Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೊವಾಡಿ: ಗೋಮಾಳ ಅತಿಕ್ರಮಣ ತೆರವಿಗೆ ಕ್ರಮ

ಮೊವಾಡಿ: ಗೋಮಾಳ ಅತಿಕ್ರಮಣ ತೆರವಿಗೆ ಕ್ರಮ

ಭೂರಹಿತರ ಹೋರಾಟಕ್ಕೆ ದಸಂಸ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ14 Sept 2016 11:03 PM IST
share
ಮೊವಾಡಿ: ಗೋಮಾಳ ಅತಿಕ್ರಮಣ ತೆರವಿಗೆ ಕ್ರಮ

ಕುಂದಾಪುರ, ಸೆ.14: ತ್ರಾಸಿ ಗ್ರಾಪಂ ವ್ಯಾಪ್ತಿಯ ಮೊವಾಡಿ ಗ್ರಾಮದಲ್ಲಿ ನೂರಕ್ಕೂ ಅಧಿಕ ನಿವೇಶನ ರಹಿತ ಬಡ ದಲಿತ ಕುಟುಂಬಗಳು ಗೋಮಾಳ ಜಾಗವನ್ನು ಅತಿಕ್ರಮಿಸಿಕೊಂಡಿರುವ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕಂದಾಯ ಇಲಾಖೆ ಅತಿಕ್ರಮಣ ತೆರವಿಗೆ ಮುಂದಾದರೆ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಭೂರಹಿತ ಬಡ ದಲಿತ ಕುಟುಂಬಗಳ ಬೆಂಬಲಕ್ಕೆ ನಿಂತಿದೆ.

ಮೊವಾಡಿ ಗ್ರಾಮದಲ್ಲಿರುವ ಸರಕಾರಿ ಗೋಮಾಳ ಜಾಗವನ್ನು ಬಲಾಢ್ಯರು, ಭೂಮಾಲಕರು ಅತಿಕ್ರಮಿಸಿದ್ದನ್ನು ಖಂಡಿಸಿ ನೂರಕ್ಕೂ ಅಧಿಕ ಭೂರಹಿತ ಬಡ ದಲಿತ ಕುಟುಂಬಗಳು ಈ ತಿಂಗಳ ಪ್ರಾರಂಭದಿಂದ ಸರಕಾರಿ ಜಮೀನಲ್ಲಿ ಗುಡಿಸಲುಗಳನ್ನು ಕಟ್ಟಿ ವಾಸ್ತವ್ಯ ಹೂಡಿದ್ದಾರೆ. ಇಲ್ಲೀಗ 100ಕ್ಕೂ ಅಧಿಕ ಕುಟುಂಬಗಳು 90ಕ್ಕೂ ಅಧಿಕ ಗುಡಿಸಲುಗಳನ್ನು ನಿರ್ಮಿಸಿಕೊಂಡಿವೆ.

ಗೋಮಾಳವನ್ನು ಅತಿಕ್ರಮಿಸಿಕೊಂಡಿರುವ ಬಲಾಢ್ಯರನ್ನು ತೆರವುಗೊಳಿಸಿ, ಇಲ್ಲಿನ ನಿವೇಶನ ರಹಿತ ದಲಿತರಿಗೆ ಗ್ರಾಪಂ ನಿವೇಶನಗಳನ್ನು ಹಂಚಬೇಕು ಎಂಬುದು ಇವರ ಆಗ್ರಹವಾಗಿದೆ. ಊರಿನ ಗಣ್ಯರು ಸ್ಪಂತ ಭೂಮಿ ಹೊಂದಿದ್ದರೂ, ಗೋಮಾಳವನ್ನು ಅತಿಕ್ರಮಿಸಿಕೊಂಡು ಇದೀಗ ಅದನ್ನು ಸಕ್ರಮ ಗೊಳಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ನೂರಾರು ಮಂದಿ ದಲಿತರಿಗೆ ವಾಸಿಸಲು ಈಗಲೂ ಒಂದಿಂಚು ನೆಲವಿಲ್ಲ. ನಿವೇಶನಕ್ಕಾಗಿ ಗ್ರಾಪಂನಲ್ಲಿ ಸಲ್ಲಿಸಿದ ಅರ್ಜಿ ಧೂಳು ತಿನ್ನುತ್ತಿದೆ ಎಂದು ದಲಿತರು ದೂರಿದ್ದಾರೆ.

ಈ ದಲಿತ ಕುಟುಂಬಗಳ ಬೆಂಬಲಕ್ಕೆ ಬಂದಿರುವ ದಸಂಸ, ಗ್ರಾಮದಲ್ಲಿರುವ ವಸತಿ ರಹಿತ, ಭೂರಹಿತ ಬಡ ಕುಟುಂಬಗಳನ್ನು ಹುಡುಕಿ ನಿವೇಶನವನ್ನು ಸಂಬಂಧಪಟ್ಟ ಇಲಾಖೆಯೊಂದಿಗೆ ಸೇರಿ ಹಂಚಲು ಕ್ರಮಕೈಗೊಳ್ಳಬೇಕಿದ್ದ ಗ್ರಾಪಂ, ಬಡ ದಲಿತರು ಕಟ್ಟಿದ ಗುಡಿಸಲುಗಳನ್ನು ತೆರವು ಮಾಡಿಸಲು ಹೆಚ್ಚು ಆಸಕ್ತಿ ತೋರಿಸುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ ಎಂದು ಹೇಳಿದೆ.

ಮುದೂರಿನಲ್ಲಿ ಸರ್ವೆ ನಂಬ್ರ 63ರಲ್ಲಿ 362 ಎಕ್ರೆ ದಲಿತರಿಗೆ ಮೀಸಲಿಟ್ಟ ಭೂಮಿಯನ್ನು ಕಳೆದ ಹತ್ತು ವರ್ಷಗಳಿಂದ ಭೂಮಾಲಿಕರು ಅತಿಕ್ರಮಣ ಮಾಡಿಕೊಂಡಿದ್ದು, ಅತಿಕ್ರಮಣ ತೆರವುಗೊಳಿಸಿ ಬಡ ಜನತೆಗೆ ಭೂಮಿ ನೀಡುವಂತೆ ಕೇಳಿಕೊಂಡರೂ ಈ ತನಕ ಒತ್ತುವರಿ ತೆರವುಗೊಳಿಸದ ಕಂದಾಯ ಇಲಾಖೆ, ಮೊವಾಡಿಯಲ್ಲಿ ಬಡ ದಲಿತರು ವಾಸ್ತವ್ಯಕ್ಕೆ ಭೂಮಿಯಿಲ್ಲದೆ ತಮ್ಮ ವಾಸಕ್ಕೆ ಗುಡಿಸಲುಗಳನ್ನು ಕಟ್ಟಿಕೊಂಡಾಗ ಕಾನೂನು ಕ್ರಮ ಜರುಗಿಸಲು, ಬಡ ಕುಟುಂಬಗಳನ್ನು ತೆರವುಗೊಳಿಸಲು ಮುಂದಾಗುತ್ತಿರುವುದು ಯಾವ ನ್ಯಾಯ ಎಂದು ಅದು ಪ್ರಶ್ನಿಸಿದೆ.

ಮೊವಾಡಿಯಲ್ಲಿರುವ ಬಡ ದಲಿತರಿಗೆ ಸಂಬಂಧಪಟ್ಟಂತೆ ಕಂದಾಯ ಇಲಾಖೆ ಈ ಮೊದಲೇ ಭೂರಹಿತರನ್ನು ಗುರುತಿಸಿ ಭೂಮಿ ನೀಡಬೇಕಿತ್ತು. ಆದರೆ ಇಲಾಖೆಯ ನಿರ್ಲಕ್ಷದಿಂದ ಭೂರಹಿತ ಬಡ ದಲಿತ ಕುಟುಂಬಗಳು ತಮ್ಮ ಬದುಕಿಗಾಗಿ ಗುಡಿಸಲು ಕಟ್ಟಿಕೊಂಡಿದ್ದಾರೆ. ಈ ಬಡಕುಟುಂಬಗಳಿಗೆ ನಿವೇಶನ ಮಂಜೂರು ಮಾಡಲು ಕ್ರಮಕೈಗೊಳ್ಳುವ ಬದಲು ಅವುಗಳನ್ನು ತೆರವುಗೊಳಿಸುವ ಬಗ್ಗೆಯೇ ಹೆಚ್ಚು ಆಸಕ್ತಿ ತೋರುತ್ತಿರುವುದು ದುರದೃಷ್ಟಕರ.
ಭೂಮಾಲಕರ ಬಗ್ಗೆ ಚಕಾರವೆತ್ತದ ಅಧಿಕಾರಿಗಳು ಬಡ ದಲಿತರ ಮೇಲೆ ಕಾನೂನು ದರ್ಪ ತೋರಿಸಲು ಮುಂದಾದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಉಗ್ರ ಹೋರಾಟ ನಡೆಸುವುದು ಎಂದು ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು, ಮಂಜುನಾಥ ಗಿಳಿಯಾರು ಕುಂದಾಪುರ ಹಾಗೂ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X