Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನ್ಯೂಝಿಲೆಂಡ್ ವಿರುದ್ಧ ಮುಂಬೈಗೆ ಮುನ್ನಡೆ

ನ್ಯೂಝಿಲೆಂಡ್ ವಿರುದ್ಧ ಮುಂಬೈಗೆ ಮುನ್ನಡೆ

ತ್ರಿದಿನ ಅಭ್ಯಾಸ ಪಂದ್ಯ: ಪವಾರ್-ಯಾದವ್ ಶತಕ, ರೋಹಿತ್ ಶರ್ಮ ವಿಫಲ

ವಾರ್ತಾಭಾರತಿವಾರ್ತಾಭಾರತಿ17 Sept 2016 11:43 PM IST
share
ನ್ಯೂಝಿಲೆಂಡ್ ವಿರುದ್ಧ ಮುಂಬೈಗೆ ಮುನ್ನಡೆ

ಹೊಸದಿಲ್ಲಿ, ಸೆ.17: ಆರಂಭಿಕ ದಾಂಡಿಗ ಕೌಸ್ತುಭ್ ಪವಾರ್(100) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯ ಕುಮಾರ್ ಯಾದವ್(103) ಆಕರ್ಷಕ ಶತಕದ ಸಹಾಯದಿಂದ ಮುಂಬೈ ತಂಡ ನ್ಯೂಝಿಲೆಂಡ್ ವಿರುದ್ಧ 107 ರನ್ ಮುನ್ನಡೆಯಲ್ಲಿದೆ.

ತ್ರಿದಿನ ಅಭ್ಯಾಸ ಪಂದ್ಯದ ಮೊದಲ ದಿನವಾದ ಶುಕ್ರವಾರ ನ್ಯೂಝಿಲೆಂಡ್ 7 ವಿಕೆಟ್‌ಗಳ ನಷ್ಟಕ್ಕೆ 324 ರನ್ ಇನಿಂಗ್ಸ್ ಮಾಡಿಕೊಂಡಿತ್ತು. ಶನಿವಾರ ನ್ಯೂಝಿಲೆಂಡ್ ಇನಿಂಗ್ಸ್‌ಗೆ ತಕ್ಕ ಉತ್ತರ ನೀಡಿರುವ ಮುಂಬೈ ತಂಡ 2ನೆ ದಿನದಾಟದಂತ್ಯಕ್ಕೆ 103 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 431 ರನ್ ಗಳಿಸಿದೆ.

ಅಸ್ಥಿರ ಪ್ರದರ್ಶನ ನೀಡುತ್ತಿರುವ ಹೊರತಾಗಿಯೂ ಮುಂದಿನ ವಾರ ಆರಂಭವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಮುಂಬೈ ನಾಯಕ ರೋಹಿತ್ ಶರ್ಮ 18 ರನ್ ಗಳಿಸಲಷ್ಟೇ ಶಕ್ತರಾದರು.

ಜೂನಿಯರ್ ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಪ್ರಸಿದ್ದಿಯಾಗಿರುವ ಅರ್ಮಾನ್ ಜಾಫರ್ ಕಿವೀಸ್‌ನ ವೇಗಿಗಳಾದ ಬೌಲ್ಟ್ ಹಾಗೂ ವಾಗ್ನರ್ ದಾಳಿಯನ್ನು ಸಮರ್ಥವಾಗಿ ಎದುರಿಸಿ 123 ಎಸೆತಗಳಲ್ಲಿ 9 ಬೌಂಡರಿ, 1 ಸಿಕ್ಸರ್ ಸಹಿತ 69 ರನ್ ಗಳಿಸಿ ಗಮನ ಸೆಳೆದರು.

 ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಆದಿತ್ಯ ತಾರೆ(ಔಟಾಗದೆ 53) ಹಾಗೂ ಸಿದ್ದೇಶ್ ಲಾಡ್(ಔಟಾಗದೆ 86 ರನ್) ಆರನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 137 ರನ್ ಜೊತೆಯಾಟ ನಡೆಸಿ ತಂಡಕ್ಕೆ ಆಸರೆಯಾಗಿದ್ದಾರೆ.

ಮುಂಬೈ ಖಾತೆ ತೆರೆಯುವ ಮೊದಲೇ ವಿಕೆಟ್ ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ಆಗ 2ನೆ ವಿಕೆಟ್‌ಗೆ 107 ರನ್ ಜೊತೆಯಾಟ ನಡೆಸಿದ ಪವಾರ್(100 ರನ್, 228 ಎಸೆತ, 15 ಬೌಂಡರಿ, 1 ಸಿಕ್ಸರ್) ಹಾಗೂ ಎಸ್‌ಎ ಯಾದವ್(103 ರನ್, 86 ಎಸೆತ, 9 ಬೌಂಡರಿ, 8 ಸಿಕ್ಸರ್) ತಂಡಕ್ಕೆ ಉತ್ತಮ ಆರಂಭ ನೀಡಿದರು.

ಪವಾರ್ ಹಾಗೂ ಯಾದವ್ 4ನೆ ವಿಕೆಟ್‌ಗೆ 155 ರನ್ ಸೇರಿಸುವುದರೊಂದಿಗೆ ತಂಡದ ಮೊತ್ತವನ್ನು 288 ರನ್‌ಗೆ ತಲುಪಿಸಿದರು. ದಿನದಾಟದಂತ್ಯಕ್ಕೆ ತಾರೆ ಹಾಗೂ ಲಾಡ್ ಕ್ರೀಸ್ ಕಾಯ್ದುಕೊಂಡಿದ್ದಾರೆ.

 ನ್ಯೂಝಿಲೆಂಡ್‌ನ ಪರ ಸ್ಪಿನ್ನರ್ ಐಶ್ ಸೋಧಿ(2-132) ಯಶಸ್ವಿ ಬೌಲರ್ ಎನಿಸಿಕೊಂಡರು

ಸಂಕ್ಷಿಪ್ತ ಸ್ಕೋರ್

ನ್ಯೂಝಿಲೆಂಡ್: 75 ಓವರ್‌ಗಳಲ್ಲಿ 324/7 ಡಿಕ್ಲೇರ್

(ವಿಲಿಯಮ್ಸನ್ 50,ಲಾಥಮ್ 55, ಟೇಲರ್ 41, ಸಂಧು 2-21)

ಮುಂಬೈ: 103 ಓವರ್‌ಗಳಲ್ಲಿ 431/5

(ಕೆಆರ್ ಪವಾರ್ 100, ಯಾದವ್ 103, ಸಿದ್ದೇಶ್ ಲಾಡ್ ಔಟಾಗದೆ 86, ಆದಿತ್ಯ ತಾರೆ ಔಟಾಗದೆ 53, ಐಶ್ ಸೋಧಿ 2-132)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X