Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಮಾದರಿಯ ಗುಜರಾತ್ ನ ಅರ್ಧಕ್ಕೂ...

ಮೋದಿ ಮಾದರಿಯ ಗುಜರಾತ್ ನ ಅರ್ಧಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿಲ್ಲ : ಜಿಗ್ನೇಶ್

ವಾರ್ತಾಭಾರತಿವಾರ್ತಾಭಾರತಿ18 Sept 2016 11:13 PM IST
share
ಮೋದಿ ಮಾದರಿಯ ಗುಜರಾತ್ ನ ಅರ್ಧಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿಲ್ಲ : ಜಿಗ್ನೇಶ್

ಅಹ್ಮದಾಬಾದ್,ಸೆ.18: ಎನ್‌ಡಿಎ ಸರಕಾರವು ಕಾರ್ಮಿಕ ಹಾಗೂ ಬಡವರ ವಿರೋಧಿ ನೀತಿಯನ್ನು ಹೊಂದಿದ್ದು, ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿ ವರ್ತಿಸುತ್ತಿದೆಯೆಂದು ಜಿಗ್ನೇಶ್ ಮೆವಾನಿ ಆಪಾದಿಸಿದ್ದಾರೆ. ಸಮಾಜವನ್ನು ಒಡೆಯುತ್ತಿರುವ ಸಂಘಪರಿವಾರದ ಹಿಂದುತ್ವ ಅಜೆಂಡಾವು ನರಕಕ್ಕೆ ಹೋಗಲಿ ಎಂದವರು ಕಟಕಿಯಾಡಿದ್ದಾರೆ.
  ದಿಲ್ಲಿಯ ಸಂಸತ್‌ಭವನ ರಸ್ತೆಯಲ್ಲಿ ಗುರುವಾರ ನಡೆದ ಬೃಹತ್ ದಲಿತ ಸ್ವಾಭಿಮಾನ ಸಂಘರ್ಷ್ ರ್ಯಾಲಿಯಲ್ಲಿ ಭಾಗವಹಿ ಮಾತನಾಡುತ್ತಿದ್ದ ಮೇವಾನಿ, ಮೋದಿ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘‘ ಕಾರ್ಪೊರೇಟ್ ಸಂಸ್ಥೆಗಳನ್ನು ಹಾಗೂ ಊಳಿಗಮಾನ್ಯ ಜಾತಿ ರಾಜಕೀಯವನ್ನು ಪ್ರೋತ್ಸಾಹಿಸುವುದೇ ಈ ಜನರ ಮನದ ಮಾತಾದರೆ (ಮನ್ ಕಿ ಬಾತ್), ಶ್ರಮಿಕರು ಹಾಗೂ ಕಾರ್ಮಿಕರ ಹಕ್ಕುಗಳ ಬಗ್ಗೆ ಧ್ವನಿಯೆತ್ತುವ ನಾವು, ಹೃದಯದಿಂದ ಮಾತನಾಡುತ್ತಿದ್ದೇವೆ’’ ಎಂದರು.
    ಮೋದಿ ಮುಖ್ಯಮಂತ್ರಿಯಾಗಿದ್ದಾಗ ಅವರ ಗುಜರಾತ್ ಮಾದರಿಯ ಆಡಳಿತವು ಸಂಪೂರ್ಣ ಅನರ್ಥಕಾರಿಯಾಗಿತ್ತೆಂದು ಜಿಗ್ನೇಶ್ ಟೀಕಿಸಿದರು. ‘‘ಮೋದಿ ಅಧಿಕಾರಕ್ಕೆ ಬರುವ ಮೊದಲು ಗುಜರಾತ್‌ನ ಸಾಲದ ಮೊತ್ತ 25 ಸಾವಿರ ಕೋಟಿ ರೂ. ಆಗಿತ್ತು, ಆದರೆ ಈಗ ಅದು 1.80 ಲಕ್ಷ ಕೋಟಿ ರೂ. ದಾಟಿದೆ. ನರ್ಮದಾ ನದಿ ಅಣೆಕಟ್ಟು ಯೋಜನೆಗೆ 90 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದ್ದರೂ, ಈಗಲೂ ಗುಜರಾತ್ ಅರ್ಧ ಭಾಗ ನೀರಿನ ದಾಹದಿಂದ ಬಳಲುತ್ತಿದೆ’’ ಎಂದರು.
  ದಲಿತರಿಗೆ ಜಮೀನಿನಲ್ಲಿ ಅವರ ನ್ಯಾಯಬದ್ಧ ಪಾಲನ್ನು ನೀಡಬೇಕೆಂದು ಆಗ್ರಹಿಸಿದ ಜಿಗ್ನೇಶ್, ಒಂದು ವೇಳೆ ಗುಜರಾತ್ ಸರಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗದಿದ್ದರೆ ಅಕ್ಟೋಬರ್ 1ರಿಂದ ರೈಲ್ ರೋಖೋ ನಡೆಸುವುದಾಗಿ ಘೋಷಿಸಿದರು. ಸಮಾಜವನ್ನು ಜಾತಿಯ ಆಧಾರದಲ್ಲಿ ವಿಭಜಿಸುವ ಸಂಘಪರಿವಾರ, ಗೋರಕ್ಷಕಕರು ಹಾಗೂ ನರೇಂದ್ರ ಮೋದಿಯನ್ನು ಬಲವಾಗಿ ವಿರೋಧಿಸುವ ವಾತಾವರಣವನ್ನು ಸೃಷ್ಟಿಸುವಂತೆ ಅವರು ಬೆಂಬಲಿಗರಿಗೆ ಕರೆ ನೀಡಿದರು.ಸೀತಾರಾಮ್ ಯಚೂರಿ, ರಾಧಿಕಾ ವೇಮುಲಾ ಹಾಗೂ ಬೇಜವಾಡ ವಿಲ್ಸನ್ ಈ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
         ರ್ಯಾಲಿಯಲ್ಲಿ ಭಾಗವಹಿಸಿದ ಬಳಿಕ ಗುಜರಾತ್‌ಗೆ ಹಿಂತಿರುಗಿದ್ದ ಮೇವಾನಿಯನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ತನ್ನ ಜನ್ಮದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಪ್ರವಾಸವನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗರೂಕತಾ ಕ್ರಮವಾಗಿ ಮೇವಾನಿಯನ್ನು ಬಂಧಿಸಲಾಗಿದೆ. ಇದೇ ಸಂದರ್ಭದಲ್ಲಿ ಪಾಟದಾರ್ ಮೀಸಲಾತಿ ಆಂದೋಲನದ ಸಮಿತಿಯ ನಾಯಕ ರೇಶ್ಮಾ ಪಟೇಲ್ ಹಾಗೂ 400 ದಲಿತ ಹಾಗೂ ಪಾಟಿದಾರ್ ಚಳವಳಿಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X