Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಯಿಯ ಮೃತದೇಹವನ್ನು ಟ್ರಾಲಿ...

ತಾಯಿಯ ಮೃತದೇಹವನ್ನು ಟ್ರಾಲಿ ರಿಕ್ಷಾದಲ್ಲಿ ಸಾಗಿಸಿದ ಬಡ ಯುವಕ

ವಾರ್ತಾಭಾರತಿವಾರ್ತಾಭಾರತಿ20 Sept 2016 4:09 PM IST
share
ತಾಯಿಯ ಮೃತದೇಹವನ್ನು ಟ್ರಾಲಿ ರಿಕ್ಷಾದಲ್ಲಿ ಸಾಗಿಸಿದ ಬಡ ಯುವಕ

ಹೊಸದಿಲ್ಲಿ, ಸೆ.20: ಸೂಕ್ತ ಸಾರಿಗೆ ಹಾಗೂ ಆರೋಗ್ಯ ಸೇವಾ ಸೌಲಭ್ಯಗಳಿಲ್ಲದ ಒಡಿಶಾದಲ್ಲಿ ಇನ್ನೊಂದು ಹೃದಯವಿದ್ರಾವಕ ಘಟನೆ ವರದಿಯಾಗಿದೆ. ರಾಜ್ಯದ ಜಜ್ಪುರ ಜಿಲ್ಲಾಸ್ಪತ್ರೆಯಲ್ಲಿ ಪನಾ ತಿರಿಕಾ ಎಂಬ ಮಹಿಳೆ ಮೃತ ಪಟ್ಟಾಗ ಆಕೆಯ ಮೃತದೇಹವನ್ನು ಮನೆಗೆ ಸಾಗಿಸಲು ಖಾಸಗಿ ವಾಹನಗಳು ಬೇಡಿಕೆಯಿಟ್ಟ ದೊಡ್ಡ ಮೊತ್ತ ನೀಡಲು ಆಕೆಯ ಬಡ ಕುಟುಂಬಕ್ಕೆ ಸಾಧ್ಯವಾಗದೇ ಇದ್ದಾಗ ಆಕೆಯ ಪುತ್ರ ಗುಣ ತಿರಿಕಾ ಉಪಾಯವಿಲ್ಲದೆ ತಾಯಿಯ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಆಸ್ಪತ್ರೆಯಿಂದ ಸುಮಾರು 4 ಕಿಮೀ ದೂರವಿರುವ ಅಂಕುಲ ಗ್ರಾಮದಲ್ಲಿರುವ ತನ್ನ ಮನೆಯ ತನಕ ಸಾಗಿಸಿದ್ದಾನೆ.

ನಮಗೆ ಯಾವುದೇ ಸಾರಿಗೆ ಸೌಲಭ್ಯ ದೊರೆಯಲಿಲ್ಲ. ಖಾಸಗಿ ವಾಹನಗಳು ದೊಡ್ಡ ಮೊತ್ತದ ಬೇಡಿಕೆಯಿಟ್ಟವು. ಕೊನೆಗೆ ಉಪಾಯವಿಲ್ಲದೆ ಟ್ರಾಲಿ ರಿಕ್ಷಾದ ಮೊರೆ ಹೋದೆವು, ಎಂದು ಕುಟುಂಬ ಸದಸ್ಯರೊಬ್ಬರು ವಿವರಿಸಿದ್ದಾರೆ.

ಮೂಲಗಳ ಪ್ರಕಾರ ವಿಶ್ವಕರ್ಮ ಪೂಜೆಯ ನಿಮಿತ್ತ ಜಜ್ಪುರ ಜಿಲ್ಲಾಸ್ಪತ್ರೆಯಲ್ಲಿ ಆ ದಿನ ಯಾವುದೇ ಅಂಬ್ಯುಲೆನ್ಸ್ ದೊರೆತಿರಲಿಲ್ಲ. ಅತ್ತ ಜಜ್ಪುರ ಜಿಲ್ಲೆಯ ಸಹಾಯಕ ವೈದ್ಯಾಧಿಕಾರಿ ಶಿಬಶಿಶ್ ಮಹರಾಣ ಅವರ ಪ್ರಕಾರ ಮಹಿಳೆಯ ಕುಟುಂಬದ ನಾಲ್ಕೈದು ಮಂದಿ ಸದಸ್ಯರಿದ್ದರೂ ಯಾರು ಕೂಡ ಮೃತದೇಹ ಸಾಗಿಸಲು ವಾಹನ ವ್ಯವಸ್ಥೆ ಬೇಕೆಂದು ಕೇಳಿಲ್ಲ.

ಕೆಲ ವಾರಗಳ ಹಿಂದೆ ದಾರಿ ಮಧ್ಯದಲ್ಲಿ ಅಂಬ್ಯುಲೆನ್ಸ್ ಚಾಲಕನೊಬ್ಬ ಇಳಿಸಿ ಹೋಗಿದ್ದರಿಂದ ತಂದೆಯೊಬ್ಬ ತನ್ನ ಏಳು ವರ್ಷದ ಪುತ್ರಿಯ ಮೃತದೇಹವನ್ನು ಹೆಗಲಲ್ಲಿ ಹೊತ್ತುಕೊಂಡು ಮನೆಯತ್ತ ಸಾಗಿದ ಘಟನೆ ಘುಸಪಲ್ಲಿ ಗ್ರಾಮದಿಂದ ವರದಿಯಾಗಿತ್ತು.

ಇದಕ್ಕೂ ಮುಂಚೆ ಇನ್ನೊಂದು ಗ್ರಾಮದಲ್ಲಿ ದಾನ ಮಂಜಿಯೆಂಬ ವ್ಯಕ್ತಿಗೆ ಸರಕಾರಿ ಆಸ್ಪತ್ರೆಯೊಂದರಲ್ಲಿ ಆಂಬ್ಯುಲೆನ್ಸ್ ಸೇವೆ ನಿರಾಕರಿಸಿದ್ದರಿಂದ ಆತ ತನ್ನ ಪತ್ನಿಯ ದೇಹವನ್ನು 10 ಕಿ.ಮೀ. ದೂರದ ತನಕ ಹೊತ್ತುಕೊಂಡು ಸಾಗಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X