Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಹಕಾರಿ ಸಂಸ್ಥೆಗಗಳಿಂದ ಸಾಮಾಜಿಕ...

ಸಹಕಾರಿ ಸಂಸ್ಥೆಗಗಳಿಂದ ಸಾಮಾಜಿಕ ಜವಾಬ್ದಾರಿ: ಮಾಜಿ ಸಚಿವ ವಿನಯಕುಮಾರ್ ಸೊರಕೆ

2015-16ನೆ ಸಾಲಿನ ಸಭೆ ಸಹ್ಯಾದ್ರಿ ಅಡಿಕೆ ಬೆಳೆಗಾರರ ಸಂಸ್ಥೆಯಿಂದ ವಾರ್ಷಿಕ 284 ಕೋ. ರೂ. ವ್ಯವಹಾರ

ವಾರ್ತಾಭಾರತಿವಾರ್ತಾಭಾರತಿ19 Sept 2016 10:15 PM IST
share
ಸಹಕಾರಿ ಸಂಸ್ಥೆಗಗಳಿಂದ ಸಾಮಾಜಿಕ ಜವಾಬ್ದಾರಿ: ಮಾಜಿ ಸಚಿವ ವಿನಯಕುಮಾರ್ ಸೊರಕೆ

ತೀರ್ಥಹಳ್ಳಿ, ಸೆ.19: ಸಹಕಾರಿ ಸಂಸ್ಥೆಗಳು ತಾನೂ ಬೆಳೆಯುವುದರ ಜೊತೆಗೆ ಸಮಾಜವನ್ನು ಬೆಳೆಸುತ್ತಿವೆ. ಸಹಕಾರಿ ಸಂಸ್ಥೆಗಳು ಊರಿಗೆ ಬೆಳಕು ನೀಡುವ ಕೆಲಸ ಮಾಡುತ್ತಿದ್ದು, ತೀರ್ಥಹಳ್ಳಿ ಸಹ್ಯಾದ್ರಿ ಸಮೂಹ ಸಂಸ್ಥೆ ಸಾಮಾಜಿಕ ಜವಾಬ್ದಾರಿಯುತ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ತೀರ್ಥಹಳ್ಳಿಯ ಸಹ್ಯಾದ್ರಿ ಅಡಿಕೆ ಬೆಳೆಗಾರರ ಸಂಸ್ಥೆ, ಶರಾವತಿ ಪತ್ತಿನ ಸಹಕಾರ ಸಂಘ ಹಾಗೂ ಸಮೃದ್ಧಿ ಸಂಸ್ಥೆಯವರ 2015-16ನೆ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಮಲೆನಾಡಿಗೆ ಸಹಕಾರಿ ಕ್ಷೇತ್ರದಲ್ಲಿ ಪ್ರಬಲ ಸಂಬಂಧವಿದೆ. ಗ್ರಾಹಕರು ಹಾಗೂ ಸಂಸ್ಥೆಗಳ ನಡುವೆ ಪ್ರೀತಿ, ವಿಶ್ವಾಸದಿಂದ ವ್ಯವಹಾರ ಸಂಬಂಧ ವೃದ್ಧಿಯಾಗಬೇಕು. ಸಹಕಾರಿ ಕ್ಷೇತ್ರದಲ್ಲಿ ಛಾಪನ್ನು ಮೂಡಿಸಿರುವ ಶ್ರೀ ವೀರೇಂದ್ರ ಹೆಗ್ಗಡೆಯವರ ಸಾಧನೆ ಬೇರೆ ಕ್ಷೇತ್ರದವರಿಗೂ ಮಾದರಿಯಾಗಬೇಕು. ಸಹಕಾರಿ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಿದಾಗ ಅವರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದರು.

ಕ್ಷೇತ್ರದ ಶಾಸಕ ಕಿಮ್ಮನೆ ರತ್ನಾಕರ ಮಾತನಾಡಿ, ಮಲೆನಾಡ ಜನರ ಬದುಕನ್ನು ಉಳಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಬಹು ಮುಖ್ಯವಾಗಿದೆ. ಅಡಿಕೆ ಬೆಳೆಯನ್ನೇ ನಂಬಿಕೊಂಡು ಬದುಕು ಸಾಗಿಸುತ್ತಿರುವ ಮಲೆನಾಡಿಗರಿಗೆ ಮತ್ತೆ ಆತಂಕ ಕಾಡುವಂತಾಗಿದೆ. ಅಡಿಕೆಯಲ್ಲಿ ಹಾನಿಕಾರಕ ಅಂಶವಿದೆಯೆಂಬ ವರದಿ ಬಂದಿದ್ದು, ಅಡಿಕೆಯನ್ನು ನಿಷೇಧ ಮಾಡಬೇಕು ಎಂಬ ಚರ್ಚೆ ಒಂದೆಡೆ ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ಮಲೆನಾಡಿನ ಅಡಿಕೆ ಬೆಳೆಗಾರರು ಹೋರಾಟ ಮಾಡುವ ಸಂದರ್ಭ ಬರಬೇಕಾದೀತು ಎಂದರು.

 ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹ್ಯಾದ್ರಿ ಸಮೂಹ ಸಂಸ್ಥೆಯ ಅಧ್ಯಕ್ಷ ಬಸವಾನಿ ವಿಜಯದೇವ್, 2015-16ನೆ ಸಾಲಿನಲ್ಲಿ ಸಹ್ಯಾದ್ರಿ ಸಂಸ್ಥೆ 35 ಲಕ್ಷ ನಿವ್ವಳ ಲಾಭ, ಶರಾವತಿ ಪತ್ತಿನ ಸಂಸ್ಥೆ 24 ಲಕ್ಷ ನಿವ್ವಳ ಲಾಭ ಹಾಗೂ ಸಮೃದ್ಧಿ ಸಂಸ್ಥೆ 2.16 ಲಕ್ಷ ನಿವ್ವಳ ಲಾಭ ಪಡೆದಿದೆ. ಸಹ್ಯಾದ್ರಿ ಸಂಸ್ಥೆ 284 ಕೋಟಿ ವ್ಯವಹಾರ ನಡೆಸುವುದರ ಮೂಲಕ ರಾಜ್ಯದಲ್ಲೇ ಅತ್ಯುತ್ತಮ ಸಹಕಾರಿ ಸಂಸ್ಥೆಯಾಗಿ ಮುನ್ನಡೆಯುವ ಹಾದಿಯಲ್ಲಿದೆ ಎಂದು ಹೇಳಿದರು.

ಈ ಸಭೆಯಲ್ಲಿ ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಕೆ.ಎ. ವೆಂಕಟೇಶ್, ಸಹ್ಯಾದ್ರಿ ಸಮೃದ್ಧಿ ಮತ್ತು ಶರಾವತಿ ಸಂಸ್ಥೆಯ ನಿದೇಶಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ನಿವೃತ್ತ ಲೆಕ್ಕ ಪರಿಶೋಧಕ ಬಿ.ಡಿ. ನರೇಂದ್ರ, ಸಹ್ಯಾದ್ರಿ ಬಸ್ ಚಾಲಕ ಅರುಣ್ ಹೊಸನಗರ, ನಿರ್ವಾಹಕ ಬಿ.ಡಿ. ಗಂಗಾಧರ್‌ರವರನ್ನು ಪುರಸ್ಕರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X