ಅಕ್ರಮ ಮರ ಸಾಗಾಟ: ಲಾರಿ ವಶ

ಬಂಟ್ವಾಳ, ಸೆ. 20: ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ಅಕೇಶಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಬಂಟ್ವಾಳ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರ ನಡೆದಿದೆ.
ಸುಮಾರು 4 ಲಕ್ಷ ರೂ. ವೌಲ್ಯದ ವಾಹನ ಮತ್ತು ಸೊತ್ತುಗಳನ್ನು ವಶಪಡಿಸಿಕೊಂಡಿರುವ ಅರಣ್ಯಾಧಿಕಾರಿಗಳು ಲಾರಿ ಚಾಲಕ ಪುದುವೆಟ್ಟು ಗ್ರಾಮದ ಇಬ್ರಾಹೀಂ ಶಾಹಿಬ್ ಎಂಬಾತನನ್ನು ಬಂಧಿಸಿ ಬಳಿಕ ಮುಚ್ಚಳಿಕೆ ಪತ್ರ ಬರೆಸಿ ಬಿಡುಗಡೆಗೊಳಿಸಿದ್ದಾರೆ.
ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಟಿ.ಹನುಮಂತಪ್ಪ ನಿರ್ದೇಶನದಂತೆ ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ನಾಯ್ಕ ರಿಗೆ ವಹಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ನಾಯ್ಕ ಮಾರ್ಗದರ್ಶನದಂತೆ, ಬಂಟ್ವಾಳ ವಲಯ ಅರಣ್ಯಾಧಿಕಾರಿ ಬಿ.ಸುರೇಶ್ ಬಾಬು, ಉಪ ವಲಯ ಅರಣ್ಯಾಧಿಕಾರಿ ಎಚ್.ವಿ.ರಮೇಶ್, ಅರಣ್ಯ ರಕ್ಷಕರಾದ ವಿನಯ ಕುಮಾರ್, ಜಿತೇಶ್ ಪಿ., ಚಿದಾನಂದ ಬಿ., ವಾಹನ ಚಾಲಕ ಜಯರಾವ್, ಅರಣ್ಯ ವೀಕ್ಷಕ ಪ್ರವೀಣ್, ಭಾಸ್ಕರ್ ಡಿ. ಪಾಲ್ಗೊಂಡಿದ್ದರು.





