Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇವದಾಸಿ ಪದ್ಧತಿ ಇಂದಿಗೂ ಜೀವಂತವಿರುವುದು...

ದೇವದಾಸಿ ಪದ್ಧತಿ ಇಂದಿಗೂ ಜೀವಂತವಿರುವುದು ದುರಂತ: ನಿಡುಮಾಮಿಡಿ ಶ್ರೀ

ವಾರ್ತಾಭಾರತಿವಾರ್ತಾಭಾರತಿ18 Sept 2016 11:57 PM IST
share
ದೇವದಾಸಿ ಪದ್ಧತಿ ಇಂದಿಗೂ ಜೀವಂತವಿರುವುದು ದುರಂತ: ನಿಡುಮಾಮಿಡಿ ಶ್ರೀ

ಬೆಂಗಳೂರು, ಸೆ.18: ದೇವರು-ಧರ್ಮದ ಹೆಸರಿನಲ್ಲಿ ದೇವದಾಸಿ ಯರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದು, ದೇವದಾಸಿ ಪದ್ಧತಿ ಇಂದಿಗೂ ಮುಂದುವರಿದಿರುವುದು ದುರಂತದ ಸಂಗತಿ ಎಂದು ನಿಡುಮಾಮಿಡಿ ಮಠದ ಪೀಠಾಧ್ಯಕ್ಷ ವೀರಭದ್ರ ಚೆನ್ನಮಲ್ಲ ಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಪುರಭವನದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ರೇಣುಕ ಯಲ್ಲಮ್ಮ ಬಳಗದ ಅಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ,'ಪ್ರತಿಭಾ ಪುರಸ್ಕಾರ' ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
 ರಾಜ್ಯ ಸೇರಿದಂತೆ ದೇಶದಲ್ಲಿ ಪ್ರಸ್ತುತ ಈಗಾಗಲೂ ಈ ಅನಿಷ್ಟ ದೇವದಾಸಿ ಪದ್ಧತಿ ಜೀವಂತವಾಗಿದೆ ಎಂದ ಅವರು, ಪ್ರಾಚೀನ ಕಾಲದಲ್ಲಿ ಕನ್ಯೆಯರನ್ನು ದೇವರ ಪೂಜೆ ಮಾಡುವುದಕ್ಕೆ ಬಿಡುತ್ತಿದ್ದರು. ಈಗಲೂ, ಸಹ ಕನ್ಯಾ ಪೂಜೆ ನೇಪಾಳದಲ್ಲಿ ಕಾಣಬಹುದಾಗಿದೆ. ಅದೇ ರೀತಿ, ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌ಗಳಲ್ಲಿ ನೋಡಬಹುದು. ಕಾಲ ಬದಲಾದಂತೆ ದೇವತೆಗಳ ಹೆಸರಿನಲ್ಲಿ ದೇವದಾಸಿಯರನ್ನು ಅಮಾನುಷವಾಗಿ ನಡೆಸಿಕೊಳ್ಳುತ್ತಿದ್ದಾರೆ. ಇಂತಹ ಅನಿಷ್ಟ ಪದ್ಧತಿಗೆ ಕಡಿವಾಣ ಬೇಕಾಗಿದೆ ಎಂದು ಒತ್ತಾಯಿಸಿದರು.
ದೇವದಾಸಿ ಪದ್ಧತಿ ಸಮಾಜದ ಮೇಲೆ ಹಲವು ದುಪ್ಪರಿಣಾಮ ಬೀರುತ್ತಿದ್ದು, ಹೆಣ್ಣು ಮಕ್ಕಳನ್ನು ಈ ಅನಿಷ್ಟ ಪದ್ಧತಿಗೆ ಬಳಸಿಕೊಳ್ಳ ಲಾಗುತ್ತಿದೆ. ಇನ್ನಾದರೂ ದೇವದಾಸಿ ಪದ್ಧತಿ ಸಂಪೂರ್ಣ ನಿರ್ಮೂಲನೆ ಆಗಬೇಕು. ಇದಕ್ಕೆ ಜನ ಜಾಗೃತಿ ಅಗತ್ಯವಿದೆ ಎಂದ ಅವರು, ದೇವದಾಸಿ ಪದ್ಧತಿ ಜೀವಂತವಾಗಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಬೇಕು ಹಾಗೂ ಹೆಣ್ಣುಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡುವಂತೆ ಆಗ್ರಹಿಸಿದರು.
ಶಾಸಕ ಬಿ.ಶಿವಣ್ಣ ಮಾತನಾಡಿ, ವಿದ್ಯಾರ್ಥಿಗಳು ಸಮಾಜವನ್ನು ತಿದ್ದುವ ಕಾಯಕದಲ್ಲಿ ತೊಡಗಿ ಮೌಲ್ಯ ಶಿಕ್ಷಣವನ್ನು ಪಡೆಯಬೇಕಾಗಿದೆ. ಅಲ್ಲದೆ, ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಾಗಿದ್ದು, ದಾರ್ಶನಿಕ, ತತ್ವಜ್ಞಾನಿಗಳ ಚಿಂತನೆಗಳು, ವಿಚಾರಧಾರೆಗಳು ವಿದ್ಯಾರ್ಥಿ ಸಮುದಾಯಕ್ಕೆ ಮಾದರಿಯಾಗಬೇಕು ಎಂದು ನಿಡುಮಾಮಿಡಿ ಶ್ರೀ ಕಿವಿಮಾತು ಹೇಳಿದರು.
    ಕಾರ್ಯಕ್ರಮದಲ್ಲಿ ಕೆಜಿಎಫ್ ಕ್ಷೇತ್ರದ ಶಾಸಕಿ ವೈ,ರಾಮಕ್ಕ, ಬಳಗದ ಮುಖಂಡ ಬಿ.ವಿ.ಸಂಪಂತ್, ಸಂಘದ ಅಧ್ಯಕ್ಷ ಎಂ. ನಾಗೇಂದ್ರ ಸಕಲವಾರ, ಬಿಜೆಪಿ ಹಿರಿಯ ಉಪಾಧ್ಯಕ್ಷ ಇ.ಅಶ್ವಥ್ ನಾರಾಯಣ್ ಸೇರಿ ಪ್ರಮುಖರು ಹಾಜರಿದ್ದರು. ಇದೇ ವೇಳೆ 103 ವಿದ್ಯಾರ್ಥಿಗಳಿಗೆ 'ಪ್ರತಿಭಾ ಪುರಸ್ಕಾರ' ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X