Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಘಪರಿವಾರದಿಂದಲೇ ಗೋಧ್ರಾ ರೈಲಿಗೆ...

ಸಂಘಪರಿವಾರದಿಂದಲೇ ಗೋಧ್ರಾ ರೈಲಿಗೆ ಬೆಂಕಿ: ಕಾಟ್ಜು

ವಾರ್ತಾಭಾರತಿವಾರ್ತಾಭಾರತಿ19 Sept 2016 11:53 PM IST
share
ಸಂಘಪರಿವಾರದಿಂದಲೇ ಗೋಧ್ರಾ ರೈಲಿಗೆ ಬೆಂಕಿ: ಕಾಟ್ಜು

ಹೊಸದಿಲ್ಲಿ, ಸೆ.19: 2002ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ್ದು ಸಂಘಪರಿವಾರ ಎಂದು ಸುಪ್ರೀಂಕೋರ್ಟಿನ ಮಾಜಿ ನ್ಯಾಯಾಧೀಶ ಹಾಗೂ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಮಾರ್ಕಾಂಡೇಯ ಕಾಟ್ಜು ಆರೋಪಿಸಿದ್ದಾರೆ. ಸಾಮಾಜಿಕ ತಾಣದಲ್ಲಿ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ತೀವ್ರ ಚರ್ಚೆಯನ್ನು ಹುಟ್ಟಿಸಿ ಹಾಕಿದೆ. ತನ್ನ ಫೇಸ್‌ಬುಕ್ ಪುಟದಲ್ಲಿ ಅವರು ಹೀಗೆಂದು ಬರೆದಿದ್ದಾರೆ. ‘‘ಗುಜರಾತ್ ರಾಜ್ಯದ ಗೋಧ್ರಾದಲ್ಲಿ 2002ರಲ್ಲಿ ನಡೆದ ಮತೀಯ ಹಿಂಸಾಚಾರದಲ್ಲಿ 2000 ಕ್ಕೂ ಅಧಿಕ ಮುಸಲ್ಮಾನರು ಸಾವಿಗೀಡಾಗಿದ್ದರು. ಅವರಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಕೂಡ ಸೇರಿದ್ದರು.

   ಕೆಲವು ಜನರು ಈ ಹಿಂಸಾಚಾರವು ಸಾಬರಮತಿ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ಹಚ್ಚಿ ಹಿಂದೂ ಸಮುದಾಯದ 54 ಜನರ ಸಾವಿಗೆ ಕಾರಣವಾದ ಘಟನೆಗೆ ಪ್ರತೀಕಾರ ಎಂದು ಹೇಳಲಾಗುತ್ತಿದೆ. ನನ್ನ ನಂಬಿಕೆಯ ಪ್ರಕಾರ ಕೆಲ ಬಲಪಂಥೀಯ ಹಿಂದೂ ಸಂಘಟನೆಗಳೇ ಮುಸ್ಲಿಮರ ವಿರುದ್ಧ ಆರೋಪ ಹೊರಿಸುವ ಉದ್ದೇಶದಿಂದ ಗೋಧ್ರಾದಲ್ಲಿ ಹಿಂದೂಗಳ ಹತ್ಯೆಗೆ ಸಂಚು ನಡೆಸಿತ್ತು’’

 ‘‘ಜರ್ಮನಿಯ ಕ್ರಿಸ್ಟಾಲ್ ನಾಚ್ಟ್‌ನಲ್ಲಿ ಯಹೂದ್ಯರ ವಿರುದ್ಧ ನವೆಂಬರ್ 10, 1938ರಲ್ಲಿ ನಡೆದ ದೌರ್ಜನ್ಯಗಳಿಗೆ ವಿರುದ್ಧವಾಗಿ ಪ್ಯಾರಿಸ್‌ನಲ್ಲಿ ಜರ್ಮನಿ ರಾಜತಾಂತ್ರಿಕರ ಹತ್ಯೆ ನಡೆದಿತ್ತು ಎಂದು ನಾಝಿಗಳು ಹೇಳಿಕೊಂಡಿದ್ದರು. ಇದು ಗೋಯೆರಿಂಗ್, ಹಿಮ್ಲರ್ ಹಾಗೂ ಹೇಡ್ರಿಚ್ ಅವರ ಷಡ್ಯಂತ್ರವಾಗಿತ್ತೆಂದು ಎಲ್ಲರಿಗೂ ತಿಳಿದಿತ್ತು’’ ಎಂಬ ವಿಚಾರವನ್ನು ವಿವರಿಸಿದ್ದಾರೆ.

   ‘‘ಹಿಂದೂ ಮೂಲಭೂತವಾದ ಸಂಘಟನೆಯೇ ಗೋಧ್ರಾದಲ್ಲಿ 54 ಹಿಂದೂಗಳ ಹತ್ಯೆಗೆ ಕಾರಣವೇ ಹೊರತು ಮುಸ್ಲಿಮರಲ್ಲವೆನ್ನುವುದಕ್ಕೆ ಏನು ಆಧಾರವಿದೆ ಎಂದು ಹಲವರು ನನ್ನಲ್ಲಿ ಕೇಳಿದ್ದಾರೆ. ಹೌದು, ನಿಜವೆಂದರೆ ನನ್ನಲ್ಲಿ ಸಾಕಷ್ಟು ನೇರ ಸಾಕ್ಷವಿಲ್ಲದಿದ್ದರೂ ಕೆಲ ಸಾಂದರ್ಭಿಕ ಸಾಕ್ಷಗಳಿವೆ. ಇಲ್ಲಿರುವ ಪ್ರಶ್ನೆಯೆಂದರೆ 54 ಹಿಂದೂ ‘ರಾಮಭಕ್ತ’ರನ್ನು ಕೊಲ್ಲುವುದರಿಂದ ಯಾರಿಗೆ ಪ್ರಯೋಜನವಾಗುವುದು? ಮುಸ್ಲಿಮರ ವಿರುದ್ಧ ದಾಳಿ ನಡೆಸಲು ಇದನ್ನೇ ನೆಪವಾಗಿಸಿದ ಕೆಲವರೇ ಇದಕ್ಕೆ ಕಾರಣ. ಗುಜರಾತ್ ರಾಜ್ಯದಲ್ಲಿ ಒಮ್ಮಿಂದೊಮ್ಮೆಗೇ ಮತೀಯ ವಿಭಜನೆ ನಡೆದಿತ್ತು. ಶೇ.91 ಹಿಂದೂಗಳು ಒಂದು ಕಡೆ ಹಾಗೂ ಶೇ.9 ಮುಸ್ಲಿಮರು ಇನ್ನೊಂದು ಕಡೆ ಇದ್ದರು. ಇಲ್ಲಿ ನನಗೆ ಗ್ಲೀವಿಟ್ಝ್ ಘಟನೆ ಜ್ಞಾಪಕಕ್ಕೆ ಬರುತ್ತದೆ’’ ಎಂದು ಹೇಳಿದ್ದಾರೆ.

   ‘‘ಹಿಟ್ಲರ್‌ಗೆ ಪೋಲಂಡ್‌ನ ಮೇಲೆ ಆಕ್ರಮಣ ಮಾಡಬೇಕಿತ್ತು. ಆದರೆ ಅದಕ್ಕೆ ಆತನಿಗೆ ನೆಪವೊಂದು ಬೇಕಿತ್ತು. ಅದಕ್ಕಾಗಿ ಆತ ಕೆಲ ಜರ್ಮನ್ನರನ್ನು ಪೋಲಿಶ್ ಸೈನಿಕರ ಸಮವಸ್ತ್ರ ಧರಿಸುವಂತೆ ಮಾಡಿ ಜರ್ಮನಿಯ ರೇಡಿಯೋ ಸ್ಟೇಶನ್ ಮೇಲೆ ದಾಳಿ ನಡೆಸುವಂತೆ ಆದೇಶಿಸಿದ. ನಂತರ ಈ ದಾಳಿಗೆ ಪೋಲಂಡ್ ಕಾರಣವೆಂದು ಆತ ಘೋಷಿಸಿದ ಹಾಗೂ ಜರ್ಮನಿಯ ಸೇನೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿ ಪರೋಕ್ಷವಾಗಿ ಪೋಲಂಡ್ ಮೇಲೆ ಆಕ್ರಮಣದ ಸೂಚನೆಯಿತ್ತಿದ್ದ’’ ಎಂದು ಕಾಟ್ಜು ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X