Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಯಾ ಖಾನ್ ನೇಣು ಪೂರ್ವಯೋಜಿತ

ಜಿಯಾ ಖಾನ್ ನೇಣು ಪೂರ್ವಯೋಜಿತ

ಬ್ರಿಟಿಷ್ ವಿಧಿವಿಜ್ಞಾನ ತಜ್ಞರ ಅಭಿಮತ

ವಾರ್ತಾಭಾರತಿವಾರ್ತಾಭಾರತಿ20 Sept 2016 10:52 PM IST
share

ಮುಂಬೈ,ಸೆ.20: ಬಾಲಿವುಡ್ ನಟಿ ಜಿಯಾ ಖಾನ್ ನೇಣು ಪೂರ್ವ ಯೋಜಿತವಾಗಿತ್ತು ಮತ್ತು ಆಕೆಯ ಮುಖ ಹಾಗೂ ಕುತ್ತಿಗೆಯಲ್ಲಿನ ಗಾಯದ ಗುರುತುಗಳು ಅದು ಆತ್ಮಹತ್ಯೆಯಾಗಿರಲಿಲ್ಲ ಎನ್ನುವುದನ್ನು ಬೆಟ್ಟು ಮಾಡುತ್ತಿವೆ ಎಂದು ಬ್ರಿಟಿಷ್ ವಿಧಿವಿಜ್ಞಾನ ತಜ್ಞ ಜೇಸನ್ ಪಾಯ್ನೆ-ಜೇಮ್ಸ್ ತನ್ನ ವರದಿಯಲ್ಲಿ ಹೇಳಿದ್ದಾರೆ. ಇದರೊಂದಿಗೆ ಜಿಯಾ ಆತ್ಮಹತ್ಯೆ ಪ್ರಕರಣವೀಗ ಆಘಾತಕಾರಿ ತಿರುವನ್ನು ಪಡೆದುಕೊಂಡಿದೆ.

ಜೇಮ್ಸ್ ವರದಿಯಲ್ಲಿನ ಅಂಶಗಳು ಭಾರತೀಯ ತಜ್ಞರ ವರದಿಗೆ ವಿರುದ್ಧವಾಗಿವೆ ಎಂದು ಆಂಗ್ಲ ಪತ್ರಿಕೆಯೊಂದು ಮಂಗಳವಾರ ವರದಿ ಮಾಡಿದೆ. ಜಿಯಾರ ತಾಯಿ ರಾಬಿಯಾ ಅವರು ಈ ವರದಿ ಯನ್ನು ಬುಧವಾರ ಮುಂಬೈ ಸೆಷನ್ಸ್ ನ್ಯಾಯಾ ಲಯಕ್ಕೆ ಸಲ್ಲಿಸಲಿದ್ದಾರೆ ಎಂದೂ ಅದು ಹೇಳಿದೆ.

ವರದಿಯಲ್ಲಿ ಏನಿದೆ?: ತನ್ನ ತನಿಖೆಯ ಅಂಗವಾಗಿ ವೈದ್ಯಕೀಯ ಮತ್ತು ಮರಣೋತ್ತರ ಪರೀಕ್ಷೆ ವರದಿಗಳ ಅಧ್ಯಯನ ನಡೆಸಿರುವ ಜೇಮ್ಸ್ ಜಿಯಾರ ಮೃತದೇಹದ ಚಿತ್ರಗಳನ್ನು ವಿಶ್ಲೇಷಿಸಿದ್ದಾರೆ. ಜೊತೆಗೆ ಸಿಸಿಟಿವಿ ತುಣುಕುಗಳು ಮತ್ತು ಜಿಯಾರ ಕೋಣೆಯ ಚಿತ್ರಗಳನ್ನು ಪುನರ್‌ಪರಿಶೀಲಿಸಿದ್ದಾರೆ. ಜಿಯಾರ ಕೆಳತುಟಿಯ ಮೇಲಿನ ಗಾಯದ ಗುರುತುಗಳು ಆಕೆ ನೇಣು ಬಿಗಿದುಕೊಳ್ಳುತ್ತಿದ್ದಾಗ ಹಲ್ಲಿನೊಂದಿಗೆ ಘರ್ಷಣೆಯಿಂದಾಗಿ ಆಗಿರ ಬಹುದು ಎಂದು ಸರಕಾರಿ ವಿಧಿವಿಜ್ಞಾನ ತಜ್ಞರು ಅಭಿಪ್ರಾಯಪಟ್ಟಿದ್ದರೆ, ಇವು ತರಚು ಗಾಯಗಳಾಗಿವೆ ಮತ್ತು ಬಾಯಿಯನ್ನು ಒತ್ತಿ ಹಿಡಿಯಲಾಗಿತ್ತು ಎನ್ನುವುದನ್ನು ಸೂಚಿಸುತ್ತಿವೆ. ಅವು ಮಾಮೂಲಿ ಹಲ್ಲುಗಳ ಗುರುತಲ್ಲ ಎಂದು ಜೇಮ್ಸ್ ವರದಿಯಲ್ಲಿ ಹೇಳಿದ್ದಾರೆ.
ಜಿಯಾರ ಕುತ್ತಿಗೆಯ ಮೇಲಿನ ನೂಲಿನ ಎಳೆಯ ಗಾಯಗಳ ಗುರುತುಗಳು ನೇಣು ಹಾಕಿಕೊಳ್ಳಲು ಬಳಸಿದ್ದ ದುಪಟ್ಟಾ ಜಾರಿದಾಗ ಅಥವಾ ದುಪಟ್ಟಾದ ಗಂಟು ತಗುಲಿ ಆಗಿರಬಹುದು ಎಂದು ಸರಕಾರಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದರೆ ಜೇಮ್ಸ್, ದುಪಟ್ಟಾ ಜಾರಿದಾಗ ಕುತ್ತಿಗೆಯ ಮೇಲೆ ಇಷ್ಟೊಂದು ಸ್ಪಷ್ಟವಾದ ಗುರುತು ಮೂಡುವುದು ಸಾಧ್ಯವಿಲ್ಲ ಎಂದಿದ್ದಾರೆ. ಅಲ್ಲದೆ ಜಿಯಾರ ಕೆಳದವಡೆಯ ಮೇಲಿನ ಗುರುತುಗಳು ದುಪಟ್ಟಾದ ಹಲವಾರು ಗಂಟುಗಳಿಂದ ಆಗಿರುವ ಸಾಧ್ಯತೆಯಿದೆ ಎಂಬ ಸ್ಥಳೀಯ ತಜ್ಞರ ಅಭಿಪ್ರಾಯವನ್ನೂ ಅವರು ತಳ್ಳಿಹಾಕಿದ್ದಾರೆ.
ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದಲ್ಲಿ ಕೊಲೆಯನ್ನು ಶಂಕಿಸಲು ಯಾವುದೇ ಕಾರಣಗಳಿಲ್ಲ ಎಂದು ಸಿಬಿಐ ತಿಂಗಳ ಹಿಂದೆ ಬಾಂಬೆ ಉಚ್ಚ ನ್ಯಾಯಾಲಯಕ್ಕೆ ತಿಳಿಸಿತ್ತು.
ಜಿಯಾ ಖಾನ್ ಮೃತದೇಹ 2013,ಜೂನ್ 3ರಂದು ಮುಂಬೈ ಜುಹುದಲ್ಲಿನ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಕೆಯ ಬಾಯ್‌ಫ್ರೆಂಡ್ ಆಗಿದ್ದ,ಹಿರಿಯ ಬಾಲಿವುಡ್ ನಟ ಆದಿತ್ಯ ಪಂಚೋಲಿಯ ಪುತ್ರ ಸೂರಜ್ ಪಂಚೋಲಿಯನ್ನು ಬಂಧಿಸಿ ಬಳಿಕ ಬಿಡುಗಡೆ ಗೊಳಿಸಲಾಗಿತ್ತು. ಸಿಬಿಐ ಕಳೆದ ಡಿಸೆಂಬರ್‌ನಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪವನ್ನು ಸೂರಜ್ ಮೇಲೆ ಹೊರಿಸಿತ್ತು. ಆದರೆ ಇದರಿಂದ ತೃಪ್ತರಾಗದ ರಾಬಿಯಾ ಬ್ರಿಟನ್ನಿನ ಫಾರೆನ್ಸಿಕ್ ಹೆಲ್ತ್‌ಕೇರ್ ಸರ್ವಿಸಸ್‌ನ ಜೇಮ್ಸ್‌ರನ್ನು ನಿಯೋಜಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X