನಾಟ್ ಪೊಲೀಸ್‌ಠಾಣೆಗೆ ಬಂದು ಪುತ್ರ ವಾಸುದೇವ್‌ನನ್ನು ತಾನೇ ಕೊಂದಿರುವೆ ಎಂದು ತಿಳಿಸಿದ್ದಾನೆ. ಬಾಬು ಹೇಳಿಕೆಯಂತೆ ಪೊಲೀಸರು ಈತನ ಮನೆ ಸಮೀಪದ ರಬ್ಬರ್ ತೋಟದಲ್ಲಿರುವ ಪಾಳು ಬಾವಿಯಿಂದ ಶವವನ್ನು ಪತ್ತೆಹಚ್ಚಿದ್ದಾರೆ. ಕಳೆದ ಒಂಬತ್ತನೆ ತಾರೀಕಿನಂದು ರಾತ್ರೆ ಒಂದೂವರೆಗಂಟೆಗೆ ಮಗನನ್ನು ನಿದ್ರೆಯಲ್ಲಿ ಉಸಿರುಗಟ್ಟಿಸಿ ಕೊಂದಿದ್ದೇನೆ ಎಂದು ಬಾಬು ತಿಳಿಸಿದ್ದಾನೆ.

ಮಗನನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದೆ ಆದರೆ ತನ್ನಿಂದ ಅದು ಸಾಧ್ಯವಾಗಲಿಲ್ಲ. ಆನಂತರ ಊರು ತೊರೆದಿದ್ದೆ. ಮನೋವ್ಯಥೆ ತಾಳಲಾಗದೆ ತಾನು ಪೊಲೀಸ್‌ಠಾಣೆಗೆ ಬಂದಿದ್ದೇನೆ ಎಂದು ಹಂತಕ ತಂದೆ ಪೊಲೀಸರಿಗೆ ವಿವರಿಸಿದ್ದಾನೆ.

ಬಾಬು ಪುಲ್ಲುವಯಿ ಎಂಬಲ್ಲಿನ ಸಾಮಿಲ್ ಕಾರ್ಮಿಕನಾಗಿದ್ದು, ಈತ ಓಣಂ ಚೀಟಿವ್ಯವಹಾರ ನಡೆಸುತ್ತಿದ್ದ. ಸುಮಾರು 20,000 ರೂಪಾಯಿ ಓಣಂಗಿಂತ ಮೊದಲು ಬಾಬು ತನ್ನ ಚೀಟಿಗೆ ಸೇರಿದವರಿಗೆ ಆತ ನೀಡಬೇಕಾಗಿತ್ತು. ಇದಕ್ಕಾಗಿಯೇ ಪುಲ್ಲುವಯಿ ಎಂಬಲ್ಲಿನ ಇನ್ನೊಬ್ಬ ವ್ಯಕ್ತಿಯೊಬ್ಬರ ಚೀಟಿಗೆ ಬಾಬು ಸೇರಿದ್ದ. ಆ ಚೀಟಿಯ ಹಣ ಸರಿಯಾದ ಸಮಯಕ್ಕೆ ಸಿಗದ್ದದ್ದರಿಂದ ಊರವರ ಮುಂದೆ ತಲೆಎತ್ತಿ ನಡೆಯಲು ಸಾಧ್ಯವಿಲ್ಲ ಎಂದು ವ್ಯಥೆಯಿಂದ ಈ ಕೃತ್ಯ ನಡೆಸಿದ್ದೇನೆ ಎಂದು ಬಾಬು ಪೊಲೀಸರಿಗೆ ತಿಳಿಸಿದ್ದಾನೆ.

ಹಲವು ಕಡೆ ಪತಿ ಮತ್ತು ಮಗನನ್ನು ಹುಡುಕಿ ವಿಫಲಳಾದ ಬಾಬುನ ಪತ್ನಿ ಹನ್ನೊಂದನೆ ತಾರೀಕಿನಂದು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವ ವೇಳೆಯೇ ಬಾಬು ಠಾಣೆಗೆ ಹಾಜರಾಗಿ ಮಗನನ್ನು ಕೊಂದ ವಿಷಯ ತಿಳಿಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಊರವರು ಓಣಂನ ಗಡಿಬಿಡಿಯಲ್ಲಿರುವಾಗಲೇ ಹೀಗೊಂದು ಕೊಲೆನಡೆದ ಸುದ್ದಿ ತಿಳಿದು ಅವರು ಚಕಿತಗೊಂಡಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X