Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ 29 ಕೋಟಿ ಕುಟುಂಬಗಳಿಗೆ ಭೂಕಂಪ...

ಭಾರತದಲ್ಲಿ 29 ಕೋಟಿ ಕುಟುಂಬಗಳಿಗೆ ಭೂಕಂಪ ಸಂತ್ರಸ್ತರಾಗುವ ಅಪಾಯ!

ವಾರ್ತಾಭಾರತಿವಾರ್ತಾಭಾರತಿ21 Sept 2016 8:48 AM IST
share
ಭಾರತದಲ್ಲಿ 29 ಕೋಟಿ ಕುಟುಂಬಗಳಿಗೆ ಭೂಕಂಪ ಸಂತ್ರಸ್ತರಾಗುವ ಅಪಾಯ!

ಹೊಸದಿಲ್ಲಿ, ಸೆ.21: ಭಾರತದ ಒಟ್ಟು ಭೂಪ್ರದೇಶದಲ್ಲಿ ಶೇ.59ರಷ್ಟು ಭಾಗದಲ್ಲಿ ಸಾಮಾನ್ಯ ಅಥವಾ ತೀವ್ರತರ ಭೂಕಂಪ ಸಾಧ್ಯತೆ ಇದೆ ಎನ್ನುತ್ತದೆ ಇತ್ತೀಚೆಗೆ ಬಿಡುಗಡೆಯಾದ ಭೂಕಂಪ ನಕ್ಷೆ. ದೇಶದ ಒಟ್ಟು 30.4 ಕುಟುಂಬಗಳ ಪೈಕಿ 28.8 ಕೋಟಿ ಕುಟುಂಬಗಳು (ಶೇ. 95) ವಿವಿಧ ಪ್ರಮಾಣದ ಭೂಕಂಪದ ಭೀತಿಯ ನೆರಳಲ್ಲೇ ಬದುಕಬೇಕಾಗುತ್ತದೆ.

ನಿಮ್ಮ ಮನೆ ಅಥವಾ ಕಚೇರಿಯಲ್ಲಿ ಎಷ್ಟರಮಟ್ಟಿಗೆ ಭೂಕಂಪದ ಅಪಾಯವಿದೆ ಎಂಬ ಮಾಹಿತಿ ನೀಡುವ ಈ ನಕ್ಷೆ ಮುಂದಿನ ಮೂರು ತಿಂಗಳಲ್ಲಿ ನಿಮ್ಮ ಮೊಬೈಲ್‌ನಲ್ಲೇ ಲಭ್ಯ. ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ ಹಾಗೂ ನಿರ್ಮಾಣ ಸಾಧನ ಹಾಗೂ ತಂತ್ರಜ್ಞಾನ ಉತ್ತೇಜನ ಮಂಡಳಿ ಜಂಟಿಯಾಗಿ ಇದನ್ನು ಸಿದ್ಧಪಡಿಸಿವೆ.

ತಾಲೂಕು ಮಟ್ಟದವರೆಗೂ ಭೂಕಂಪ ವಲಯದ ಮಾಹಿತಿ ನೀಡಲಾಗಿದೆ. ಈ ನಕ್ಷೆಯನ್ನು ಡಿಜಿಟಲೀಕರಿಸಿ, ಮೊಬೈಲ್ ಆಪ್ ಮೂಲಕ ಪ್ರತಿಯೊಬ್ಬರಿಗೂ ಇದರ ಪ್ರಯೋಜನ ಸಿಗುವಂತೆ ಮಾಡಲು ಉಭಯ ಸಂಸ್ಥೆಗಳು ನಿರ್ಧರಿಸಿವೆ. ಈ ಮಾಹಿತಿ ಲಭ್ಯತೆಯಿಂದಾಗಿ ಯೋಜನಾಗಾರರು, ನಾಗರಿಕರಿಗೆ ಮುನ್ನೆಚ್ಚರಿಕೆ ಹೆಜ್ಜೆಗಳನ್ನು ಇಡಲು ಸಲಹೆ ಮಾಡಬಹುದಾಗಿದೆ ಎಂದು ಬಣ್ಣಗಳ ಮೂಲಕ ಸಂಕೇತ ನೀಡುವ ಈ ನಕ್ಷೆ ಬಿಡುಗಡೆ ಮಾಡಿದ ನಗರ ಗೃಹ ನಿರ್ಮಾಣ ಅಭಿವೃದ್ಧಿ ಖಾತೆ ಸಚಿವ ಎಂ.ವೆಂಕಯ್ಯನಾಯ್ಡು ಹೇಳಿದರು.

ಭೂಕಂಪದ ತೀವ್ರತೆಯ ಸಾಧ್ಯತೆಯನ್ನು ಐದು ವಿಭಿನ್ನ ಬಣ್ಣಗಳಲ್ಲಿ ತಿಳಿಸಲಾಗಿದೆ. ಅಪಾಯಕಾರಿ ಪ್ರದೇಶದ ಗಡಿಗಳನ್ನು ಕೂಡಾ ಇದು ಸೂಚಿಸಿದೆ. ಇದರ ಮಾಹಿತಿಯನ್ನು ಆಧರಿಸಿ ಹೊಸ ಹೊಸ ಕಟ್ಟಡಗಳನ್ನು ನಿರ್ಮಿಸುವುದರಿಂದ ಭೂಕಂಪದ ಪರಿಣಾಮವನ್ನು ಕಡಿಮೆ ಮಾಡಬಹುದಾಗಿದೆ ಎಂದು ರಾಜ್ಯ ಖಾತೆ ಸಚಿವ ರಾವ್ ಇಂದ್ರಜೀತ್ ಸಿಂಗ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X