Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಚಾರಣೆ ಆರಂಭಿಸಿದ ಸಿಬಿಐ

ವಿಚಾರಣೆ ಆರಂಭಿಸಿದ ಸಿಬಿಐ

ವಿಮಾನ ಖರೀದಿಯಲ್ಲಿ ಲಂಚ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ17 Sept 2016 11:59 PM IST
share

ಹೊಸದಿಲ್ಲಿ, ಸೆ.17: ಗಾಳಿಯಲ್ಲಿ ತೇಲಾಡುವ ಕಣ್ಗಾವಲು ವ್ಯವಸ್ಥೆಗಾಗಿ 208 ಮಿಲಿಯನ್ ಡಾಲರ್ ವೆಚ್ಚದ ಮೂರು ವಿಮಾನಗಳನ್ನು ಬ್ರೆಜಿಲ್‌ನ ಎಂಬ್ರಾಯರ್ ಕಂಪೆನಿಯು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ ಪೂರೈಸುವ ವ್ಯವಹಾರದಲ್ಲಿ ಮಧ್ಯವರ್ತಿಗೆ ಕಮಿಷನ್ ಸಂದಾಯ ವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಸಿಬಿಐ ಪ್ರಾಥಮಿಕ ವಿಚಾರಣೆಯನ್ನು ದಾಖಲಿಸಿದೆ.

  ರಕ್ಷಣಾ ಇಲಾಖೆಯ ಪ್ರಸ್ತಾಪದಂತೆ ಸಿಬಿಐ ರಕ್ಷಣಾ ಇಲಾಖೆಯ ಅಜ್ಞಾತ ಅಧಿಕಾರಿಯ ವಿರುದ್ಧ ಪ್ರಾಥಮಿಕ ವಿಚಾರಣೆ ಆರಂಭಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಮೇಲ್ನೋಟಕ್ಕೆ ಈ ಆರೋಪಕ್ಕೆ ಪುಷ್ಟಿ ಕೊಡುವ ಸಾಕಷ್ಟು ವಿಷಯಗಳು ದೊರೆತ ಕಾರಣ ವಿಚಾರಣೆ ದಾಖಲಿಸಲಾಗಿದೆ ಎಂದು ಸಿಬಿಐ ತಿಳಿಸಿದೆ. ಪ್ರಾಥಮಿಕ ವಿಚಾರಣೆಯ ಹಂತದಲ್ಲಿ ಸಿಬಿಐ ಯಾವುದೇ ಹೇಳಿಕೆಯನ್ನು ದಾಖಲಿಸುವಂತಿಲ್ಲ ಹಾಗೂ ಶೋಧ ನಡೆಸುವಂತಿಲ್ಲ. ಸೌದಿ ಅರೇಬಿಯಾ ಮತ್ತು ಭಾರತಕ್ಕೆ ವಿಮಾನಗಳನ್ನು ಪೂರೈಸುವ ವ್ಯವಹಾರ ಕುದುರಿಸಲು ಎಂಬ್ರಾಯರ್ ಸಂಸ್ಥೆಯು ಮಧ್ಯವರ್ತಿಯ ನೆರವು ಪಡೆದಿದೆ, ಬ್ರಿಟನ್ ಮೂಲದ ರಕ್ಷಣಾ ಏಜೆಂಟ್ ಇಲ್ಲಿ ಮಧ್ಯವರ್ತಿಯಾಗಿ ಕಾರ್ಯ ನಿರ್ವಹಿಸಿದ್ದ ಎಂದು ಬ್ರೆಜಿಲ್‌ನ ಪತ್ರಿಕೆಯೊಂದು ವರದಿ ಮಾಡಿತ್ತು. ಅಮೆರಿಕದ ಕಾನೂನು ಇಲಾಖೆಯು ಎಂಬ್ರಾಯರ್ ಸಂಸ್ಥೆ ಭಾರತದೊಂದಿಗೆ ನಡೆಸಿದ ವ್ಯವಹಾರದ ಬಗ್ಗೆ ಪರಿಶೋಧನೆ ನಡೆಸುತ್ತಿದೆ ಎಂದೂ ಪತ್ರಿಕೆ ವರದಿ ಮಾಡಿತ್ತು. ಭಾರತದ ರಕ್ಷಣಾ ಸಂಗ್ರಹಣ ನಿಯಮ ಪ್ರಕಾರ ಇಂತಹ ವ್ಯವಹಾರಗಳಲ್ಲಿ ಮಧ್ಯವರ್ತಿಗಳ ಪಾತ್ರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. 2010ರಲ್ಲಿ ಎಂಬ್ರಾಯರ್ ಸಂಸ್ಥೆಯು ಡೊಮಿನಿಕನ್ ರಿಪಬ್ಲಿಕ್ ಜೊತೆ ಒಪ್ಪಂದವೊಂದಕ್ಕೆ ಸಹಿ ಹಾಕಿದ ಬಳಿಕ ಈ ಸಂಸ್ಥೆಯ ವ್ಯವಹಾರದ ಬಗ್ಗೆ ಅಮೆರಿಕ ಸಂಶಯದ ಧೋರಣೆ ಹೊಂದಿದೆ. ಆ ಬಳಿಕ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿ, ಸಂಸ್ಥೆಯು ಇತರ ಎಂಟು ರಾಷ್ಟ್ರಗಳ ಜೊತೆ ನಡೆಸಿದ ವ್ಯವಹಾರವನ್ನೂ ಸೇರಿಸಿ ಕೊಳ್ಳಲಾಯಿತು. ಇದರಿಂದ ಪ್ರೇರಿತಗೊಂಡ ಭಾರತದ ರಕ್ಷಣಾ ಇಲಾಖೆ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯೂ ಎಂಬ್ರಾಯರ್ ಸಂಸ್ಥೆಯಿಂದ ವಿವರಣೆ ಕೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X