Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೌಕಾಪಡೆಯ ಅತ್ಯಾಧುನಿಕ ಕ್ಷಿಪಣಿ ನಾಶಕ...

ನೌಕಾಪಡೆಯ ಅತ್ಯಾಧುನಿಕ ಕ್ಷಿಪಣಿ ನಾಶಕ ಸಮರ ನೌಕೆ ಮೊರ್ಮ್‌ಗಾವ್ ಅನಾವರಣ

ವಾರ್ತಾಭಾರತಿವಾರ್ತಾಭಾರತಿ17 Sept 2016 11:49 PM IST
share
ನೌಕಾಪಡೆಯ ಅತ್ಯಾಧುನಿಕ ಕ್ಷಿಪಣಿ ನಾಶಕ ಸಮರ ನೌಕೆ ಮೊರ್ಮ್‌ಗಾವ್ ಅನಾವರಣ

ಮುಂಬೈ, ಸೆ.17: ಹೈಟೆಕ್ ಕ್ಷಿಪಣಿಗಳ ತಂಡದೊಂದಿಗೆ ಸಜ್ಜಾಗಿರುವ ಸ್ವದೇಶಿ ನಿರ್ಮಿತ ಯುದ್ಧ ಹಡಗೊಂದು ಇಂದು ಉದ್ಘಾಟನೆಗೊಂಡಿದೆ. ಈ ಕ್ಷಿಪಣಿ ನಾಶಕ ನೌಕೆಯನ್ನು ವಿಶ್ವದ ಅತ್ಯುತ್ತಮ ನೌಕೆಗಳೊಂದಿಗೆ ಹೋಲಿಸಬಹುದೆಂದು ಜಲಸೇನೆಯ ದಂಡನಾಯಕ ಎಡ್ಮಿರಲ್ ಸುನೀಲ್ ಲಾಂಬಾ ಹೇಳಿದ್ದಾರೆ.

‘ಮೊರ್ಮ್‌ಗಾವ್’ ಎಂದು ಹೆಸರಿಸ ಲಾಗಿರುವ ಈ ಸಮರ ನೌಕೆಯನ್ನು ಸರಕಾರಿ ಸ್ವಾಮ್ಯದ ಮಝಗಾಂವ್ ಡಾಕ್ ಶಿಪ್ ಬಿಲ್ಡರ್ಸ್ ಲಿ.(ಎಂಡಿಎಲ್) ನಿರ್ಮಿಸಿದ್ದು, ಪ್ರಾಜೆಕ್ಟ್ 15 ಬಿಯನ್ವಯ ನಿರ್ಮಿಸಲಾಗುತ್ತಿರುವ ವಿಶಾಖಪಟ್ಟಣಂ ಹಡಗುಗಳ ದರ್ಜೆಗೆ ಸೇರಿದೆ. 2020-2024ರ ನಡುವೆ ಎಂಎಎಲ್ ಇನ್ನೂ 4 ಇಂತಹ ಹಡಗುಗಳನ್ನು ನಿರ್ಮಿಸಿಕೊಡಲಿದೆ. ವಿಶಾಖಪಟ್ಟಣಂ ದರ್ಜೆಯ ಮೊದಲ ಹಡಗು 2015ರ ಎ.20ರಂದು ಚಾಲನೆಗೊಂಡಿತ್ತು.

‘ಮೊರ್ಮ್‌ಗಾವ್’ 7,300 ಟನ್ ಭಾರವಿದ್ದು, ಗರಿಷ್ಠ 30 ನಾಟ್‌ಗೂ ಹೆಚ್ಚು ವೇಗದಿಂದ ಚಲಿಸುತ್ತದೆ. ಈ ಯುದ್ಧ ಹಡಗು ನೆಲದಿಂದ ನೆಲಕ್ಕೆ, ನೆಲದಿಂದ ಆಕಾಶಕ್ಕೆ ನೆಗೆಯುವ ಕ್ಷಿಪಣಿಗಳು ಹಾಗೂ ಜಲಾಂತರ್ಗಾಮಿ ನಿರೋಧಕ ರಾಕೆಟ್ ಉಡಾವಕಗಳಿಂದ ಸಜ್ಜುಗೊಂಡಿದೆ. ಅದು 2 ಜಲಾಂತರ್ಗಾಮಿ ಯುದ್ಧ ವಿರೋಧಿ ಹೆಲಿಕಾಪ್ಟರ್‌ಗಳನ್ನು ಒಯ್ಯುವ ಸಾಮರ್ಥ್ಯ ಪಡೆದಿದೆ. ಈ ಹಡಗು ಸ್ವದೇಶಿ ನಿರ್ಮಿತವಾಗಿದ್ದು, ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಪೂರಕವಾಗಿದೆಯೆಂದು ಲಾಂಬಾ ಹೇಳಿದರು.

ಸ್ಕಾರ್ಪಿನ್ ಸೋರಿಕೆ ನಡೆದಿದ್ದು ಫ್ರಾನ್ಸ್‌ನಲ್ಲಿ, ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ: ಲಾಂಬಾ

ಮುಂಬೈ,ಸೆ.17: ಸ್ಕಾರ್ಪಿನ್ ಸಬ್‌ಮರೀನ್‌ನ ಮಾಹಿತಿಗಳ ಸೋರಿಕೆ ಭಾರತದ ಕಡೆಯಿಂದ ನಡೆದಿತ್ತೇ ಎಂಬ ಬಗ್ಗೆ ಉನ್ನತ ಮಟ್ಟದ ಸಮಿತಿಯೊಂದು ವಿಚಾರಣೆಯನ್ನು ನಡೆಸುತ್ತಿದ್ದು, ಸೋರಿಕೆ ನಡೆದಿದ್ದು ಫ್ರಾನ್ಸ್‌ನ ಡಿಸಿಎನ್‌ಎಸ್ ಕಂಪೆನಿಯ ಕಚೇರಿಯಲ್ಲಿಯೇ ಹೊರತು ಭಾರತದಲ್ಲಿ ಅಲ್ಲ ಎನ್ನುವುದನ್ನು ಪ್ರಾಥಮಿಕ ತನಿಖೆಗಳು ಬೆಟ್ಟು ಮಾಡಿವೆ ಎಂದು ನೌಕಾಪಡೆಯ ದಂಡನಾಯಕ ಅಡ್ಮಿರಲ್ ಸುನೀಲ್ ಲಾಂಬಾ ಶನಿವಾರ ಇಲ್ಲಿ ತಿಳಿಸಿದ್ದಾರೆ.

 ಭಾರತೀಯ ನೌಕಾಪಡೆಯ ನಿರ್ದೇಶಿತ ಕ್ಷಿಪಣಿ ವಿನಾಶಕ ‘ಮೊರ್ಮ್‌ಗಾವ್’ದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ಫ್ರಾನ್ಸ್‌ನಲ್ಲಿ ಡಿಸಿಎನ್‌ಎಸ್ ಮತ್ತು ಫ್ರೆಂಚ್ ಸರಕಾರಗಳೂ ಸೋರಿಕೆಯ ಬಗ್ಗೆ ತನಿಖೆ ನಡೆಸುತ್ತಿವೆ. ತನಿಖಾ ವರದಿಗಳನ್ನು ಆಧರಿಸಿ ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ ಎಂದರು.

ಸ್ಕಾರ್ಪಿನ್ ಮಾಹಿತಿ ಸೋರಿಕೆಯಾಗಿರುವುದು ಗಂಭೀರ ಕಳವಳದ ವಿಷಯ ವಾಗಿದೆ ಎಂದ ಲಾಂಬಾ, ತನಿಖೆಯನ್ನು ತುರ್ತಾಗಿ ನಡೆಸುವಂತೆ ನಾವು ಡಿಸಿಎನ್‌ಎಸ್‌ಗೆ ಆಗ್ರಹಿಸಿದ್ದೇವೆ ಎಂದರು. ಈ ಹಿಂದೆ ರಕ್ಷಣಾ ಸಚಿವ ಮನೋಹರ ಪಾರಿಕ್ಕರ್, ‘ಅದೊಂದು ದೊಡ್ಡ ಚಿಂತೆಯ ವಿಷಯವಲ್ಲ’ ಎಂದು ಹೇಳುವ ಮೂಲಕ ಸ್ಕಾರ್ಪಿನ್ ಸೋರಿಕೆಯನ್ನು ಲಘುವಾಗಿ ಪರಿಗಣಿಸಿದ್ದರು.

ಭಾರತೀಯ ನೌಕಾಪಡೆಯು ಡಿಸಿಎನ್‌ಎಸ್ ಸಹಭಾಗಿತ್ವದಲ್ಲಿ ಮುಂಬೈಯಲ್ಲಿ ನಿರ್ಮಿಸುತ್ತಿರುವ ಆರು ಅತ್ಯಾಧುನಿಕ ಸಬ್‌ಮರೀನ್‌ಗಳ ಸಾಮರ್ಥ್ಯದ ಕುರಿತು ಪ್ರಮುಖ ಮಾಹಿತಿಗಳನ್ನೊಳಗೊಂಡ 22,000ಕ್ಕೂ ಅಧಿಕ ಪುಟಗಳು ಸೋರಿಕೆಯಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X