Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗರ್ಭಿಣಿಯರಿಗೆ ಉಚಿತ ತಪಾಸಣೆ: ...

ಗರ್ಭಿಣಿಯರಿಗೆ ಉಚಿತ ತಪಾಸಣೆ: ಜಿಲ್ಲಾಧಿಕಾರಿ

ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ15 Sept 2016 10:14 PM IST
share
ಗರ್ಭಿಣಿಯರಿಗೆ ಉಚಿತ ತಪಾಸಣೆ:  ಜಿಲ್ಲಾಧಿಕಾರಿ

 ದಾವಣಗೆರೆ, ಸೆ.15: ಗರ್ಭಿಣಿಯರಿಗೆ ಪ್ರತೀ ತಿಂಗಳ 9ರಂದು ಉಚಿತ ತಪಾಸಣೆ, ಚಿಕಿತ್ಸೆ ಮತ್ತು ಅಲ್ಟ್ರಾಸೌಂಡ್ ಸ್ಕಾನಿಂಗ್ ನಡೆಸಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳಲ್ಲಿ ಖಾಸಗಿ ವಲಯದ ಸಹಭಾಗಿತ್ವ ಮತ್ತು ಪಿಸಿ ಮತ್ತು ಪಿಎನ್‌ಡಿಟಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ಆರ್‌ಸಿಎಚ್ ಅಧಿಕಾರಿ ಡಾ. ಶಿವಕುಮಾರ್ ಮಾತನಾಡಿ, ಪ್ರಧಾನ ಮಂತ್ರಿ ಸುರಕ್ಷಾ ಅಭಿಯಾನ ಕಾರ್ಯಕ್ರಮದಡಿ ಗರ್ಭಿಣಿಯರಿಗೆ ಪ್ರತೀ ತಿಂಗಳ 9ರಂದು ಉಚಿತ ಪರೀಕ್ಷೆ, ಚಿಕಿತ್ಸೆ ಮತ್ತು ಸ್ಕಾನಿಂಗ್ ಮಾಡಲಾಗುವುದು. ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿರುವ ಸ್ಕಾನಿಂಗ್ ಮೆಷಿನ್‌ಗಳಿಂದ ಎಲ್ಲರಿಗೂ ಸೌಲಭ್ಯ ನೀಡುವುದು ಕಷ್ಟವಾಗುವುದರಿಂದ ಖಾಸಗಿ ನರ್ಸಿಂಗ್ ಹೋಂಗಳು ಅಂದು ಉಚಿತವಾಗಿ ಗರ್ಭಿಣಿಯರಿಗೆ ಪರೀಕ್ಷೆಗಳು ಮತ್ತು ಅಲ್ಟ್ರಾಸೌಂಡ್ ಸ್ಕಾನಿಂಗ್ ಸೌಲಭ್ಯ ನೀಡಿದಲ್ಲಿ ತುಂಬಾ ಅನುಕೂಲ ಎಂದು ಚರ್ಚೆಯ ಬಳಿಕ ಸಭೆೆಯು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿತು.

ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಬಯೋಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟನ್ನು ಪ್ರಸ್ತುತ ಶಿವಮೊಗ್ಗದ ಸಂಸ್ಥೆಯಿಂದ ನಿಯಮಾನುಸಾರ ನಿರ್ವಹಿಸಲಾಗುತ್ತಿದ್ದು, ಇದು ತುಂಬಾ ದುಬಾರಿಯಾಗಿದೆ. ಮಾಲಿನ್ಯ ಮಂಡಳಿಯೊಂದಿಗೆ ಚರ್ಚಿಸಿ ದಾವಣಗೆರೆಯಲ್ಲೇ ಸ್ಥಳ ದೊರೆತು ಘಟಕ ಸ್ಥಾಪಿಸಿದಲ್ಲಿ ಅನುಕೂಲವಾಗುತ್ತದೆ. ಬಾಪೂಜಿ ಸಂಸ್ಥೆಯವರು ಈ ಬಗ್ಗೆ ಯೋಚಿಸಬಹುದೆಂದು ಐಎಂಎ ಅಧ್ಯಕ್ಷ ಡಾ. ನರೇಂದ್ರ ಸಲಹೆ ನೀಡಿದರು.

ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಬಾಪೂಜಿ ಸಂಸ್ಥೆಯ ಅಧಿಕಾರಿಗಳೊಂದಿಗೆ ಈ ಕುರಿತು ಮಾತನಾಡುತ್ತೇನೆಂದರು.

ಎಚ್‌ಎಂಐಎಸ್ ವರದಿಯನ್ನು ಖಾಸಗಿಯವರು ನೀಡುತ್ತಿಲ್ಲವೆಂಬ ಪ್ರಸ್ತಾಪ ಬಂದಾಗ, ಖಾಸಗಿ ನರ್ಸಿಂಗ್ ಹೋಂನವರು ನಮಗಿನ್ನೂ ಅದನ್ನು ನೀಡಿಲ್ಲ. ಒದಗಿಸಿದ ನಂತರ ನೀಡುತ್ತೇವೆ. ಜನನ ಮರಣ ನೋಂದಣಿ ನಿಯಮಾನುಸಾರ ಮಾಡುತ್ತಿದ್ದೇವೆ ಎಂದರು. ಆರ್‌ಸಿಎಚ್ ಅಧಿಕಾರಿ ಎಚ್ಎಂಐಎಸ್ ನಮೂನೆ ಎಲ್ಲರಿಗೂ ನೀಡಿ ಪ್ರತೀ ತಿಂಗಳ ಅಂತ್ಯದಲ್ಲಿ ತಾಲೂಕು ವೈದ್ಯಾಧಿಕಾರಿಗೆ ನೀಡಬೇಕೆಂದರು.

ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ಒಂದು ದಿನ ನಿಗದಿಪಡಿಸಿ ಎಲ್ಲ ನರ್ಸಿಂಗ್ ಹೋಂಗಳಲ್ಲಿ ಇದಕ್ಕೆಂದೇ ನಿಯೋಜಿಸಿದ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಿ ಕೆಲಸ ನಿರ್ವಹಿಸುವಂತೆ ತಿಳಿಸಿದರು. ಖಾಸಗಿ ಆಸ್ಪತ್ರೆಗಳಿಗೆ ಬರುವ ಹೈಪರ್‌ಟೆನ್ಶನ್, ಡಯಾಬಿಟಿಸ್, ಕ್ಯಾನ್ಸರ್‌ನಂತಹ ಹರಡದೇ ಇರುವ ರೋಗಗಳ ಅಂಕಿಅಂಶ ನೀಡಿದಲ್ಲಿ ಸರಕಾರದ ವತಿಯಿಂದ ಅಂತಹ ಪ್ರತಿ ರೋಗಿಗೆ ಎನ್ಸಿಡಿ ರೋಗಿ ಕಾರ್ಡ್ ಎನ್ನುವ ಒಂದು ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿದವರಿಗೆ ಉಚಿತ ಔಷಧ ನೀಡಲಾಗುವುದು. ಆದ್ದರಿಂದ ಖಾಸಗಿ ಕ್ಲಿನಿಕ್ ಮತ್ತು ನರ್ಸಿಂಗ್ ಹೋಂಗಳು ಇಂತಹ ರೋಗಿಗಳ ಅಂಕಿ ಅಂಶ ತಪ್ಪದೇ ಪಿಎಚ್‌ಸಿ, ಸಿಎಚ್‌ಸಿ ಮತ್ತು ನಗರ ಆರೋಗ್ಯ ಕೇಂದ್ರಗಳಿಗೆ ನೀಡಬೇಕೆಂದು ಡಿಪಿಎಂಒ, ಡಿಎಚ್‌ಒ ತಿಳಿಸಿದಾಗ, ಖಾಸಗಿ ಆರೋಗ್ಯ ಸಂಸ್ಥೆಯವರು ನೀಡುವುದಾಗಿ ತಿಳಿಸಿದರು. ತಾಯಿ ಮತ್ತು ಶಿಶು ಮರಣದ ಆಡಿಟ್, ಎಚ್‌ಎಂಐಎಸ್, ಎಂಸಿಟಿಎಸ್, ತಾಯಿಕಾರ್ಡ್, ಎಂಟಿಪಿ, ಎಎನ್‌ಸಿ, ಕಾಪರ್-ಟಿ, ಓಟಿ ವಹಿ, ರೆಪರಲ್ ವಹಿಗಳು ಸೇರಿದಂತೆ ನಿರ್ವಹಿಸಲೇಬೇಕಾದ ಅತಿಮುಖ್ಯ ವರದಿಗಳನ್ನು ಖಾಸಗಿ ನರ್ಸಿಂಗ್ ಹೋಂಗಳು ನಿರ್ವಹಿಸಬೇಕು. ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಸರಕಾರಿ ಸಂಸ್ಥೆ ಮತ್ತು ಖಾಸಗಿಯವರ ಸಹಭಾಗಿತ್ವದೊಂದಿಗೆ ಕೆಲಸ ಮಾಡುವುದರೊಂದಿಗೆ ಸಹಕರಿಸಬೇಕೆಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಎಸ್.ತ್ರಿಪುಲಾಂಭ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಎಚ್.ಡಿ. ನೀಲಾಂಬಿಕೆ, ಐಎಂಎ ಅಧ್ಯಕ್ಷ ಡಾ. ನರೇಂದ್ರ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X