Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಜ್ದೂರ್ ಸಂಘಟನೆಯನ್ನು ನೋಡುವ ರೀತಿಯನ್ನು...

ಮಜ್ದೂರ್ ಸಂಘಟನೆಯನ್ನು ನೋಡುವ ರೀತಿಯನ್ನು ಬದಲಾಯಿಸಿಕೊಳ್ಳಿ: ಪಿ.ಕೇಶವ

ಕೆಎಸ್ಸಾರ್ಟಿಸಿ ಮಜ್ದೂರ್ ಸಂಘದ ಪ್ರಥಮ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ16 Sept 2016 6:15 PM IST
share
ಮಜ್ದೂರ್ ಸಂಘಟನೆಯನ್ನು ನೋಡುವ ರೀತಿಯನ್ನು ಬದಲಾಯಿಸಿಕೊಳ್ಳಿ: ಪಿ.ಕೇಶವ

ಪುತ್ತೂರು, ಸೆ.16: ಈ ಸಂಘಟನೆಯಡಿ ದುಡಿಯುವ ಎಲ್ಲಾ ಕಾರ್ಮಿಕ ವರ್ಗದವರು ಸಂಘಟನೆಯನ್ನು ನೋಡುವ ರೀತಿಯನ್ನು ಬದಲಾಯಿಸಿ ಸಂಘಟನೆಯ ಎಲ್ಲಾ ಹೋರಾಟ, ಕಾರ್ಯಕ್ರಮಗಳಿಗೆ ಬೆಂಬಲ ನೀಡಬೇಕಾಗಿದೆ ಎಂದು ದಲಿತ ಸಂಘರ್ಷ ರಾಜ್ಯ ಸಮಿತಿ ಸದಸ್ಯ ಪಿ.ಕೇಶವ ತಿಳಿಸಿದ್ದಾರೆ.

ಅವರು ಶುಕ್ರವಾರ ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದ ಕಲ್ಯಾಣ ಮಂಟಪದಲ್ಲಿ ಕೆಎಸ್ಸಾರ್ಟಿಸಿ ಮಜ್ದೂರ್ ಸಂಘ ಪುತ್ತೂರು ವಿಭಾಗದ ಪ್ರಥಮ ಮಹಾಸಭೆ ಹಾಗೂ ಕಾರ್ಮಿಕರ ಸ್ನೇಹಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೆಎಸ್ಸಾರ್ಟಿಸಿ ಮಜ್ದೂರ್ ಸಂಘಟನೆಗೆ ಒಂದು ಬದ್ಧತೆಯಿದ್ದು, ಶಿಸ್ತಿನ ಸಂಘಟನೆಯಡಿಯಲ್ಲಿ ಕಾರ್ಯಾಚರಿಸುತ್ತಿರುವ ಸಂಘಟನೆಯಾಗಿದೆ. ನಷ್ಟದ ಅಂಚಿನಲ್ಲಿದ್ದ ಕೆಎಸ್ಸಾರ್ಟಿಸಿಯಂತಹ ಉತ್ತಮ ಸಂಸ್ಥೆಯನ್ನು ಬಿಎಂಎಸ್ ಸಂಘಟನೆ ಮೂಲಕ ಉಳಿಸಿಕೊಂಡಿದೆ ಎಂದರು.

ಬಿಎಂಎಸ್ ಆಟೊ ಚಾಲಕ-ಮಾಲಕರ ಸಂಘದ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಮಾತನಾಡಿ, ಕಾರ್ಮಿಕ ವಿರೋಧ ನೀತಿ ಎಂಬುದು ಸುಳ್ಳು. ಕಾರ್ಮಿಕ ವಿರೋಧಿ ನೀತಿಯನ್ನು ಸರಕಾರ ಮಾಡಿಲ್ಲ. ವಿವಿಧ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸರಕಾರ ಕಾರ್ಮಿಕರ ಪರವಾಗಿದೆ. ಕಾರ್ಮಿಕರ ಹೋರಾಟ ಫಲವಾಗಿ ಸರಕಾರ ವೇತನವನ್ನು ಶೇ.12 ರಷ್ಟು ಹೆಚ್ಚಿಸಿದೆ. ಇದನ್ನು ಶೇ.20 ಕ್ಕೆ ಏರಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ ಅಧ್ಯಕ್ಷ ಹುಸೈನ್ ದಾರಿಮಿ ಮಾತನಾಡಿ ಈ ದೇಶದಲ್ಲಿ ಕಡಿಮೆ ದರದಲ್ಲಿ ಪ್ರಯಾಣಿಸಲು ಅನುಕೂಲವಿರುವ ಸಂಸ್ಥೆ ಇದ್ದರೆ ಅದು ಕೆಎಸ್ಸಾರ್ಟಿಸಿ. ಇದು ಅಧಿಕಾರಿಗಳ ವರ್ಗದವರ ಪ್ರಾಮಾಣಿಕ ಪ್ರಯತ್ನ ಹಾಗೂ ಕಾರ್ಮಿಕ ವರ್ಗದ ಶ್ರಮದ ಪಲವಾಗಿದೆ. ಕಾರ್ಮಿಕರನ್ನು ಬಿಟ್ಟು ಮಾಲಕರಿಲ್ಲ, ಮಾಲಕರನ್ನು ಬಿಟ್ಟು ಕಾರ್ಮಿಕರಿಲ್ಲ ಎಂಬ ಧ್ಯೇಯವನ್ನು ಕೆಎಸ್ಸಾರ್ಟಿಸಿ ಮಜ್ದೂರ್ ಸಂಘ ಅಳವಡಿಸಿಕೊಂಡು ದೇಶದ ಜನತೆಗೆ ಸೇವೆ ನೀಡುತ್ತಿದೆ ಎಂದರು.

ಸಂತ ಫಿಲೋಮಿನಾ ಕಾಲೇಜಿನ ಮುಖ್ಯ ರೆ.ಫಾ.ಅಂಥೋನಿ ಪ್ರಕಾಶ್ ಮೊಂತೆರೊ ಮಾತನಾಡಿ, ಕೆಎಸ್ಸಾರ್ಟಿಸಿ ಎಲ್ಲಾ ಧರ್ಮದ ಜನರಿಗೆ ಸೇವೆ ನೀಡುವ ಸಂಸ್ಥೆಯಾಗಿದೆ. ಅದರಲ್ಲೂ ವಿದ್ಯಾರ್ಥಿಗಳ ಜತೆ ಅವಿನಾಭಾವ ಸಂಬಂಧವನ್ನು ಹೊಂದಿದ್ದು, ಉತ್ತಮ ಸೇವೆಯನ್ನು ನೀಡುತ್ತಿದೆ ಎಂದರು.

ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಡಾ.ರೋಹಿಣಾಕ್ಷ ಶಿರ್ಲಾಲು ಮಾತನಾಡಿ, ಕಾರ್ಮಿಕ ವರ್ಗ ದೇಶದ ಶಕ್ತಿ, ಉಸಿರು. ಕಾರ್ಮಿಕ ವರ್ಗದಲ್ಲಿ ರಾಷ್ಟ್ರ, ದೇಶದ, ಸಂಸ್ಥೆಯ ಹಿತವಿದೆ. ರಾತ್ರಿ ಹಗಲೆನ್ನದೆ ಸಮಾಜದ ಎಲ್ಲಾ ಸ್ತರದ ಪ್ರಯಾಣಿಕರನ್ನು ಒಂದೂರಿಂದ ಇನ್ನೊಂದೆ ಸಾಗಿಸುವ ಕೆಎಸ್ಸಾರ್ಟಿಸಿ ಸಂಸ್ಥೆ ಕೇವಲ ಓರ್ವ ವ್ಯಕ್ತಿಗೋಸ್ಕರ ಉಳಿಯದೆ ಸಾಮಾನ್ಯ ವರ್ಗದ ಜನರ ಹಿತಕ್ಕಾಗಿ ಉಳಿಯಬೇಕಾಗಿದೆ ಎಂದರು.

ಕೆಎಸ್ಸಾರ್ಟಿಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗದ ಗೌರವಾಧ್ಯಕ್ಷೆ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಪಾಲಿಟೆಕ್ನಿಕ್ ಪ್ರಾಂಶುಪಾಲ ಗೋಪಿನಾಥ ಶೆಟ್ಟಿ ಎಂ., ಸಂಘದ ಅಧ್ಯಕ್ಷ ಗಿರೀಶ ಮಳಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ದುಡಿದ ವಲೇರಿಯನ್ ಡಯಾಸ್, ಆದಂ ಹೆಂತಾರ್ ಹಾಗೂ ಬಾಸ್ಕರ ಬೊಳುವಾರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಎಸ್ಸಾರ್ಟಿಸಿ ಮಜ್ದೂರು ಸಂಘದ ಪುತ್ತೂರು ವಿಭಾಗದ ನೂತನ ಪದಾಧಿಕಾರಿಗಳಿಗೆ ಸಂಘದ ಸಂಕೇತದ ಬಾವುಟವನ್ನು ನೀಡುವ ಮೂಲಕ ಜವಾಬ್ದಾರಿ ನೀಡಲಾಯಿತು.

ಸಂಘಟನಾ ಕಾರ್ಯದರ್ಶಿ ಜಿ.ವಿ.ಭಟ್ ಪದಾಧಿಕಾರಿಗಳ ಪಟ್ಟಿಯನ್ನು ಓದಿದರು. ಸಂಘದ ಪ್ರಧಾನ ಕಾರ್ಯದರ್ಶಿ ಸಂಜೀವ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ವಿಭಾಗದ ಉಪಾಧ್ಯಕ್ಷ ಶೇಷಪ್ಪ ಮೂಲ್ಯ ಸ್ವಾಗತಿಸಿದರು. ಸದಸ್ಯ ಸುಬ್ರಹ್ಮಣ್ಯ ಭಟ್ ವಂದಿಸಿದರು. ರಮೇಶ್ ಶೆಟ್ಟಿ ಕೆ. ಮತ್ತು ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X