Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಐದರ ಬೆನ್ನ ಹಿಂದೆ ಒಮುಂಗ್

ಐದರ ಬೆನ್ನ ಹಿಂದೆ ಒಮುಂಗ್

ವಾರ್ತಾಭಾರತಿವಾರ್ತಾಭಾರತಿ17 Sept 2016 11:48 AM IST
share
ಐದರ ಬೆನ್ನ ಹಿಂದೆ ಒಮುಂಗ್

ಒಮುಂಗ್ ಕುಮಾರ್ ಅವರ ‘ಮೇರಿಕೋಮ್’ ಬಾಕ್ಸಿಂಗ್ ಮಹಿಳೆಯೊಬ್ಬಳ ಸಾಧನೆಯನ್ನು ಕೇಂದ್ರವಾಗಿಟ್ಟು ಮಾಡಿದ ಚಿತ್ರ. ಬಾಕ್ಸ್ ಆಫೀಸ್‌ನಲ್ಲೂ ಇದು ಗೆದ್ದಿತ್ತು. ಆ ಬಳಿಕ ಅವರು ಆಯ್ದುಕೊಂಡಿದ್ದು ‘ಸರಬ್ಜಿತ್’. ಈ ಎರಡೂ ಚಿತ್ರಗಳು ಆತ್ಮಕಥೆಯನ್ನು ಆಧರಿಸಿರುವುದರಿಂದ ನಿರ್ದೇಶಕನಿಗೆ ಭಾರೀ ಸವಾಲನ್ನು ಒಡ್ಡಿತ್ತು ನಿಜ. ಆದರೆ ಚಿತ್ರವನ್ನು ಮನರಂಜನಾತ್ಮಕವಾಗಿಯೂ ಕಟ್ಟಿಕೊಡುವಲ್ಲಿ ಒಮುಂಗ್ ಯಶಸ್ವಿಯಾಗಿದ್ದರು. ಆದರೆ, ಸರಬ್ಜಿತ್ ಚಿತ್ರ ನಿರೀಕ್ಷೆಯನ್ನು ತಲುಪಲಿಲ್ಲ. ಹಣ ಮಾಡುವುದರಲ್ಲೂ ಅದು ವಿಫಲವಾಯಿತು. ಬಹುಶಃ ಐಶ್ವರ್ಯ ರೈಯವರ ಪೇಲವ ಅಭಿನಯವೂ ಚಿತ್ರ ಸೋಲುವುದಕ್ಕೆ ಇನ್ನೊಂದು ಕಾರಣವಾಗಿರಬಹುದು.

 ಅದೇನೇ ಇರಲಿ. ಒಮುಂಗ್ ಈಗ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಈವರೆಗೆ ಆತ್ಮಕಥೆಯ ಮೊರೆಹೋಗಿದ್ದವರು, ಈಗ ಥ್ರಿಲ್ಲರ್ ಕಥೆಯ ಕಡೆಗೆ ಹೊರಳಿದ್ದಾರೆ. ಅವರ ಮುಂದಿನ ಬಹು ನಿರೀಕ್ಷೆಯ ಚಿತ್ರ ‘ಫೈವ್’. ಇದೊಂದು ಥ್ರಿಲ್ಲರ್ ಕಥೆ ವಸ್ತುವನ್ನು ಹೊಂದಿರುವ ಚಿತ್ರ ಎಂದು ಅವರು ಹೇಳುತ್ತಾರೆ. ಚಿತ್ರದ ನಾಯಕನಾಗಿ ಅಕ್ಷಯ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿಯೂ ಈಗಾಗಲೇ ಹೊರ ಬಿದ್ದಿದೆ. ‘‘ಫೈವ್ ಚಿತ್ರದ ಕತೆ ಹಲವು ವರ್ಷಗಳ ಹಿಂದೆಯೇ ನನ್ನ ತಲೆಯೊಳಗೆ ರೂಪು ಪಡೆಯುತ್ತಿತ್ತು. ಇದೀಗ ಅಧಿಕೃತವಾಗಿ ಸಿನೆಮಾ ರೂಪದಲ್ಲಿ ಹೊರಬರುತ್ತಿದೆ. ಎಲ್ಲ ರೀತಿಯಲ್ಲೂ ಈ ಚಿತ್ರ ನನಗೆ ವಿಶಿಷ್ಟವಾದುದು’’ ಎನ್ನುತ್ತಾರೆ ಒಮುಂಗ್. ಸಂಗೀತ, ಕಥೆ, ಸೆಟ್ಟಿಂಗ್ ಎಲ್ಲದರಲ್ಲೂ ಚಿತ್ರ ವಿಭಿನ್ನವಾಗಿರಲಿದೆ ಎನ್ನುವುದು ಚಿತ್ರ ಬಳಗದ ಅಭಿಪ್ರಾಯ. ಉತ್ಕರ್ಷಿಣಿ ವಶಿಷ್ಠ ಅವರ ಚಿತ್ರಕಥೆ, ಮಿಥುನ್, ಜೀತ್ ಗಂಗೂಲಿ, ಅಮಾಲ್ ಮಲಿಕ್ ಅವರ ಸಂಗೀತ, ರವಿವರ್ಮನ್ ಛಾಯಾಗ್ರಹಣ ಚಿತ್ರದ ಹೆಗ್ಗಳಿಕೆಯಂತೆ. ಸರಬ್ಜಿತ್‌ನಲ್ಲಿ ಕಳೆದುಕೊಂಡದ್ದನ್ನು ಒಮುಂಗ್ ಅವರು ಐದರಲ್ಲಿ ಪಡೆದುಕೊಳ್ಳುತ್ತಾರೆಯೋ ಎನ್ನುವುದನ್ನು ಕಾದು ನೋಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X