Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಲಭೆಯಿಂದ ಆತಂಕಕ್ಕೊಳಗಾದ ಹೊಸೂರಿನ...

ಗಲಭೆಯಿಂದ ಆತಂಕಕ್ಕೊಳಗಾದ ಹೊಸೂರಿನ ಕನ್ನಡಿಗ ಉದ್ಯೋಗಿಗಳು

ಮಂಜುನಾಥ ದಾಸನಪುರಮಂಜುನಾಥ ದಾಸನಪುರ15 Sept 2016 7:55 PM IST
share
ಗಲಭೆಯಿಂದ ಆತಂಕಕ್ಕೊಳಗಾದ ಹೊಸೂರಿನ ಕನ್ನಡಿಗ ಉದ್ಯೋಗಿಗಳು

ಬೆಂಗಳೂರು, ಸೆ.15: ಕಾವೇರಿ ವಿವಾದವನ್ನು ಮುಂದಿಟ್ಟು ಕೆಲವು ದುಷ್ಕರ್ಮಿಗಳು ಬೆಂಗಳೂರಿನಲ್ಲಿ ಆಗಾಗ ನಡೆಸುತ್ತಿರುವ ಹಿಂಸಾಚಾರದ ಪರಿಣಾಮ ಹೊಸೂರು ಗಡಿಭಾಗದಲ್ಲಿರುವ ಸಾವಿರಾರು ಮಂದಿ ಕನ್ನಡಿಗರು ಆತಂಕವನ್ನು ಎದುರಿಸುತ್ತಿದ್ದಾರೆ.

ಹೊಸೂರು ಗಡಿ ಭಾಗದಲ್ಲಿ ಟಿವಿಎಸ್, ಲೈಲ್ಯಾಂಡ್, ಟೈಟನ್ ಸೇರಿದಂತೆ ಹತ್ತಾರು ಕಂಪೆನಿಗಳಿದ್ದು, ಇವು ತಮಿಳುನಾಡು ಪ್ರದೇಶಕ್ಕೆ ಒಳಪಟ್ಟಿವೆ. ಈ ಕಂಪೆನಿಗಳಲ್ಲಿ ಸಾವಿರಾರು ಮಂದಿ ಉದ್ಯೊಗಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಕೆಲವು ದುಷ್ಕರ್ಮಿಗಳು ಕಾವೇರಿ ಪ್ರಕರಣವನ್ನು ಮುಂದಿಟ್ಟುಕೊಂಡು ಆಗಾಗ ಬೆಂಗಳೂರಿನಲ್ಲಿ ಗಲಭೆ ನಡೆಸುತ್ತಿದ್ದಾರೆ. ಇದರ ಪರಿಣಾಮ ಗಡಿ ಭಾಗದಲ್ಲಿರುವ ರಾಜ್ಯದ ಉದ್ಯೋಗಿಗಳು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಬೆಳಗಾವಿ, ಬಿಜಾಪುರ, ಗುಲ್ಬರ್ಗಾ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಿಂದಲೂ ಸಾವಿರಾರು ಮಂದಿ ಯುವಕರು ಉದ್ಯೋಗವನ್ನರಸಿ ಬಂದವರು ಹೊಸೂರು ಗಡಿ ಭಾಗದಲ್ಲಿ ನೆಲೆಸಿದ್ದಾರೆ. ಕೇವಲ ಉದ್ಯೋಗಕ್ಕಾಗಿ ತಮ್ಮ ಊರುಗಳನ್ನು ತೊರೆದು ಬಂದಿರುವ ಈ ಯುವಕರು, ಕಾವೇರಿ ವಿಷಯದಲ್ಲಿ ಬೆಂಗಳೂರಿನಲ್ಲಿ ನಡೆದ ಗಲಭೆಗಳಿಂದ ಆತಂಕಕ್ಕೆ ಒಳಗಾಗಿದ್ದಾರೆ.

 ಬಂದ್ ಮಾಡುವುದು, ವಾಹನಗಳಿಗೆ ಬೆಂಕಿ ಇಡುವುದು, ಬಸ್‌ಗಳಿಗೆ ಕಲ್ಲು ತೂರುವುದು ನಾಡು, ನುಡಿಯ ರಕ್ಷಣೆಯೆ. ಬೆಂಗಳೂರಿನಲ್ಲಿ ತಮಿಳುನಾಡಿನ ವಾಹನಗಳಿಗೆ ಬೆಂಕಿ ಇಟ್ಟರೆ, ತಮಿಳುನಾಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ನೆಮ್ಮದಿಯಾಗಿ ಬದುಕಲು ಸಾಧ್ಯವೆ. ಇಷ್ಟು ಕನಿಷ್ಠ ಪ್ರಜ್ಞೆ ಇಲ್ಲದವರು ನಾಡಿನ ರಕ್ಷಣೆ ಹೇಗೆ ಮಾಡುತ್ತಾರೆ ಎಂದು ಟಿವಿಎಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಹುಬ್ಬಳ್ಳಿ ಮೂಲದ ರಮೇಶ್ ಪ್ರಶ್ನಿಸುತ್ತಾರೆ.

ಐಟಿಐ, ಬಿಕಾಂ, ಬಿಸ್ಸಿ ಪದವಿಗಳನ್ನು ಗಳಿಸಿದ್ದರೂ ಉದ್ಯೋಗಕ್ಕಾಗಿ ದೂರದ ಬಿಜಾಪುರದಿಂದ ಇಲ್ಲಿಗೆ ಬರಬೇಕಾದ ಪರಿಸ್ಥಿತಿ ಬಂದಿದೆ. ಕನ್ನಡ ನಾಡಿನಲ್ಲಿ ತಾಂಡವವಾಡುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕನ್ನಡ ಪರ ಸಂಘಟನೆಗಳು ಯಾವ ಕಾರ್ಯಯೋಜನೆಗಳನ್ನು ರೂಪಿಸಿಕೊಂಡಿವೆ ಎಂಬುದು ಬಹಿರಂಗ ಪಡಿಸಲಿ ಎಂದು ಬಿಜಾಪುರ ಮೂಲದ ದಶರಥ್ ಪ್ರಶ್ನಿಸುತ್ತಾರೆ.

ನಾವಿರುವ ಸ್ಥಳದಲ್ಲಿಯೆ ನಮಗೆ ಕೆಲಸ ಸಿಕ್ಕಿದ್ದರೆ ತಂದೆ, ತಾಯಿ, ಬಂಧು ಬಳಗವನ್ನು ಬಿಟ್ಟು ಇಲ್ಲಿಯವರೆಗೂ ಬರಬೇಕಾಗುತ್ತಿರಲಿಲ್ಲ. ಆದರೆ, ನಮ್ಮ ತಾಲೂಕಿನಲ್ಲಿ ಯಾವುದೆ ಕಂಪೆನಿಗಳಿಲ್ಲದ ಕಾರಣ ಹೊಸೂರು ಗಡಿ ಭಾಗಕ್ಕೆ ಬಂದು ಕೆಲಸ ಮಾಡುತ್ತಿದ್ದೇನೆ. ಆದರೆ, ಕೆಲವು ದುಷ್ಕರ್ಮಿಗಳು ಬೆಂಗಳೂರಿನಲ್ಲಿ ಗಲಭೆ ಮಾಡಿದ್ದರಿಂದ ನಮಗೆ ಇಲ್ಲಿ ಆತಂಕವಾಗಿದೆ.

-ಶಿವಕುಮಾರ್ ಟಿವಿಎಸ್ ಉದ್ಯೋಗಿ(ಹುಬ್ಬಳ್ಳಿ)

ಕನ್ನಡದ ಹೆಸರಿನಲ್ಲಿ ಕೆಲವು ದುಷ್ಕರ್ಮಿಗಳು ಹೊಟ್ಟೆ, ಬಟ್ಟೆಯ ಉದ್ಯೋಗಕ್ಕೂ ಕಲ್ಲು ಹಾಕಲು ಹೊರಟಿದ್ದಾರೆ. ಒಂದು ವೇಳೆ ತಮಿಳುನಾಡಿನ ಕಂಪೆನಿಗಳು ನಮ್ಮನ್ನು ಕೆಲಸದಿಂದ ಹೊರಕ್ಕೆ ದಬ್ಬಿದರೆ ನಮಗೆ ಯಾರ ಕೆಲಸ ಕೊಡುತ್ತಾರೆ?

-ಮಹೇಶ್ ಟಿವಿಎಸ್ ಉದ್ಯೋಗಿ(ಹುಬ್ಬಳ್ಳಿ)

share
ಮಂಜುನಾಥ ದಾಸನಪುರ
ಮಂಜುನಾಥ ದಾಸನಪುರ
Next Story
X