ಹೈಕಾಡಿ: ತೋಡಿಗೆ ಬಿದ್ದು ಮೃತ್ಯು
ಶಂಕರನಾರಾಯಣ, ಸೆ.15: ಹಿಲಿಯಾಣ ಗ್ರಾಮದ ಹೈಕಾಡಿ ಎಂಬಲ್ಲಿ ಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮೃತರನ್ನು ಹೈಕಾಡಿಯ ಶೇಖರ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪದ ಕೃಷಿ ಭೂಮಿಯನ್ನು ನೋಡಲು ಹೋಗಿದ್ದು, ಅಲ್ಲಿ ನೀರಿನ ತೋಡಿಗೆ ಹಾಕಿದ ಸಂಕವನ್ನು ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





