Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರಾಶ್ರಿತರಿಗೆ ಪರಿಹಾರ ನೀಡುವಲ್ಲಿ...

ನಿರಾಶ್ರಿತರಿಗೆ ಪರಿಹಾರ ನೀಡುವಲ್ಲಿ ರಕ್ಷಣಾ ಇಲಾಖೆಯಿಂದ ವಿಳಂಬ: ಆರೋಪ

ಬೆಂಗಳೂರಿನಲ್ಲಿ ಸೆ.26ಕ್ಕೆ ಸಮನ್ವಯ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ20 Sept 2016 10:20 PM IST
share
ನಿರಾಶ್ರಿತರಿಗೆ ಪರಿಹಾರ ನೀಡುವಲ್ಲಿ ರಕ್ಷಣಾ ಇಲಾಖೆಯಿಂದ ವಿಳಂಬ: ಆರೋಪ

ಕಾರವಾರ, ಸೆ.20: ನೌಕಾನೆಲೆ ನಿರಾಶ್ರಿತರಿಗೆ ಹೆಚ್ಚಿನ ಪರಿಹಾರಕ್ಕಾಗಿ ಕಂದಾಯ ಇಲಾಖೆ ಸಚಿವ ಕಾಗೋಡು ತಿಮ್ಮಪ್ಪ ಅವರ ಅಧ್ಯಕ್ಷತೆಯಲ್ಲಿ ಸೆ. 26 ರಂದು ಬೆಂಗಳೂರಿನಲ್ಲಿ ಸಮನ್ವಯ ಸಮಿತಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಸ್ವಾಧೀನ ಕಾಯ್ದೆ ಸೆಕ್ಷನ್ 28 (ಅ) ಅಡಿಯಲ್ಲಿ ದಾಖಲಾದ ಪ್ರಕರಣಗಳಿಗೆ ಹೆಚ್ಚಿನ ಪರಿಹಾರಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದು, ಸೂಕ್ತ ದಾಖಲೆಗಳೊಂದಿಗೆ ಬೆಂಗಳೂರಿನ ಡಿಫೆನ್ಸ್ ಎಸ್ಟೇಟ್ ಅಧಿಕಾರಿಗೆ ರವಾನಿಸಲಾಗಿದೆ ಎಂದರು.

ರಕ್ಷಣಾ ಇಲಾಖೆಯಿಂದ ವಿಳಂಬ ನೀತಿ:

  

ಸೀಬರ್ಡ್ ನಿರಾಶ್ರಿತರಿಗೆ ಹೆಚ್ಚಿನ ಪರಿಹಾರವನ್ನು ನೀಡುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಆದರೆ, ಕೇಂದ್ರ ರಕ್ಷಣಾ ಇಲಾಖೆ ಮಾತ್ರ ಈ ನಿಟ್ಟಿನಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಪರಿಹಾರ ನೀಡುವುದನ್ನು ಬಿಟ್ಟು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುತ್ತಿದೆ. ಶೀಘ್ರ ಪರಿಹಾರಕ್ಕೆ ಕೋರಿ ಬೆಂಗಳೂರಿನಲ್ಲಿ ನಡೆಯುವ ಸಭೆಗೆ ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಹಾಗೂ ಪುಣೆಯ ಡಿಫೆನ್ಸ್ ಎಸ್ಟೇಟ್‌ನ ನಿರ್ದೇಶಕರನ್ನು ಆಹ್ವಾನಿಸಲು ತಾವು ಒತ್ತಾಯಿಸಿರುವುದಾಗಿ ತಿಳಿಸಿದರು. ರಸ್ತೆ ಅಭಿವೃದ್ಧಿ:

ಕಾರವಾರ ತಾಲೂಕಿನ ಚಿತ್ತಾಕುಲಾ ಗಾ್ರಮದ ಸದಾಶಿಗಡದಿಂದ ಕುರ್ಮಗಡ ರಸ್ತೆಯ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಮೊದಲು 5 ಮೀಟರ್ ರಸ್ತೆ ಮಂಜೂರಾಗಿತ್ತು. ಸಾರ್ವಜನಿಕರ ಆಗ್ರಹದ ಮೇರೆಗೆ ರಸ್ತೆಯನ್ನು 8 ಮೀಟರ್ ಅಗಲೀಕರಣಗೊಳಿಸಿ ರಸ್ತೆಯ ಅಭಿವೃದ್ಧಿ ಪಡಿಲಾಗುವುದು. ಅಲ್ಲದೆ, ರಸ್ತೆಯ ಮಧ್ಯದಲ್ಲಿ ಬರುವ ವಿದ್ಯುತ್ ಕಂಬಗಳನ್ನು ರಸ್ತೆ ಬದಿಗೆ   

್ಥಳಾಂತರಿಸಲಾಗುವುದು ಎಂದು ಸೈಲ್ ಹೇಳಿದರು. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಕೆಲವೆಡೆ ದುರುಪ ಯೋಗವಾದ ಬಗ್ಗೆ ಆರೋಪ ವಿದೆ. ಅರಣ್ಯ ಭೂಮಿಯಲ್ಲೂ ರಸ್ತೆ ಮಾಡಲಾಗಿದೆ. ಅಲ್ಲದೇ ನಿರ್ವಹಣೆ ಕಳಪೆಯಾಗಿದೆ ಎನ್ನುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕ ಸೈಲ್ ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಪಹಣಿಯಲ್ಲಿ ಹೆಸರಿಲ್ಲದೆ ತೊಂದರೆ:

  ಕಾರವಾರ ತಾಲೂಕಿನ ಒಟ್ಟು 60 ಮಜಿರೆಗಳ ವ್ಯಾಪ್ತಿಯಲ್ಲಿ ಅರಣ್ಯ ಭೂಮಿಯಿಂದ ಪರಿವರ್ತನೆಯಾದ ನಿವೇಶನಗಳಲ್ಲಿ 2,000ಕ್ಕೂ ಹೆಚ್ಚು ಕುಟುಂಬಘಲು ಕಳೆದ 40 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸಿಸುತ್ತಿವೆ. ಆದರೆ ಈ ಕುಟುಂಬಗಳ ಕೇವಲ ಜಾಗದ ಹಕ್ಕು ಪತ್ರ ನೀಡಲಾಗಿದೆ. ಆದರೆ, ಪಹಣಿ ಪತ್ರಿಕೆಯಲ್ಲಿ ಆಯಾ ಹೆಸರು ನಮೂದಿಸಿಲ್ಲ. ಇದರಿಂದ ಈ ಕುಟುಂಬಗಳಿಗೆ ತೊಂದರೆಯಾಗಿದೆ. ಪಹಣಿ ಪತ್ರಿಕೆಯಲ್ಲಿ ಹೆಸರು ನೋಂದಾಯಿಸಿ ಜಾಗದ ಸಂಪೂರ್ಣ ಮಾಲಕತ್ವ ಒದಗಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿರುವುದಾಗಿ ಶಾಸಕರು ತಿಳಿಸಿದರು.

ಗ್ರಾಮ ಅಭಿವೃದ್ಧಿಗೆ ರಾಜಧನಕ್ಕೆ ಆಗ್ರಹ: ಮರಳು ಗಣಿಗಾರಿಕೆ ನಡೆಸುತ್ತಿರುವ ಗ್ರಾಮಗಳಿಂದ ಸಂದಾಯವಾಗುತ್ತಿರುವ ರಾಜಧನದ ಶೇ. 25ರಷ್ಟು ಪಾಲು ಆಗ್ರಾಮಗಳ ಅಭಿವೃದ್ಧಿಗೆ ನೀಡಬೇಕು. ಆದರೆ ಕಳೆದ 2 ವರ್ಷದಿಂದ ಕಾರವಾರ ಹಾಗೂ ಅಂಕೋಲಾ ತಾಲೂಕಿನ ಗ್ರಾಮಗಳಿಗೆ ರಾಜಧನದ ಪಾಲು ಲಭಿಸಿಲ್ಲ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ಕಾರ್ಯದರ್ಶಿಗೆ ಪತ್ರ ಬರೆದು ಗ್ರಾಮಗಳಿಗೆ ರಾಜಧನ ಶೀಘ್ರ ಬಿಡುಗಡೆ ಮಾಡುವಂತೆ ಸೂಚಿಸಲಾಗುವುದು. ಒಂದೊಮ್ಮೆ ರಾಜಧನದ ಪಾಲು ನೀಡದಿದ್ದರೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಸತೀಶ ಸೈಲ್ ತಿಳಿಸಿದರು. ಬದಲಿ ಮಾರ್ಗಕ್ಕೆ ಸೂಚನೆ:

    

ರಾಷ್ಟ್ರೀಯ ಹೆದ್ದಾರಿ ಚುತುಷ್ಪಥ ಕಾಮಗಾರಿಯಲ್ಲಿ ಈ ಹಿಂದೆ ನಡೆದ ಸರ್ವೇಯಿಂದ ತೋಡೂರು, ಅಮದಳ್ಳಿ ಗ್ರಾಮದಲ್ಲಿ 150ಕ್ಕೂ ಹೆಚ್ಚು ಬಡವರ ಮನೆ, ಅಂಗಡಿಗಳು ನಾಶವಾಗಿದೆ. ಈ ಬಗ್ಗೆ ತಾವು ಬೇರೆ ಮಾರ್ಗವನ್ನು ಸೂಚಿಸಿದ್ದೇವೆ. ರಸ್ತೆ ನಿರ್ಮಾಣಕ್ಕೆ ನೂತನವಾಗಿ ಸೂಚಿಸಿದ ಮಾರ್ಗದ ಸರ್ವೇ ಕಾರ್ಯ ನಡೆಲಾಗುತ್ತಿದೆ ಎಂದು ಸೈಲ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಡಿಎ ಮಾಜಿ ಅಧ್ಯಕ್ಷ ಕೆ. ಶಂಭು ಶೆಟ್ಟಿ, ಜಿಪಂ ಸದಸ್ಯ ಕೃಷ್ಣ ಮೆಹ್ತಾ, ತೋಡೂರು ಗ್ರಾಪ ಉಪಾಧ್ಯಕ್ಷ ಚಂದ್ರಕಾಂತ ಚಿಂಚಣಕರ್ ಹಾಗೂ ಇನ್ನಿತರರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X