ಇಂದು ಡಿಕೆಎಸ್ಸಿ 20ನೆ ವಾರ್ಷಿಕೋತ್ಸವ
ಮಂಗಳೂರು, ಸೆ.21: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ಡಿಕೆಎಸ್ಸಿ) 20ನೆ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭವು ಸೆ.22ರಂದು ಅಪರಾಹ್ನ 2ಕ್ಕೆ ಪುರಭವನದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್, ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ, ಡಿಕೆಎಸ್ಸಿ ಸ್ಥಾಪಕಾಧ್ಯಕ್ಷ ಹಸನುಲ್ ಫೈಝಿ, ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ನ ಅಧ್ಯಕ್ಷ ಸಅದ್ ಮುಸ್ಲಿಯಾರ್ ಆತೂರು, ಜಂಇಯ್ಯತುಲ್ ಮುಅಲ್ಲಿಮೀನ್ ಜಿಲ್ಲಾಧ್ಯಕ್ಷ ಕೆ.ಎಲ್.ಉಮರ್ ದಾರಿಮಿ ಪಟ್ಟೋರಿ, ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ಲಾ ತೌಫೀಕ್ ನಾವುಂದಾ, ಡಿಕೆಎಸ್ಸಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಯು.ಡಿ.ಅಬ್ದುಲ್ ಹಮೀದ್ ಉಳ್ಳಾಲ, ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ಇಸ್ಮಾಯೀಲ್ ಹಾಜಿ ಕಿನ್ಯ, ಅಲ್ ಇಹ್ಸಾನ್ ಎಜುಕೇಶನ್ ಸೆಂಟರ್ನ ವ್ಯವಸ್ಥಾಪಕ ಯು.ಕೆ. ಮುಸ್ತಫಾ ಸಅದಿ ಭಾಗವಹಿಸಲಿದ್ದಾರೆ. ವಾರ್ಷಿಕೋತ್ಸವದ ಸಮಾರೋಪ ಸಮಾರಂ ಭವು ಡಿಸೆಂಬರ್ 2, 3 ಮತ್ತು 4ರಂದು ಡಿಕೆಎ ಸ್ಸಿ ಅಧೀನದ ಮೂಳೂರಿನ ಅಲ್ ಇಹ್ಸಾನ್ ಕ್ಯಾಂಪಸ್ನಲ್ಲಿ ನಡೆಯಲಿದೆ. ಡಿ.4 ರಂದು 20 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.





