Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಪ್ರೀಂ ಆದೇಶ ಪ್ರಧಾನಿ ತಿರಸ್ಕರಿಸಬೇಕು:...

ಸುಪ್ರೀಂ ಆದೇಶ ಪ್ರಧಾನಿ ತಿರಸ್ಕರಿಸಬೇಕು: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ21 Sept 2016 7:14 PM IST
share
ಸುಪ್ರೀಂ ಆದೇಶ ಪ್ರಧಾನಿ ತಿರಸ್ಕರಿಸಬೇಕು: ಎಚ್.ಡಿ.ದೇವೇಗೌಡ

ಬೆಂಗಳೂರು, ಸೆ.21: ಕಾವೇರಿ ಜಲ ನಿರ್ವಹಣೆ ಮಂಡಳಿ ರಚನೆ ಮಾಡುವಂತೆ ಸುಪ್ರೀಂಕೋರ್ಟ್, ಕೇಂದ್ರ ಸರಕಾರಕ್ಕೆ ನೀಡಿರುವ ಆದೇಶವನ್ನು ಪ್ರಧಾನಮಂತ್ರಿ ತಿರಸ್ಕರಿಸಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

ಬುಧವಾರ ಪದ್ಮನಾಭನಗರದಲ್ಲಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತನ್ನ ವ್ಯಾಪ್ತಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಕಾವೇರಿ ಜಲ ನಿರ್ವಹಣೆ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಆದೇಶಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾವೇರಿ ನದಿ ನೀರು ವಿವಾದವು ಎರಡು ರಾಜ್ಯಗಳ ನಡುವೆ ಇರುವಂತಹ ಹೋರಾಟ. ನಾನು ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಅನ್ನೋ ಭಾವನೆಯಲ್ಲಿ ಈ ಮಾತನ್ನು ಹೇಳ್ತಾ ಇಲ್ಲ. ಸಾಮಾನ್ಯ ರೈತನಾಗಿ ಹೇಳುತ್ತಿದ್ದೇನೆ. ನಮ್ಮ ರಾಜ್ಯದ ಜಲಾಶಯಗಳ ಸ್ಥಿತಿಗತಿ ನೋಡಿ ತೀರ್ಪು ಕೊಟ್ಟಂತೆ ಕಾಣುತ್ತಿಲ್ಲ ಎಂದು ಅವರು ಹೇಳಿದರು.

ಜನತೆಗೆ ಕುಡಿಯುವ ನೀರು ಮುಖ್ಯವೋ? ಬೆಳೆ ಉಳಿಸುವುದು ಮುಖ್ಯವೋ? ಎಂದು ಪ್ರಶ್ನಿಸಿದ ದೇವೇಗೌಡ, 9 ವರ್ಷದಿಂದ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ನಾವು ಸಲ್ಲಿಸಿರುವ ಮೇಲ್ಮನವಿ ಇನ್ನೂ ವಿಚಾರಣೆಗೆ ಬಂದಿಲ್ಲ. ಇಂಥ ಸಂದರ್ಭದಲ್ಲಿ ನಿರ್ವಹಣಾ ಮಂಡಳಿ ರಚನೆಯ ಅಗತ್ಯ ಏನಿತ್ತು? ನ್ಯಾಯಾಂಗದ ಬಗ್ಗೆ ನನಗೆ ಗೌರವ ಇರುವುದರಿಂದಲೆ ಈ ಮಾತು ಹೇಳುತ್ತಿದ್ದೇನೆ ಎಂದರು.

ಕಾವೇರಿಯನ್ನು ಒಡೆದು ಹಾಕಿದ ನ್ಯಾಯಾಧೀಕರಣವದು. ಯಾಕಂದ್ರೆ 2007ರ ತೀರ್ಪಿನ ಬಗ್ಗೆಯೆ ಇಲ್ಲಿಯ ಪೀಠದ ನ್ಯಾಯಾಧೀಶರಲ್ಲೆ ಒಮ್ಮತ ಇರಲಿಲ್ಲ. ಹೀಗಾಗಿ ಕಾವೇರಿ ನ್ಯಾಯಾಧೀಕರಣದ ತೀರ್ಪನ್ನೆ ಪ್ರಶ್ನೆ ಮಾಡಲಾಗಿದೆ ಎಂದು ಅವರು ದೇವೇಗೌಡ ಹೇಳಿದರು.

ಸಿಎಂ ರಾಜೀನಾಮೆ ಬೇಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರದಲ್ಲಿ ರಾಜೀನಾಮೆ ನೀಡುವುದು ಬೇಡ. ಆದರೆ, ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂಬ ಸ್ಪಷ್ಟ ತೀರ್ಮಾನ ಕೈಗೊಳ್ಳಲಿ. ಮುಂದೆ ಏನಾಗುತ್ತದೊ ನೋಡೋಣ ಎಂದು ಅವರು ತಿಳಿಸಿದರು.

ನಾನು ಇಂತಹ ವಿಷಯಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಲು ಹೋಗುವುದಿಲ್ಲ. ಈ ಹಿಂದೆ ನಾನು ಮೂರು ಬಾರಿ ರಾಜೀನಾಮೆ ನೀಡಿದ್ದೇನೆ. ಈಗ ರಾಜೀನಾಮೆ ಕೊಟ್ಟರೆ ಸಂಸತ್ತಿನಲ್ಲಿ ಹೋರಾಟ ಮಾಡುವುದು ಯಾರೂ ಎಂದು ದೇವೇಗೌಡ ಪ್ರಶ್ನಿಸಿದರು.

ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡುವುದಕ್ಕೆ ನನ್ನ ಅಭ್ಯಂತರವಿಲ್ಲ. ನಾಳೆ ಬೆಳಗ್ಗೆಯೆ ಸ್ಪೀಕರ್‌ಗೆ ರಾಜೀನಾಮೆ ಕೊಡುತ್ತೇನೆ. ಆದರೆ, ಲೋಕಸಭೆಯಲ್ಲಿ ಈ ಹೋರಾಟವನ್ನು ಮಾಡುವುದಕ್ಕೆ ಆಗುವುದಿಲ್ಲವಲ್ಲ ಎಂಬ ನೋವಿದೆ. ಒಂದು ಲೋಟ ನೀರಿಗೂ ನಾವು ಅಮ್ಮನ ಮುಂದೆ ಕೈಚಾಚುವ ಪರಿಸ್ಥಿತಿ ಬಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್ ನೀಡಿರುವ ತೀರ್ಪು ನ್ಯಾಯಯುತವಾಗಿಲ್ಲ. ಪ್ರಧಾನಿ ನರೇಂದ್ರಮೋದಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ರಾಜ್ಯ ಸರಕಾರ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಸಿದ್ದರಾಮಯ್ಯಗೂ ಇದೇ ಹೇಳಿದ್ದೇನೆ. ಇರುವ ನೀರಿನಲ್ಲಿ ಬೆಳೆಗೆ ತಪ್ಪಿಸಿ, ಬೆಂಗಳೂರಿಗೆ ನೀರು ಕೊಡಬೇಕಿದೆ. ಆದುದರಿಂದ, ಬೆಂಗಳೂರಿನ ಜನ ಮನೆಯಲ್ಲಿ ಕೂತರೆ ಆಗುವುದಿಲ್ಲ. ಬುದ್ದಿ ಜೀವಿಗಳು ಎಲ್ಲ ಎಲ್ಲಿ ಎಂದು ದೇವೇಗೌಡ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X