Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮೀಣ ಸಂಸ್ಕೃತಿಯನ್ನು ಮುಂದಿನ...

ಗ್ರಾಮೀಣ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಡುಗೆ ನೀಡಿ: ಹಿರೇಮಗಳೂರು ಕಣ್ಣನ್

ನಂದಿಕೆರೆಯಲ್ಲಿ ಒಗಟು-ಜಿಗಟು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ19 Sept 2016 10:02 PM IST
share

ಚಿಕ್ಕಮಗಳೂರು, ಸೆ.19: ಹಳ್ಳಿಗಳು ಅಪೂರ್ವವಾದ ಕಲೆ, ಸಂಸ್ಕೃತಿ, ಸಂಪ್ರದಾಯಗಳ ಸಂಪತ್ತು ಹೊಂದಿವೆ. ಹಳ್ಳಿಯ ಈ ಸಂಪತ್ತನ್ನು ಚಿತ್ರೀಕರಿಸಿ ದಾಖಲೆಯಾಗಿ ಇಟ್ಟುಕೊಳ್ಳದಿದ್ದರೆ ಮುಂದೊಂದು ದಿನ ನೋಡಲು ಯುವ ಜನಾಂಗಕ್ಕೆ ಪಳೆಯುಳಿಕೆಗಳೂ ಸಿಗುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಯಭಾರಿ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅಭಿಪ್ರಾಯಪಟ್ಟರು.

ಸಮೀಪದ ನಂದಿಕೆರೆ ಗ್ರಾಮದಲ್ಲಿ ಜಿಲ್ಲಾ ಕಸಾಪ ಆಯೋಜಿಸಿದ್ದ ಒಗಟು-ಜಿಗಟು ಕಾರ್ಯಕ್ರಮದಲ್ಲಿ ಸಾಹಿತ್ಯ ರಸದೌತಣ ವಿಷಯ ಕುರಿತು ಅವರು ಮಾತನಾಡಿದರು.

ಹಳ್ಳಿಗಳಲ್ಲಿ ಜನರು ಜ್ಞಾನ ಸಂಪತ್ತಿನ ಜೊತೆಗೆ ಅನುಭವದ ಸಂಪತ್ತನ್ನು ಹೊಂದಿದ್ದಾರೆ. ಅನುಭವದ ಮೂಲಕ ಹಳ್ಳಿಗಳಲ್ಲಿ ನಮ್ಮ ಹಿರಿಯರು ಸಂಸ್ಕೃತಿ, ಸಂಪ್ರದಾಯ, ಕಲೆಯನ್ನು ಕಟ್ಟಿ ಬೆಳೆಸಿದ್ದಾರೆ. ಅವುಗಳು ಅಳಿಸದಂತೆ ಎಲ್ಲರೂ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಒಗಟು, ಗಾದೆ ಮಾತುಗಳು ನಮ್ಮ ಹಳ್ಳಿಯ ಜನರ ಅನುಭವದ ಮಾತುಗಳಾಗಿವೆ. ಹಳ್ಳಿಗಳಲ್ಲಿ ಜನರು ನೆಮ್ಮದಿ, ಶಾಂತಿ, ಸಾಮರಸ್ಯದಿಂದ ಪರಸ್ಪರ ಸಹಕಾರ, ಹೊಂದಾಣಿಕೆ ಮೂಲಕ ಬದುಕು ಸಾಗಿಸುತ್ತಿದ್ದರು. ಆದರೆ, ಇಂದು ಅಪರೂಪ ವಾಗಿರುವ ಹಳ್ಳಿಯ ಸಂಪತ್ತು ಆಧುನಿಕತೆಯ ಸೊಂಕಿನಿಂದ ಅವನತಿ ಹೊಂದುವ ಹಂತ ತಲುಪಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಚಿಕ್ಕಮಗಳೂರು ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್. ನಂಜೇಗೌಡ ಮಾತನಾಡಿ, ಆಧುನಿಕತೆಯ ಭರಾಟೆಯಿಂದಾಗಿ ನಮ್ಮ ಸಂಸ್ಕೃತಿ, ಕಲೆ ಕಣ್ಮರೆ ಯಾಗುತ್ತಿದೆ. ಹೊಲ ಗದ್ದೆಗಳಲ್ಲಿ ಜನರು ಹಾಡುತ್ತಿದ್ದ ಕೋಲಾಟದ ಪದಗಳು, ಸೋಬಾನೆ ಪದಗಳು, ಒಗಟು, ಗಾದೆ ಮಾತುಗಳು ಇಂದು ಕಣ್ಮರೆಯಾಗುತ್ತಿವೆ ಎಂದರು.

ಶಾಸಕ ಬಿ.ಬಿ. ನಿಂಗಯ್ಯ ಮಾತನಾಡಿ, ಒಗಟು ಜಿಗಟು ಅಪರೂಪದ ಕಾರ್ಯಕ್ರಮವಾಗಿದೆ. ಹಿಂದಿನ ದಿನಗಳಲ್ಲಿ ಹಳ್ಳಿಗಳಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಖುಷಿ, ಸಂಭ್ರಮ ಕಂಡು ಬರುತ್ತಿತ್ತು. ಆದರೆ, ಇಂದು ಆಧುನಿಕತೆಯಿಂದಾಗಿ ಕಡಿಮೆಯಾಗುತ್ತಿದೆ. ಭಾಷೆಗಳು ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತವೆ. ಸ್ನೇಹ ಸಂಬಂಧ ವೃದ್ಧಿಗೆ ಸಹಕಾರಿಯಾಗುತ್ತವೆ ಎಂದರು.

         

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಂದೂರು ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ಒಗಟು ಜಿಗಟು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆರೇನಹಳ್ಳಿ, ನಂದಿಕೆರೆ, ಹಲಸುಮನೆ, ವಳಗೇರ ಹಳ್ಳಿ, ತೊಂಡವಳ್ಳಿ ತಂಡಗಳಿಗೆ ಜಿಲ್ಲಾ ಪಂಚಾಯತ್ ಸದಸ್ಯ ಹಿರಿಗಯ್ಯ ಬಹುಮಾನ ವಿತರಿಸಿದರು. ತಾಪಂ ಸದಸ್ಯ ಡಿ.ಜೆ. ಸುರೇಶ್, ಮಹೇಶ್, ವಸ್ತಾರೆ ಗ್ರಾಪಂ ಅಧ್ಯಕ್ಷ ರವಿ, ಉಪಾಧ್ಯಕ್ಷೆ ಜ್ಯೋತಿ, ತಾಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ವಸ್ತಾರೆ ಹೋಬಳಿ ಕಸಾಪ ಅಧ್ಯಕ್ಷ ಟಿ.ಎ. ನಿಂಗೇಗೌಡ, ಮುಖಂಡ ದೀಪಕ್ ದೊಡ್ಡಯ್ಯ ಉಪಸ್ಥಿತರಿದ್ದರು. ಕನ್ನೇನಹಳ್ಳಿ ಬಾಲು ಮತ್ತಿತರರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X