Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಸರ್ಗದ ಏಕಾಂತ ಮತ್ತು ಯಕ್ಷಗಾನ...

ನಿಸರ್ಗದ ಏಕಾಂತ ಮತ್ತು ಯಕ್ಷಗಾನ ಸಾಹಿತ್ಯದ ಅಭಿರುಚಿ ಬೆಳೆಸಿತು : ಚೊಕ್ಕಾಡಿ

ಸುವರ್ಣ ಸಾಹಿತ್ಯ ಸಂಭ್ರಮ ’ಕವಿ ಮನ-ಕವಿ ನಮನ’

ವಾರ್ತಾಭಾರತಿವಾರ್ತಾಭಾರತಿ17 Sept 2016 10:22 PM IST
share
ನಿಸರ್ಗದ ಏಕಾಂತ ಮತ್ತು ಯಕ್ಷಗಾನ ಸಾಹಿತ್ಯದ ಅಭಿರುಚಿ ಬೆಳೆಸಿತು : ಚೊಕ್ಕಾಡಿ

ಪುತ್ತೂರು,ಸೆ.17 : ಚೊಕ್ಕಾಡಿಯ ನಿಸರ್ಗದಲ್ಲಿನ ತಲ್ಲಗೊಳಿಸುವ ಏಕಾಂತ ಮತ್ತು ಪ್ರಕೃತಿಯ ಸೊಬಗು, ಯಕ್ಷಗಾನದ ಹಿನ್ನೆಲೆ, ಪುಸ್ತಕ ಮಾರಾಟ ಮತ್ತು ಓದುವ ಹವ್ಯಾಸ ತನ್ನಲ್ಲಿ ಸಾಹಿತ್ಯದ ಅಭಿರುಚಿಯನ್ನು ಬೆಳೆಸಿತು. ಗೋಪಾಲಕೃಷ್ಣ ಅಡಿಗರ ಚಂಡೆಮದ್ದಳೆ ತಾನು ಸಾಗಬೇಕಾದ ಕಾವ್ಯದ ದಾರಿಯನ್ನು ತೆರೆದು ತೋರಿಸಿತು. ಪರಂಪರೆಯ ಪ್ರಭಾವದಿಂದ ಬಿಡಿಸಿಕೊಳ್ಳುವುದಕ್ಕಾಗಿ ಮತ್ತು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ಸಲುವಾಗಿ ಭಾವಗೀತೆಗಿಂತ ಭಿನ್ನವಾದ ಕಾವ್ಯದ ದಾರಿಯನ್ನು ಆರಿಸಿಕೊಳ್ಳುವ ಅನಿವಾರ್ಯತೆಯಿತ್ತು ಎಂದು ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು ಹೇಳಿದರು.

ಪುತ್ತೂರು ತಾಲ್ಲೂಕಿನ ಪೆರ್ನಾಜೆ ಸೀತಾರಾಘವ ಪದವಿಪೂರ್ವ ಕಾಲೇಜು ಪೆರ್ನಾಜೆ ಮತ್ತು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕ ಇದರ ಸಹಯೋಗದಲ್ಲಿ ಗುರುವಾರ ನಡೆದ ಸುವರ್ಣ ಸಾಹಿತ್ಯ ಸಂಭ್ರಮ ’ಕವಿ ಮನ-ಕವಿ ನಮನ’ ಕಾರ್ಯಕ್ರಮದಲ್ಲಿ ಅವರು ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ಪರಿಸರ ಗೀತೆಯನ್ನು ಬರೆಯುವುದರ ಮೂಲಕ ಮತ್ತೊಮ್ಮೆ ಹಾಡುಗಳನ್ನು ಬರೆಯುವುದಕ್ಕೆ ಸಾಧ್ಯವಾಯಿತು. ಶಿಕ್ಷಕರಾದವರು ವಿದ್ಯಾರ್ಥಿಗಳಲ್ಲಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸಿ ಪೋಷಿಸಬೇಕು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಶಾಲೆಯಲ್ಲಿ ಸೃಷ್ಟಿಸಬೇಕು ಎಂದು ಅವರು ಹೇಳಿದರು.

  ಅಭಿನಂದನಾ ಭಾಷಣ ಮಾಡಿದ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಎಚ್. ಜಿ. ಅವರು ಅಡಿಗರ ಪರಂಪರೆಯನ್ನು ಕರಾವಳಿಯ ಪ್ರದೇಶದಲ್ಲಿ ಸುಬ್ರಾಯ ಚೊಕ್ಕಾಡಿಯವರು ಸಮರ್ಥವಾಗಿ ಮುನ್ನಡೆಸಿದರು. ಹಳ್ಳಿಯಲ್ಲಿದ್ದರೂ ಚೊಕ್ಕಾಡಿಯವರ ದೃಷ್ಟಿ ವಿಶ್ವಾತ್ಮಕವನ್ನು ಒಳಗೊಂಡಿತ್ತು. ಚೊಕ್ಕಾಡಿಯ ಕವಿತೆಗಳಿಗೆ ನೋವನ್ನು ಮರೆಸುವ ಗುಣವಿದೆ. ಚೊಕ್ಕಾಡಿಯವರ ಕವಿತೆಗಳಲ್ಲಿ ಮರ ಮತ್ತು ಹಕ್ಕಿಯ ರೂಪಕಗಳು ಆಗಾಗ ಮರುಕಳಿಸುತ್ತವೆ. ಸುಬ್ರಾಯ ಚೊಕ್ಕಾಡಿಯವರ ಕವಿತೆಗಳಲ್ಲಿರುವ ಲಯ ವೈವಿಧ್ಯವನ್ನು ಅಧ್ಯಯನ ಮಾಡುವ ಅಗತ್ಯವಿದೆ ಎಂದರು.

  ಸೀತಾರಾಘವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪಿ.ಕೆ. ಶಂಕರ ನಾರಾಯಣ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಐತಪ್ಪ ನಾಯ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯು.ಶಿವಶಂಕರ ಭಟ್ ಸ್ವಾಗತಿಸಿದರು.ಪಿ. ಶ್ರೀಕೃಷ್ಣ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X