Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆದೇಶ ಪಾಲಿಸದಿದ್ದರೆ ಅಂತಿಮ ತೀರ್ಪು...

ಆದೇಶ ಪಾಲಿಸದಿದ್ದರೆ ಅಂತಿಮ ತೀರ್ಪು ನೀಡುವ ಸಂದರ್ಭ ಹಿನ್ನಡೆ: ಕಾಗೋಡು

ಕಾವೇರಿ ನದಿನೀರು ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ16 Sept 2016 12:07 AM IST
share
ಆದೇಶ ಪಾಲಿಸದಿದ್ದರೆ ಅಂತಿಮ ತೀರ್ಪು ನೀಡುವ ಸಂದರ್ಭ ಹಿನ್ನಡೆ: ಕಾಗೋಡು

ಉಡುಪಿ, ಸೆ.15: ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು. ಇಲ್ಲದಿದ್ದರೆ ಅಂತಿಮ ತೀರ್ಪು ನೀಡುವ ಸಂದರ್ಭ ರಾಜ್ಯಕ್ಕೆ ಹಿನ್ನಡೆಯಾಗಬಹುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಿಮನ್ ಹಿರಿಯ ಅನುಭವಸ್ಥ ವಕೀಲ. ಅವರ ಮಾತು ಕೇಳದಿರಲು ಸಾಧ್ಯವಿಲ್ಲ. ಈ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಪ್ರಧಾನಿ ಏನೂ ಮಾಡಲು ಸಾಧ್ಯವಿಲ್ಲ ಎಂದರು.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸೆ.28ರವರೆಗೆ ಕಾವೇರಿ ನೀರು ತಮಿಳುನಾಡಿಗೆ ಬಿಡಲೇಬೇಕಾಗಿದೆ. ಈ ಕುರಿತ ಅಂತಿಮ ತೀರ್ಮಾನ ಈ ತಿಂಗಳಲ್ಲಿ ಆಗುತ್ತದೆ. ತೀರ್ಮಾನದ ಪ್ರಕಾರ ನೀರು ಬಿಡುವ ಪ್ರಮಾಣ ಕಡಿಮೆ ಅಥವಾ ಹೆಚ್ಚಾಗಹುದು. ಆದರೆ ನಮಗೆ ನೀರಿನ ಕೊರತೆಯ ಸಮಸ್ಯೆಯಿದೆ. ಇಂತಹ ಸ್ಥಿತಿ ಎರಡು ಬಾರಿ ಎದುರಾಗಿತ್ತು. ಆದ್ದರಿಂದ ಈ ಕುರಿತು ಜಿಜ್ಞಾಸೆ ಮೂಡಿದೆ ಎಂದವರು ತಿಳಿಸಿದರು.

ಕೇಂದ್ರ ಸರಕಾರ ಈ ಕುರಿತು ಮಧ್ಯಪ್ರವೇಶಿಸು ವಂತೆ ಈಗಾಗಲೇ ಮುಖ್ಯಮಂತ್ರಿ ಒತ್ತಾಯ ಮಾಡಿ ದ್ದಾರೆ. ಮುಂದೆ ಸಾಧ್ಯವಾದರೆ ಅವರು ದಿಲ್ಲಿಗೆ ತೆರಳ ಲಿದ್ದಾರೆ ಎಂದು ಸಚಿವರು ಹೇಳಿದರು.

94ಸಿಸಿ ಅವಧಿ ವಿಸ್ತರಣೆ
ಗ್ರಾಮೀಣ ಪ್ರದೇಶದಲ್ಲಿ 94ಸಿ ಹಾಗೂ ನಗರ ಪ್ರದೇಶದಲ್ಲಿ 94ಸಿಸಿ ಕಾಯ್ದೆಯಡಿ ಅರ್ಜಿ ಸ್ವೀಕರಿ ಸುವ ಪ್ರಕ್ರಿಯೆ ಆರಂಭವಾಗಿದ್ದು, 94ಸಿಸಿಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಎರಡು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಅದೇ ರೀತಿ 94ಸಿಯಡಿ ಅರ್ಜಿ ಸಲ್ಲಿಸಲು ಅ.27 ಕೊನೆಯ ದಿನವಾಗಿದೆ ಎಂದು ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ಬಗರ್‌ಹುಕುಂಗೆ ಸಂಬಂಧಿಸಿ ಫಾರ್ಮ್ ನಂಬರ್ 50 ಮತ್ತು 53ರಲ್ಲಿ ಅರ್ಜಿ ಹಾಕಿದವರಿಗೆ ಕುಮ್ಕಿ ಭೂಮಿಯನ್ನು ಮಂಜೂರು ಮಾಡಲು ರಾಜ್ಯ ಸರಕಾರ ಆದೇಶ ನೀಡಿದೆ. 9/11 ಕಾಯ್ದೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಜನರಿಗೆ ತೊಂದರೆಯಾಗದಂತೆ ಜಾರಿಗೊಳಿಸಲಾಗುವುದು ಎಂದರು.

ಗೋಮಾಳ ಭೂಮಿ ಕಡಿಮೆಯಿರುವುದರಿಂದ ಜಾಗ ಮಂಜೂರು ಮಾಡದಂತೆ ತಡೆಹಿಡಿದು ಸರಕಾರ ಸುತ್ತೋಲೆ ಹೊರಡಿಸಿತ್ತು. ಇದೀಗ ಈ ಭೂಮಿಯಲ್ಲಿ ವಾಸವಾಗಿರುವವರಿಗೆ ಭೂಮಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಜಿಲ್ಲೆಯಲ್ಲಿ ಪೊಡಿ ಮುಕ್ತಗ್ರಾಮ ಕಾರ್ಯಕ್ರಮ ಕೂಡ ಉತ್ತಮವಾಗಿ ನಡೆಯುತ್ತಿದ್ದು, ಗ್ರಾಮದ ಎಲ್ಲ ವರ್ಗದ ಜಾಮೀನನ್ನು ಪೊಡಿ ಮುಕ್ತ ಮಾಡಲು ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಇನ್ನಷ್ಟು ಯಶಸ್ವಿಯಾಗಿ ನೆರವೇರಿಸಲು ಸರಕಾರ ಆದೇಶ ನೀಡಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಪಂ ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X