Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವ್ಯಕ್ತಿಯ ಕುತ್ತಿಗೆಯಿಂದ ಹೋಗಿ...

ವ್ಯಕ್ತಿಯ ಕುತ್ತಿಗೆಯಿಂದ ಹೋಗಿ ಬೆನ್ನಲ್ಲಿ ಹೊರಬಂದ 3 ಅಡಿ ಉದ್ದದ ಬಿದಿರು ! ಬಳಿಕ ಏನಾಯಿತು ನೋಡಿ

ವಾರ್ತಾಭಾರತಿವಾರ್ತಾಭಾರತಿ16 Sept 2016 7:07 PM IST
share
ವ್ಯಕ್ತಿಯ ಕುತ್ತಿಗೆಯಿಂದ ಹೋಗಿ ಬೆನ್ನಲ್ಲಿ ಹೊರಬಂದ 3 ಅಡಿ ಉದ್ದದ ಬಿದಿರು ! ಬಳಿಕ ಏನಾಯಿತು ನೋಡಿ

ಕೋಲ್ಕತಾ,ಸೆ.16: ಮೂರಡಿ ಉದ್ದದ ಬಿದಿರು ಕುತ್ತಿಗೆಯ ಎಡಭಾಗದಿಂದ ಎದೆಯೊಳಗೆ ಹೊಕ್ಕಿ ಬೆನ್ನಿನಲ್ಲಿ ಹೊರಗೆ ಬಂದಿದ್ದ ಬಸ್ ಚಾಲಕ ಲಕ್ಮೀಕಾಂತ ಘೋಷ್(50)ಗೆ ಇಲ್ಲಿಯ ಸರಕಾರಿ ಸ್ವಾಮ್ಯದ ಎಸ್‌ಎಸ್‌ಕೆಎಂ ಆಸ್ಪತ್ರೆಯ ವೈದ್ಯರು ಮೂರು ಗಂಟೆಗಳ ಸುದೀರ್ಘ ಕಾಲ ಜಟಿಲ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಆತನ ಪ್ರಾಣವನ್ನು ಉಳಿಸಿದ್ದಾರೆ. ಗುರುವಾರ ಈ ಶಸ್ತ್ರಚಿಕಿತ್ಸೆ ನಡೆದಿದ್ದು,ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆತನಿಗೆ ಜೀವರಕ್ಷಕ ಯಂತ್ರವನ್ನು ಅಳವಡಿಸಲಾಗಿದ್ದು, 48ಗಂಟೆಗಳ ಕಾಲ ನಿಗಾ ಇರಿಸಲಾಗುತ್ತಿದೆ.

ಈ ಘಟನೆಯು ಕಬ್ಬಿಣದ ಸರಳುಗಳು ಮತ್ತು ಬಿದಿರುಗಳಂತಹ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುವ ವಾಹನಗಳು ಇತರ ವಾಹನಗಳ ಚಾಲಕರ ಜೀವಗಳಿಗೆ ಒಡ್ಡುತ್ತಿರುವ ಗಂಭೀರ ಅಪಾಯದತ್ತ ಮತ್ತೊಮ್ಮೆ ಎಲ್ಲರ ಗಮನ ಹೊರಳುವಂತೆ ಮಾಡಿದೆ. 2008ರಲ್ಲಿ ಇಂತಹುದೇ ಘಟನೆಯೊಂದರಲ್ಲಿ ಕಲಕತ್ತಾ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯರು ಇನ್ನೋರ್ವ ಚಾಲಕನ ಎದೆಯೊಳಗೆ ತೂರಿದ್ದ ಐದಡಿ ಉದ್ದದ ಕಬ್ಬಿಣದ ಸರಳನ್ನು ಹೊರತೆಗೆಯುವ ಮೂಲಕ ಆತನ ಜೀವವನ್ನುಳಿಸಿದ್ದರು.

ಖಾಸಗಿ ಬಸ್ಸೊಂದರ ಚಾಲಕನಾಗಿರುವ ಘೋಷ್‌ನನ್ನು ಬುಧವಾರ ಪೂರ್ವಾಹ್ನ ಆಸ್ಪತ್ರೆಗೆ ತರಲಾಗಿತ್ತು. ಪಶ್ಚಿಮ ಮಿಡ್ನಾಪುರದ ಹೇರಿಯಾ ಬಳಿ ಆತ ಚಲಾಯಿಸುತ್ತಿದ್ದ ಬಸ್ಸಿಗೆ ಬಿದಿರು ತುಂಬಿದ್ದ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಲಾರಿಯಿಂದ ಹೊರಗೆ ಬಂದಿದ್ದ ಬಿದಿರೊಂದು ನೇರವಾಗಿ ಆತನ ದೇಹದಲ್ಲಿ ಹೊಕ್ಕಿತ್ತು.

 ಬೆನ್ನಿನಿಂದ ಬಿದಿರಿನಭಾಗ ಹೊರಕ್ಕೆ ಇಣುಕಿದ್ದರಿಂದ ಘೋಷ್‌ನನ್ನು ಮಲಗಿಸಿ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಿರಲಿಲ್ಲ. ಆತನಿಗೆ ಕುಳಿತ ಸ್ಥಿತಿಯಲ್ಲಿಯೇ ಶಸ್ತ್ರಚಿಕಿತ್ಸೆ ನಡೆಸಬೇಕಾಗಿದ್ದರಿಂದ ಸಾಮಾನ್ಯ ಅರಿವಳಿಕೆ ನೀಡುವ ದಾರಿಯೂ ಉಳಿದಿರಲಿಲ್ಲ. ಗಾಯಾಳು ತೀವ್ರ ನೋವನ್ನು ಅನುಭವಿಸುತ್ತಿದ್ದ ಮತ್ತು ವಿಪರೀತ ರಕ್ತಸ್ರಾವವಾಗುತ್ತಲೇ ಇತ್ತು. ಹೀಗಾಗಿ ಗಂಟೆಗಳ ಕಾಲ ಸಮಾಲೋಚನೆ ನಡೆಸಿದ ವೈದ್ಯರ ತಂಡ ಕುತ್ತಿಗೆ ಬಳಿ ಪುಟ್ಟ ರಂಧ್ರವೊಂದನ್ನು ಮಾಡಿ ಆತನ ಶ್ವಾಸನಾಳದ ಮೂಲಕ ಅರಿವಳಿಕೆ ಮದ್ದು ನೀಡಿ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ ಎಂದು ಶಸ್ತ್ರಚಿಕಿತ್ಸೆಯ ನೇತೃತ್ವ ವಹಿಸಿದ್ದ ಡಾ.ಪ್ರಕಾಶ ಸಾಂಕಿ ತಿಳಿಸಿದರು.

ಅದೃಷ್ಟವಶಾತ ಬಿದಿರು ಆತನ ಹೃದಯ ಮತ್ತು ಶ್ವಾಸಕೋಶಗಳಿಗೆ ಯಾವುದೇ ಹಾನಿಯನ್ನುಂಟು ಮಾಡಿರಲಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X