Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕ್ ಭಯೋತ್ಪಾದಕ ದೇಶ: ರಾಜನಾಥ್ ಕಿಡಿ

ಪಾಕ್ ಭಯೋತ್ಪಾದಕ ದೇಶ: ರಾಜನಾಥ್ ಕಿಡಿ

ವಾರ್ತಾಭಾರತಿವಾರ್ತಾಭಾರತಿ18 Sept 2016 11:58 PM IST
share
ಪಾಕ್ ಭಯೋತ್ಪಾದಕ ದೇಶ: ರಾಜನಾಥ್ ಕಿಡಿ

ಹೊಸದಿಲ್ಲಿ,ಸೆ.18: ಜಮ್ಮುಕಾಶ್ಮೀರದ ಉರಿಯ ಸೇನಾ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 17 ಭಾರತೀಯ ಯೋಧರು ಸಾವನ್ನಪ್ಪಿದ ಬೆನ್ನಲ್ಲೇ ಭಾರತವು ಪಾಕ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಾಕಿಸ್ತಾನವು ಭಯೋತ್ಪಾದಕ ರಾಷ್ಟ್ರವಾಗಿದ್ದು ಅದನ್ನು ಒಂಟಿಯಾಗಿಸಬೇಕು ಎಂದು ಅದು ವಿಶ್ವಸಮುದಾಯವನ್ನು ಆಗ್ರಹಿಸಿದೆ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರವಿವಾರ ದಿಲ್ಲಿಯಲ್ಲಿ ಈ ಬಗ್ಗೆ ಕಟುವಾದ ಹೇಳಿಕೆಯೊಂದನ್ನು ನೀಡಿದ್ದು, ಜಮ್ಮುಕಾಶ್ಮೀರದ ಉರಿಯಲ್ಲಿರುವ ಭೂಸೇನಾ ಬ್ರಿಗೇಡ್‌ನ ಕೇಂದ್ರ ಕಚೇರಿಯ ಮೇಲೆ ದಾಳಿ ನಡೆಸಿದ ಭಯೋತ್ಪಾದಕರು ಉನ್ನತ ಮಟ್ಟದ ತರಬೇತಿ ಪಡೆದವರಾಗಿದ್ದಾರೆ ಹಾಗೂ ಅಪಾರ ಶಸ್ತ್ರಾಸ್ತ್ರಗಳಿಂದ ಸಜ್ಜಿತರಾಗಿದ್ದರೆಂದು ಹೇಳಿದ್ದಾರೆ ಹಾಗೂ ಈ ದಾಳಿಯ ಹಿಂದಿರುವವರನ್ನು ಬೇಟೆಯಾಡುವುದಾಗಿ ಅವರು ಪ್ರತಿಜ್ಞೆಗೈದರು. ಭಯೋತ್ಪಾದಕರು ಹಾಗೂ ಭಯೋತ್ಪಾದಕ ಗುಂಪುಗಳಿಗೆ ಪಾಕ್ ತನ್ನ ಬೆಂಬಲವನ್ನು ಮುಂದುವರಿಸಿರುವ ಬಗ್ಗೆ ರಾಜನಾಥ್‌ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘‘ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಗುರುತಿಸಬೇಕು ಹಾಗೂ ಅದನ್ನು ಒಂಟಿಯಾಗಿಸಬೇಕು’’ ಎಂದು ಅವರು ವಿಶ್ವಸಮುದಾಯವನ್ನು ಆಗ್ರಹಿಸಿದರು.

   ಉರಿ ಭಯೋತ್ಪಾದಕ ದಾಳಿ ಘಟನೆಯ ಬಳಿಕ ಹೊಸದಿಲ್ಲಿಯಲ್ಲಿ ಸುಮಾರು ಒಂದು ತಾಸು ಕಾಲ ನಡೆದ ಸಭೆಯ ನೇತೃತ್ವವನ್ನು ಸಿಂಗ್ ವಹಿಸಿದ್ದರು. ಸಭೆಯಲ್ಲಿ ನಡೆದ ಮಾತುಕತೆಯ ವಿವರವನ್ನು ಪ್ರಧಾನಿಗೆ ನೀಡಿರುವೆನೆಂದು ಅವರು ಪತ್ರಕರ್ತರಿಗೆ ತಿಳಿಸಿದರು. ಈ ಭೀಕರ ಭಯೋತ್ಪಾಕ ದಾಳಿಯಲ್ಲಿ 17 ಮಂದಿ ಯೋಧರು ಸಾವನ್ನಪ್ಪಿದ ಘಟನೆಯ ಬಗ್ಗೆ ರಾಜ್‌ನಾಥ್ ತೀವ್ರ ವಿಷಾದ ವ್ಯಕ್ತಪಡಿಸಿದರು.

 ‘‘ಹುತಾತ್ಮ ಯೋಧರ ಕುಟುಂಬಗಳಿಗೆ ಹೃದಯಾಂತರಾಳದಿಂದ ಸಂತಾಪವನ್ನು ನಾನು ವ್ಯಕ್ತಪಡಿಸುತ್ತೇನೆ ಹಾಗೂ ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ’’ ಎಂದು ರಾಜ್‌ನಾಥ್ ಹೇಳಿದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಇಲಾಖೆ,ರಕ್ಷಣೆ ಹಾಗೂ ಸೇನೆ ಮತ್ತು ಅರೆಸೈನಿಕ ಪಡೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ದಾಳಿ ಘಟನೆಯ ಬೆನ್ನಲ್ಲೇ ರಾಜ್‌ನಾಥ್ ತನ್ನ ನಿಗದಿತ ರಶ್ಯ ಹಾಗೂ ಅವೆುರಿಕ ಭೇಟಿಯನ್ನು ರದ್ದುಪಡಿಸಿದರು.

ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಗುರುತಿಸಬೇಕು ಹಾಗೂ ಅದನ್ನು ವಿಶ್ವ ಸಮುದಾಯದೆದುರು ಒಂಟಿಯಾಗಿಸಬೇಕಾಗಿದೆ.
- ರಾಜನಾಥ್ ಸಿಂಗ್, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X