Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉರಿ ಉಗ್ರರ ದಾಳಿ: ಎರಡನೆ ಸೈನಿಕ...

ಉರಿ ಉಗ್ರರ ದಾಳಿ: ಎರಡನೆ ಸೈನಿಕ ಪುತ್ರನನ್ನು ಕಳೆದುಕೊಂಡ ಅಂಧ ತಂದೆ

ವಾರ್ತಾಭಾರತಿವಾರ್ತಾಭಾರತಿ20 Sept 2016 11:41 PM IST
share
ಉರಿ ಉಗ್ರರ ದಾಳಿ: ಎರಡನೆ ಸೈನಿಕ ಪುತ್ರನನ್ನು ಕಳೆದುಕೊಂಡ ಅಂಧ ತಂದೆ

ಭೋಜಪುರ (ಬಿಹಾರ), ಸೆ.20: ಕಾಶ್ಮೀರದ ಉರಿ ಉಗ್ರರ ದಾಳಿ ಪ್ರಕರಣದಲ್ಲಿ ಅಂಧ ತಂದೆಯೊಬ್ಬರು ತನ್ನ ಎರಡನೇ ಸೈನಿಕ ಮಗನನ್ನು ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

ಕಳೆದ 20 ವರ್ಷಗಳಿಂದ ದೃಷ್ಟಿ ಕಳೆದುಕೊಂಡಿರುವ ಜಗನಾರಾಯಣ ಸಿಂಗ್ ಇದೀಗ ಮರಳಿ ದೃಷ್ಟಿ ಪಡೆದು ತನ್ನ ಮಗನ ಸಾವಿಗೆ ಕಾರಣರಾಗಿರುವ ಉಗ್ರರ ವಿರುದ್ಧ ಪ್ರತಿದಾಳಿ ನಡೆಸಬೇಕು ಎಂಬ ಕೋಪದಲ್ಲಿದ್ದಾರೆ.

ಭಾರತದ ಸೇನೆಯ ಜೊತೆ ಸೇರಿ ಪಾಕಿಸ್ತಾನದ ವಿರುದ್ಧ ಹೋರಾಡುವ ಶಕ್ತಿ ನನ್ನಲ್ಲಿ ಇನ್ನೂ ಇದೆ. ಭಯೋತ್ಪಾದಕರು ನಮ್ಮ ಸೈನಿಕರನ್ನು ಹೇಗೆ ಹತ್ಯೆ ಮಾಡಿದರೋ ಹಾಗೆಯೇ ಅವರನ್ನೂ ಸಾಯಿಸಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಅವರ ಮಗ ಹವಾಲ್ದಾರ್ ಅಶೋಕ್ ಕುಮಾರ್ ಸಿಂಗ್ (44) ರವಿವಾರದ ಉರಿ ದಾಳಿಯಲ್ಲಿ ಹತರಾಗಿದ್ದರು.

ಸಿಂಗ್ ಕುಟುಂಬಕ್ಕೆ ಇಂಥ ಆಘಾತ ಮೊದಲ ಸಲವಲ್ಲ. 1986ರಲ್ಲಿ ಇವರ ಹಿರಿಯ ಮಗ ಯೋಧ ಕಮ್ತಾಸಿಂಗ್ (23) ಬಿಕಾನೇರ್‌ನಲ್ಲಿ ಬಾಂಬ್‌ಸ್ಫೋಟದಲ್ಲಿ ಮೃತಪಟ್ಟಿದ್ದರು. ದೇಶರಕ್ಷಣೆಗೆ ಸಮರ್ಪಿಸಿಕೊಂಡಿರುವ ಈ ಕುಟುಂಬದಲ್ಲಿ ಅಶೋಕ್ ಸಿಂಗ್ ಮಗ ವಿಕಾಸ್‌ಸಿಂಗ್ ಇತ್ತೀಚೆಗೆ ಸೇನೆ ಸೇರಿದ್ದರು. ದನ್‌ಪುರ ಕಂಟೋನ್ಮೆಂಟ್‌ನಲ್ಲಿ ಇದೀಗ ಅವರು ಸೇವೆಯಲ್ಲಿದ್ದಾರೆ. ಅಶೋಕ್ ಅವರ ಅಜ್ಜ ರಾಜಗೃಹ ಸಿಂಗ್, ಅವರ ಇಬ್ಬರು ಮಾವಂದಿರಾದ ಶ್ಯಾಮ್ ನಾರಾಯಣ ಸಿಂಗ್ ಹಾಗೂ ರಾಮ್‌ವಿಲಾಸ್ ಸಿಂಗ್ ಅವರೂ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಇಬ್ಬರು ಅಳಿಯಂದಿರು ಕೂಡಾ ಸೇನೆಯಲ್ಲಿದ್ದಾರೆ.

ಆದರೆ ಇದೀಗ ಕುಟುಂಬದ ಸಿಟ್ಟು ಕೇಂದ್ರ ಸರಕಾರದ ಮೇಲೆ ತಿರುಗಿದ್ದು, ಭಯೋತ್ಪಾದನೆ ನಿಗ್ರಹಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶವನ್ನು ಜಗನಾರಾಯಣ ಸಿಂಗ್ ವ್ಯಕ್ತಪಡಿಸಿದ್ದಾರೆ. ಐವರು ಸೈನಿಕರ ಶಿರಚ್ಛೇದ ಮಾಡಿದ್ದಕ್ಕೆ ಪ್ರತಿಯಾಗಿ ಹತ್ತು ಉಗ್ರರ ಶಿರಚ್ಛೇದ ಮಾಡುವುದಾಗಿ ಗುಡುಗಿದ್ದು ಇದೇ ಸರಕಾರ ಎಂದು ಅವರು ಲೇವಡಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X