Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂಬ್ರ ಪೇಟೆಯಲ್ಲಿ ಸಭೆ-ಸಮಾರಂಭಕ್ಕೆ...

ಕುಂಬ್ರ ಪೇಟೆಯಲ್ಲಿ ಸಭೆ-ಸಮಾರಂಭಕ್ಕೆ ಅನುಮತಿಗೆ ನಿರ್ಣಯ: ಪೊಲೀಸ್ ತೀರ್ಮಾನಕ್ಕೆ ಉಲ್ಟಾ ಹೊಡೆದ ಗ್ರಾಮ ಪಂಚಾಯತ್

ವಾರ್ತಾಭಾರತಿವಾರ್ತಾಭಾರತಿ17 Sept 2016 8:29 PM IST
share

ಪುತ್ತೂರು,ಸೆ.17: ಸಾರ್ವಜನಿಕರಿಗೆ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ ಎದುರಾಗುವ ಹಿನ್ನಲೆಯಲ್ಲಿ ಒಳಮೊಗ್ರು ಗ್ರಾಮದ ಕುಂಬ್ರ ಪೇಟೆಯ ಜಂಕ್ಷನ್‌ನಲ್ಲಿರುವ ಅಶ್ವಸ್ಥ ಕಟ್ಟೆಯ ಬಳಿ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಯಾವುದೇ ರೀತಿಯ ಪ್ರತಿಭಟನಾ ಸಭೆ ನಡೆಸಲು ಅವಕಾಶ ನೀಡದಂತೆ ಪೊಲೀಸ್ ಇಲಾಖೆ ಕಳೆದ ಆಗಸ್ಟ್ 25ರಂದು ಕೈಗೊಂಡಿದ್ದ ತೀರ್ಮಾನಕ್ಕೆ ಅನುಮತಿ ನೀಡಿದ್ದ ಒಳಮೊಗ್ರು ಗ್ರಾಮ ಪಂಚಾಯಿತ್ ಅಧ್ಯಕ್ಷರು ಇದೀಗ ಸದಸ್ಯರ ಆಗ್ರಹದ ಮೇರೆಗೆ ಅನುಮತಿ ನೀಡುವ ನಿರ್ಣಯ ಕೈಗೊಂಡಿದ್ದಾರೆ.

ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷ ಯತಿರಾಜ್ ರೈ ನೀರ್ಪಾಡಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಒಳಮೊಗ್ರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಕುಂಬ್ರ ಜಂಕ್ಷನ್‌ನಲ್ಲಿರುವ ಅಶ್ವಸ್ಥ ಕಟ್ಟೆಯ ಬಳಿ ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಈ ಹಿಂದಿನಂತೆಯೇ ಯಥಾ ಪ್ರಕಾರ ಅವಕಾಶ ಕಲ್ಪಿಸಿಕೊಡುವುದೆಂಬ ತೀರ್ಮಾನ ಕೈಗೊಳ್ಳಲಾಗಿದೆ.
     
ಮಾಣಿ- ಮೈಸೂರು ಹೆದ್ದಾರಿ ಬದಿಯಲ್ಲಿರುವ ಕುಂಬ್ರ ಪೇಟೆಯ ಮಧ್ಯಭಾಗದಲ್ಲಿರುವ ಅಶ್ವಥ್ಥ ಕಟ್ಟೆಯ ಎರಡೂ ಬದಿಗಳಲ್ಲಿ ರಸ್ತೆ ಹಾದು ಹೋಗುವ ಕಾರಣ ಕಟ್ಟೆಯ ಬಳಿ ಸಭಾ ಕಾರ್ಯಕ್ರಮ ನಡೆಸಿದರೆ ಟ್ರಾಫಿಕ್ ಸಮಸ್ಯೆ ಉಂಟಾಗುವ ಮತ್ತು ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನಲೆಯಲ್ಲಿ ಸಂಪ್ಯ ಗ್ರಾಮಾಂತರ ಠಾಣೆಯ ಎಸ್ ಐ ಅಬ್ದುಲ್ ಖಾದರ್ ಅವರು ಕಳೆದ ಆಗಸ್ಟ್ 25ರಂದು ಕುಂಬ್ರ ಪೇಟೆಗೆ ಭೇಟಿಯಿತ್ತು ಪರಿಶೀಲಿಸಿ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷ ಯತಿರಾಜ್ ರೈ ನೀರ್ಪಾಡಿ ಅವರೊಂದಿಗೆ ಸಮಾಲೋಚನೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದರು. ಈ ತೀರ್ಮಾನ ಕೈಗೊಂಡ ಬೆನ್ನಲ್ಲೇ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಕುಂಬ್ರದ ಅಶ್ವಥ ಕಟ್ಟೆಗೆ ತನ್ನದೇ ಆದ ಇತಿಹಾಸವಿದೆ. ಅನಾದಿ ಕಾಲದಿಂದಲೂ ಇಲ್ಲಿ ದೈವಗಳ ಸೇವೆ, ಚೌತಿ , ಹಾಗೂ ರಾಜಕೀಯ ಕಾರ್ಯಕ್ರಮಗಳು ನಡೆಯುತ್ತದೆ. ಕಾರ್ಯಕ್ರಮ ನಡೆಸಿದ ಸಂದರ್ಭದಲ್ಲಿ ಟ್ರಾಫಿಕ್ ಸಮಸ್ಯೆಯಾದರೆ ಅದನ್ನು ಪೊಲೀಸರೇ ನಿಭಾಯಿಸಬೇಕು. ಕುಂಬ್ರ ಅಶ್ವಥ ಕಟ್ಟೆಯ ಬಳಿ ನಡೆಯುವ ಕಾರ್ಯಕ್ರಮಗಳು ಇನ್ನು ಮುಂದೆಯೂ ಯಥಾವತ್ತಾಗಿ ನಡೆಯಲಿದೆ. ಇಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದ್ದಲ್ಲಿ ಪ್ರತಿಭಟನೆ ನಡೆಬೇಕಾಗುತ್ತದೆ ಎಂದು ಒಳಮೊಗ್ರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ವಕೀಲ ದುರ್ಗಾಪ್ರಸಾದ್ ರೈ ಅವರು ಎಚ್ಚರಿಕೆ ನೀಡಿದ್ದರು.
ಉಲ್ಟ ಹೊಡೆದ ಪಂಚಾಯಿತಿ ತೀರ್ಮಾನ:
ಕುಂಬ್ರ ಜಂಕ್ಷನ್ ಬಳಿ ಯಥಾ ಪ್ರಕಾರ ಕಾರ್ಯಕ್ರಮ ನಡೆಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಒಳಮೊಗ್ರು ಗ್ರಾಮ ಸಮಿತಿಯವರು ಗ್ರಾಮ ಪಂಚಾಯತ್‌ಗೆ ಸಲ್ಲಿಸಿದ್ದ ಮನವಿಯ ವಿಚಾರ ಶುಕ್ರವಾರ ನಡೆದ ಗ್ರಾಮ ಪಂಚಾಯತ್ ಸಬೆಯಲ್ಲಿ ಪ್ರಸ್ತಾಪವಾಯಿತು. ಸದಸ್ಯ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಅವರು ವಿಷಯ ಪ್ರಸ್ತಾಪಿಸಿ ಪಂಚಾಯತ್ ಅಧ್ಯಕ್ಷರಿಗಾಗಲೀ, ಪೊಲೀಸ್ ಇಲಾಖೆಗಾಗಲೀ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿಯಾಗಿ ಈ ರೀತಿಯ ತೀರ್ಮಾನ ಕೈಗೊಳ್ಳಲು ಅವಕಾಶವಿಲ್ಲ. ಏಕಪಕ್ಷೀಯವಾಗಿ ತೆಗೆದುಕೊಳ್ಳಲಾದ ಈ ತೀರ್ಮಾನ ಕಾನೂನು ಬಾಹಿರವಾಗಿದ್ದು, ಪಂಚಾಯತ್ ಸಭೆಯಲ್ಲಿ ಏನು ತೀರ್ಮಾನ ಕೈಗೊಳ್ಳುತ್ತೇವೆಯೋ ಅದು ಪಾಲನೆಯಾಗಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ಪಂಚಾಯತ್ ಅಧ್ಯಕ್ಷರು ನಾನು ಆ ರೀತಿಯ ಹೇಳಿಕೆ ನೀಡಿಲ್ಲ ಎಂದು ಸಮಜಾಯಿಕೆ ನೀಡಿದರು. ಸದಸ್ಯರಾದ ಮಹೇಶ್ ರೈ, ಶಶಿಕಿರಣ್ ರೈ ಮತ್ತಿತರರು ಅಲ್ಲಿ ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಎಂದಿನಂತೆಯೇ ಅವಕಾಶ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು. ಈ ಕುರಿತು ಸಭೆಯಲ್ಲಿ ಚರ್ಚಿಸಿ ಅಂತಿಮವಾಗಿ ಕುಂಬ್ರ ಜಂಕ್ಷನ್‌ನಲ್ಲಿರುವ ಅಶ್ವಥ ಕಟ್ಟೆಯ ಬಳಿ ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಈ ಹಿಂದಿನಂತೆಯೇ ಯಥಾ ಪ್ರಕಾರ ಅವಕಾಶ ಕಲ್ಪಿಸಿಕೊಡುವುದು ಎಂಬ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ತಾಲೂಕು ಪಂಚಾಯತ್ ಸದಸ್ಯ ಹರೀಶ್ ಬಿಜತ್ರೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುನಂದ , ಕಾರ್ಯದರ್ಶಿ ದಾಮೋದರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X