Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 19 ರಂದು ಕಾವೇರಿ ಕಣಿವೆಯ 8 ಜಿಲ್ಲೆಗಳ...

19 ರಂದು ಕಾವೇರಿ ಕಣಿವೆಯ 8 ಜಿಲ್ಲೆಗಳ ಬೃಹತ್ ಸಮಾವೇಶ

ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ರೈತ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ16 Sept 2016 10:18 PM IST
share
19 ರಂದು ಕಾವೇರಿ ಕಣಿವೆಯ 8 ಜಿಲ್ಲೆಗಳ ಬೃಹತ್ ಸಮಾವೇಶ

ಮಡಿಕೇರಿ, ಸೆ.16: ಕಾವೇರಿ ನದಿ ನೀರಿನ ವಿವಾದವನ್ನು ಸಮರ್ಥವಾಗಿ ಬಗೆಹರಿಸಬೇಕೆನ್ನುವ ಉದ್ದೇಶದಿಂದ ಕಾವೇರಿ ನೀರನ್ನು ಬಳಕೆ ಮಾಡುತ್ತಿರುವ 8 ಜಿಲ್ಲೆಗಳ ರೈತರ ಹಾಗೂ ಜನಪ್ರತಿನಿಧಿಗಳ ಬೃಹತ್ ಸಮಾವೇಶವನ್ನು ಸೆ.19 ರಂದು ಮಂಡ್ಯದಲ್ಲಿ ನಡೆಸಲಾಗುತ್ತಿದೆ ಎಂದು ಕಾವೇರಿ ಕಣಿವೆ ರೈತ ಒಕ್ಕೂಟ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಮುಖರಾದ ಯೋಗಣ್ಣ, ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿದರು. ಎರಡೂ ರಾಜ್ಯಗಳೊಂದಿಗೆ ಮಾತುಕತೆ ನಡೆಸುವ ಮೂಲಕ ಸಮಗ್ರ ರಾಷ್ಟ್ರೀಯ ಜಲ ನೀತಿಯನ್ನು ತುರ್ತಾಗಿ ರೂಪಿಸಬೇಕು. ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳ ಬಗ್ಗೆ ಸಮಗ್ರ ಕಾರ್ಯಸೂಚಿ ರೂಪಿಸಲು ಶಾಶ್ವತವಾದ ಕಾನೂನಾತ್ಮಕ, ತಾಂತ್ರಿಕ ಮತ್ತು ನೀರಾವರಿ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕು, ಕಾವೇರಿ ಕಣಿವೆಯ ಎಂಟು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯಿದ್ದು, ಪರಿಹಾರವಾಗಿ ಪ್ರತೀ ಎಕರೆಗೆ 50 ಸಾವಿರ ರೂ. ನೀಡಬೇಕು. ರೈತರ ಮತ್ತು ಕೃಷಿ ಕಾರ್ಮಿಕರ ಸಾಲ ಮನ್ನಾ ಮಾಡಬೇಕು, ಅರಣ್ಯ ನಾಶ ತಡೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಕೇವಲ ಬೆಂಗಳೂರು ನಗರದ ಅಭಿವೃದ್ಧಿಯನ್ನೆ ಗುರಿಯಾಗಿಸಿಕೊಳ್ಳದೆ, ಇತರ ಜಿಲ್ಲೆಗಳಿಗೂ ಅಭಿವೃದ್ಧಿ ಯೋಜನೆಗಳನ್ನು ವಿಸ್ತರಿಸಬೇಕು ಮತ್ತು ಕನ್ನಡ ಪರ ಹೋರಾಟಗಾರರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಾಸ್ ಪಡೆಯಬೇಕೆಂದು ಯೋಗಣ್ಣ ಒತ್ತಾಯಿಸಿದರು.

ಕನ್ನಡ ಸೇನೆಯ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಕಾವೇರಿ ಕಣಿವೆಯ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ, ತುಮಕೂರು, ಬೆಂಗಳೂರು ಹಾಗೂ ಕೊಡಗು ಜಿಲ್ಲೆಗಳ ರೈತರನ್ನು ಒಳಗೊಂಡ ಒಕ್ಕೂಟ ರಚಿಸಲಾಗಿದ್ದು, ಹೋರಾಟವನ್ನು ಅರ್ಥಪೂರ್ಣಗೊಳಿಸಲಾಗುವುದೆಂದರು.

ರೈತರು, ಪ್ರಗತಿಪರರು ಹಾಗೂ ಕನ್ನಡ ಪರ ಸಂಘಟನೆಗಳು ಸೆ.19 ರಂದು ನಡೆಸುತ್ತಿರುವ ಸಮಾವೇಶದಲ್ಲಿ ಈ ಭಾಗವನ್ನು ಪ್ರತಿನಿಧಿಸುತ್ತಿರುವ 40 ಮಂದಿ ಶಾಸಕರು ಹಾಗೂ ಎಂಟು ಮಂದಿ ಸಂಸದರು ಪಾಲ್ಗೊಳ್ಳದಿದ್ದಲ್ಲಿ ಇವರ ವಿರುದ್ಧವೇ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿರುವ ಸರಕಾರಗಳು ಕಾವೇರಿ ವಿವಾದವನ್ನು ಸಮರ್ಥವಾಗಿ ಬಗೆಹರಿಸುವಲ್ಲಿ ಮತ್ತು ರಾಜ್ಯದ ಪಾಲಿನ ನೀರನ್ನು ಪಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗುತ್ತಿವೆಯೆಂದು ಮಂಜುನಾಥ್ ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ವಿವಾದದಲ್ಲಿ ಮಧ್ಯ ಪ್ರವೇಶ ಮಾಡದೆ ವೌನ ವಹಿಸಿರುವುದೇ ಕರ್ನಾಟಕ ರಾಜ್ಯಕ್ಕೆ ಹಿನ್ನಡೆಯಾಗಲು ಕಾರಣವೆಂದು ಟೀಕಿಸಿದರು.

ಸೆ.19 ರಂದು ಪ್ರತಿಭಟನಾ ಸಮಾವೇಶ ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ ಮತ್ತು ರೈತ ಸಭಾ ಭವನದಲ್ಲಿ ನಡೆಯಲಿದ್ದು, ಕೊಡಗಿನ ಶಾಸಕರು ಕೂಡ ಪಾಲ್ಗೊಳ್ಳಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿದರು.

ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾ ಘಟಕದ ಪ್ರಮುಖರಾದ ಜಿ.ಎಂ. ಶಿವ ಕುಮಾರ್, ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಪ್ರೇಮ್ ಕುಮಾರ್ ಹಾಗೂ ಮುಹಮ್ಮದ್ ಕುಂಞಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X