Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜೇಶ್ವರಿಗೆ ಪೊಲೀಸ್ ಕಸ್ಟಡಿ ನೀಡದಂತೆ...

ರಾಜೇಶ್ವರಿಗೆ ಪೊಲೀಸ್ ಕಸ್ಟಡಿ ನೀಡದಂತೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ21 Sept 2016 8:55 PM IST
share
ರಾಜೇಶ್ವರಿಗೆ ಪೊಲೀಸ್ ಕಸ್ಟಡಿ ನೀಡದಂತೆ ಹೈಕೋರ್ಟ್ ಆದೇಶ

ಉಡುಪಿ, ಸೆ.21: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಒಂದನೆ ಆರೋಪಿ ರಾಜೇಶ್ವರಿ ಶೆಟ್ಟಿಯನ್ನು ಪೊಲೀಸ್ ಕಸ್ಟಡಿಗೆ ನೀಡಬಾರದೆಂದು ರಾಜ್ಯ ಹೈಕೋರ್ಟ್ ಬುಧವಾರ ಉಡುಪಿಯ ನ್ಯಾಯಾಲಯಕ್ಕೆ ಆದೇಶ ನೀಡಿದೆ.

ಈಗಾಗಲೇ ಅ.3ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಪ್ರಕರಣದ ಒಂದನೆ ಆರೋಪಿ ರಾಜೇಶ್ವರಿ ಶೆಟ್ಟಿಯನ್ನು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸರ ಕಸ್ಟಡಿಗೆ ನೀಡುವಂತೆ ಸೆ.20ರಂದು ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಪ್ರವೀಣ್ ಕುಮಾರ್ ಸಿಐಡಿ ಪರವಾಗಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಮತ್ತು ಹೆಚ್ಚುವರಿ ಮುಖ್ಯನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಧೀಶರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಅದರ ವಿಚಾರಣೆ ಸಂದರ್ಭ ಆರೋಪಿ ಪರ ವಕೀಲ ಅರುಣ್ ಬಂಗೇರ ಬೆಳುವಾಯಿ, ಒಂದನೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಬಾರದೆಂದು ಹೈಕೋರ್ಟ್ ಆದೇಶ ನೀಡಿದೆ ಎಂದು ಜ್ಞಾಪನ ಪತ್ರವನ್ನು ನ್ಯಾಯಾಧೀಶ ರಾಜೇಶ್ ಕರ್ಣಂ ಮುಂದೆ ಸಲ್ಲಿಸಿದರು. ಹೈಕೋರ್ಟ್ ಆದೇಶದ ಪ್ರತಿಯನ್ನು ಸೆ.24ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರು ಆರೋಪಿ ಪರ ವಕೀಲರಿಗೆ ಸೂಚಿಸಿದರು.

ನಂತರ ಆ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಆದೇಶ ಹೊರಡಿಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದರು. ‘ಪ್ರಕರಣದ ಆರೋಪಿ ರಾಜೇಶ್ವರಿ ಶೆಟ್ಟಿಯನ್ನು ಪೊಲೀಸ್ ಕಸ್ಟಡಿಗೆ ನೀಡ ಬಾರದೆಂದು ವಾರದ ಹಿಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ 15ದಿನಗಳ ಒಳಗೆ ಪೊಲೀಸ್ ಕಸ್ಟಡಿಗೆ ನೀಡಬಹುದೇ ಹೊರತು ಅದರ ನಂತರ ಕೊಡಲು ಅವಕಾಶ ಇಲ್ಲ ಎಂದು ಈಗಾಗಲೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈಗಾಗಲೇ ಪೊಲೀಸರು ರಾಜೇಶ್ವರಿ ಶೆಟ್ಟಿಯನ್ನು ಎಂಟು ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು.

ಇದೀಗ ಒಂದೂವರೆ ತಿಂಗಳ ನಂತರವೂ ಪೊಲೀಸ್ ಕಸ್ಟಡಿಗೆ ಕೇಳುವುದು ಸರಿಯಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು. ಇಂದು ನಡೆದ ವಿಚಾರಣೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಆನಂದಬೈರ ರೆಡ್ಡಿ, ಪ್ರಕರಣದ ಒಂದನೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಬಾರದು. ಅವಶ್ಯಕತೆ ಇದ್ದರೆ ನ್ಯಾಯಾಂಗ ಬಂಧನಕ್ಕೆ ನೀಡಬಹುದಾಗಿ ಉಡುಪಿ ನ್ಯಾಯಾಲಯಕ್ಕೆ ಆದೇಶ ನೀಡಿದ್ದಾರೆ’ ಎಂದು ಆರೋಪಿ ಪರ ಹೈಕೋರ್ಟ್‌ನಲ್ಲಿ ವಾದಿಸಿದ ನ್ಯಾಯವಾದಿ ಅರುಣ್ ಶ್ಯಾಮ್ ಪತ್ರಿಕೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X