Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಣಮಟ್ಟದ ಚಾಲಕರ ನೇಮಕಾತಿಗೆ ಆದ್ಯತೆ:...

ಗುಣಮಟ್ಟದ ಚಾಲಕರ ನೇಮಕಾತಿಗೆ ಆದ್ಯತೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಚಾಲಕರ ತಾಂತ್ರಿಕ ಕೌಶಲ್ಯ ಅಭಿವೃದ್ಧಿ ಕೇಂದ್ರ, ಕಳಸಾಪುರ ಬಸ್ ನಿಲ್ದಾಣ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ19 Sept 2016 10:13 PM IST
share
ಗುಣಮಟ್ಟದ ಚಾಲಕರ ನೇಮಕಾತಿಗೆ ಆದ್ಯತೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಚಿಕ್ಕಮಗಳೂರು, ಸೆ.19: ಅಪಘಾತ ಕಡಿಮೆಯಾಗಲು ಗುಣಮಟ್ಟದ ಚಾಲಕರುಗಳ ಅವಶ್ಯವಿದ್ದು, ಈ ಹಿನ್ನಲೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. 

ಅವರು ಸೋಮವಾರ ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನೂತನವಾಗಿ ನಿರ್ಮಿಸಿರುವ ಚಾಲಕರ ಮತ್ತು ತಾಂತ್ರಿಕ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಕಳಸಾಪುರ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಸಾರಿಗೆ ನಿಗಮವು ನಷ್ಟದಲ್ಲಿದ್ದರೂ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆಯನ್ನು ನೀಡುತ್ತಿದೆ. ರಾಜ್ಯದಲ್ಲಿ ಒಟ್ಟು 7 ತರಬೇತಿ ಕೇಂದ್ರಗಳಿವೆ. ಚಿಕ್ಕಮಗಳೂರಿನಲ್ಲಿ 8ನೆ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, 8 ನೆ ತರಗತಿ ಓದಿದವರಿಗೆ ಮಾತ್ರ ತರಬೇತಿ ನೀಡಬೇಕೆಂಬ ನಿಯಮ ರಾಜ್ಯದಲ್ಲಿದ್ದು, ಇದರಿಂದ ಚಾಲಕರ ಕೊರತೆ ಉದ್ಭವಿಸಿದೆ ಎಂದ ಅವರು ವಿದ್ಯಾರ್ಹತೆ ಸಡಿಲಗೊಳಿಸುವ ಚಿಂತನೆಯನ್ನು ಸರಕಾರ ನಡೆಸಿದೆ ಎಂದರು.

   ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಮಾತನಾಡಿ, ಪ್ರಯಾಣಿಕರ ಸುರಕ್ಷತೆ ಮುಖ್ಯವಾಗಿದೆ. ಇದಕ್ಕೆ ಪೂರಕವಾಗಿ ಚಾಲಕರ ತರಬೇತಿ ಹಾಗೂ ತಾಂತ್ರಿಕ ಕೌಶಲ್ಯ ಅಭಿವೃದ್ಧಿ ಕೇಂದ್ರ ತೆರೆಯಲಾಗಿದೆ. ಉತ್ತಮ ಚಾಲನೆ ಹಾಗೂ ಸುರಕ್ಷತೆ ಚಾಲನೆ ಮಾಡಿದವರಿಗೆ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ. ಮಲೆನಾಡು ಭಾಗದಲ್ಲಿ ಮೂಡಿಗೆರೆ ಡಿಪೋಗೆ ಹೊಸ ಬಸ್ಸುಗಳನ್ನು ನೀಡಬೇಕು ಎಂದರು. ಶಾಸಕ ಸಿ.ಟಿ ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ತರಬೇತಿಗಾಗಿ ಹಾಸನಕ್ಕೆ ಹೋಗಬೇಕಿತ್ತು. ಆದರೆ ನಗರದಲ್ಲಿ ತರಬೇತಿ ಕೇಂದ್ರ ಮಾಡಿರುವುದು ಅನುಕೂಲವಾಗಿದೆ. ಕೆಎಸ್ಸಾರ್ಟಿಸಿ ಸಂಸ್ಥೆಯನ್ನು ಇನ್ನಷ್ಟು ವೃತ್ತಿಪರ ಹಾಗೂ ಜನಸ್ನೇಹಿಯಾಗಿ ರೂಪಿಸಬೇಕು ಎಂದರು. ಬಂದ್ ಹಾವಳಿಗಳಿಂದ ಕೆಎಸ್ಸಾರ್ಟಿಸಿ ಬಸ್ಸುಗಳು ಹಾಳಾಗುತ್ತಿವೆ. ಹೋರಾಟಗಾರರ ಮನಸ್ಥಿತಿಯನ್ನು ಬದಲಾಯಿಸುವ ಆವಶ್ಯಕತೆ ಇದೆ. ವಾರದ ಕೊನೆಯ ದಿನಗಳಲ್ಲಿ ಜಿಲ್ಲೆಗೆ ಹೆಚ್ಚು ಪ್ರವಾಸಿಗರು ಬರುತ್ತಿದ್ದು, ಇವರ ಅನುಕೂಲತೆಗೆ ಹೆಚ್ಚುವರಿ ಡಿಲಕ್ಸ್ ಬಸ್ಸುಗಳನ್ನು ಬಿಡಬೇಕು. ವರ್ಷದಲ್ಲಿ ಎರಡು ಬಾರಿ ಸಾರಿಗೆ ಅದಾಲತ್ ನಡೆಸಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಪಂ ಸದಸ್ಯೆ ಪ್ರೇಮಾ ಮಂಜುನಾಥ್, ತೇಗೂರು ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಕಳಸಾಪುರ ಗ್ರಾಪಂ ಅಧ್ಯಕ್ಷೆ ಎಸ್.ಡಿ. ಶಶಿಕಲಾ ಲೋಕೇಶ್, ತಾಪಂ ಸದಸ್ಯೆ ಕುಸುಮಾ ದೊಡ್ಡೇಗೌಡ, ತಾಪಂ ಅಧ್ಯಕ್ಷ ಈ. ಮಹೇಶ್, ಗ್ರಾಪಂ ಸದಸ್ಯರಾದ ಜಯಣ್ಣ, ಚಂದ್ರ, ನರೇಂದ್ರ ಹಾಗೂ ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X