ಬಾವಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ
ಕಾಸರಗೋಡು, ಸೆ.14: ವಿವಾಹಿತ ಮಹಿಳೆಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಉದುಮದಲ್ಲಿ ನಡೆದಿದೆ. ಉದುಮ ಮಾಂಗಾಡ್ ಅಂಬಾಪುರದ ವಿನೋದ್ ಕುಮಾರ್ ಎಂಬವರ ಪತ್ನಿ ಸೌಮ್ಯಾ ( 27) ಮೃತಪಟ್ಟ ಮಹಿಳೆ.
ಬುಧವಾರ ಬೆಳಗ್ಗೆಯಿಂದ ಸೌಮ್ಯಾ ನಾಪತ್ತೆಯಾಗಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಮಂದಿ ಸೌಮ್ಯಾರನ್ನು ಹುಡುಕಾಡಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಬೇಕಲ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆತ್ತಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಏಳು ವರ್ಷಗಳ ಹಿಂದೆ ಸೌಮ್ಯಾರ ವಿವಾಹ ನಡೆದಿತ್ತು. ದಂಪತಿಗೆ ಮಕ್ಕಳಾಗದ ಹಿನ್ನಲೆಯಲ್ಲಿ ಸೌಮ್ಯಾ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ಕೃತ್ಯಕ್ಕೆ ಸ್ಪಷ್ಟ ಕಾರಣ ಏನೆಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story