Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಕೋರ್ಟ್‌ನಲ್ಲಿ ಭಾವೋದ್ವೇಗಗೊಂಡ...

ಸುಪ್ರೀಂ ಕೋರ್ಟ್‌ನಲ್ಲಿ ಭಾವೋದ್ವೇಗಗೊಂಡ ಪಾಟೀಲ್

ಕಾವೇರಿ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ21 Sept 2016 11:58 PM IST
share

ಹೊಸದಿಲ್ಲಿ, ಸೆ.21: ಕಾವೇರಿಯ ಕುರಿತಾದ ಭಾವೋದ್ವೇಗ ಕೇವಲ ಕರ್ನಾಟಕ ಹಾಗೂ ತಮಿಳುನಾಡುಗಳಲ್ಲಿ ಮಾತ್ರ ತೀವ್ರವಾಗಿರುವುದಲ್ಲ. ಅದು ವಾಸ್ತವ ಯುದ್ಧ ರಂಗವಾದ ಸುಪ್ರೀಂಕೋರ್ಟಲ್ಲೂ ಅಷ್ಟೇ ತೀವ್ರವಾಗಿತ್ತೆಂಬುದು ನಿನ್ನೆಯ ವಿಚಾರಣೆಯ ವೇಳೆ ರುಜುವಾತಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿದ್ದ ಪತ್ರಕರ್ತರ ಪ್ರಕಾರ ಅತ್ಯಂತ ಭಾವೋದ್ರೇಕದ ಹೋರಾಟ ಮಾಡಿದವರು ಕರ್ನಾಟಕದ ನೀರಾವರಿ ಸಚಿವ ಎಂ.ಬಿ. ಪಾಟೀಲ್.
ಪಾಟೀಲರು ಸುಪ್ರೀಂ ಕೋರ್ಟ್‌ನಲ್ಲಿ, ಹೇಗೆ ತುದಿಗಾಲಲ್ಲಿ ನಿಂತಿದ್ದರೆಂಬುದನ್ನು ತಮಿಳು ಸುದ್ದಿವಾಹಿನಿಯೊಂದಕ್ಕಾಗಿ ಕೆಲಸ ಮಾಡುತ್ತಿರುವ ದಿಲ್ಲಿ ಮೂಲದ ಪತ್ರಕರ್ತರೊಬ್ಬರು ವಿವರಿಸಿದ್ದಾರೆ. ಸ್ಥಳಕ್ಕಾಗಿ ಪೇಚಾಡುತ್ತ, ವಾದಗಳನ್ನು ಹಾಗೂ ಅಂಕಿ-ಅಂಶಗಳನ್ನು ವಕೀಲರ ಕಿವಿಯಲ್ಲಿ ಪಿಸುಗುಟ್ಟುತ್ತ, ಮಾಹಿತಿಯ ಚೀಟಿಗಳನ್ನು ಕಳುಹಿಸುತ್ತ, ಸರಿಯಾದ ವ್ಯಕ್ತಿಗೇ ಅದು ತಲುಪಿದೆಯೆಂಬುದನ್ನು ಖಾತ್ರಿಪಡಿಸುತ್ತ ಹಾಗೂ ಮೂರ್ತಿಗಳು ವಾದವನ್ನು ಕೇಳುತ್ತಿದ್ದಾರೆಂದು ಖಚಿತಪಡಿಸಿಕೊಳ್ಳುತ್ತ ಅವರು ಉದ್ವಿಗ್ನತೆಯಿಂದ ಚಡಪಡಿಸುತ್ತಿದ್ದರು.
ಒಂದು ಹಂತದಲ್ಲಿ ಆವೇಶಕ್ಕೊಳಗಾದವರಂತೆ ಪಾಟೀಲ್, ನ್ಯಾಯಮೂರ್ತಿ ಎತ್ತಿದ ಪ್ರಶ್ನೆಗೆ ಉತ್ತರವನ್ನು ಗಟ್ಟಿಯಾಗಿ ಹೇಳಿದ್ದರು.
  ಸಂದರ್ಶಕರ ಸಾಲಿನಲ್ಲಿದ್ದ ಸಚಿವರು, ನ್ಯಾಯಮೂರ್ತಿಗಳು ಪ್ರಶ್ನೆ ಕೇಳಿದಾಗೆಲ್ಲ ರಾಜ್ಯದ ವಕೀಲರಿಗೆ ಹೇಗೆ ಉತ್ತರಗಳನ್ನು ದಾಟಿಸುತ್ತಿದ್ದರೆಂಬುದನ್ನು ‘ತಂತಿ ಟಿವಿ’ಯ ಪತ್ರಕರ್ತ ಅರವಿಂದ ಗುಣಶೇಖರ್ ಫೇಸ್‌ಬುಕ್‌ನಲ್ಲಿ ಈ ಕೆಳಗಿನಂತೆ ವಿವರಿಸಿದ್ದಾರೆ.
‘ಒಬ್ಬ ರಾಜಕಾರಣಿ ತನ್ನ ಹುದ್ದೆಗೆ ಇಷ್ಟೊಂದು ನಿಷ್ಠನಾಗಿರುವುದನ್ನು ನಾನು ಬಹಳ ಕಾಲದ ಬಳಿಕ ನೋಡಿದೆ’.
 ಕಾವೇರಿ ವಿವಾದದ ವಿಚಾರಣೆಯ ವೇಳೆ ಕರ್ನಾಟಕದ ನೀರಾವರಿ ಸಚಿವ ಎಂ.ಬಿ. ಪಾಟೀಲ್, ರಾಜ್ಯದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್‌ರೊಂದಿಗೆ ಸುಪ್ರೀಂಕೋರ್ಟ್‌ನಲ್ಲಿ ಹಾಜರಿದ್ದರು. ಅವರು ಕರ್ನಾಟಕದ ಪತ್ರಕರ್ತರೊಂದಿಗೆ ಸಂದರ್ಶಕರ ಸಾಲಿನಲ್ಲಿ ನಿಂತುಕೊಂಡಿದ್ದರು. ವಿಚಾರಣೆಯುದ್ದಕ್ಕೂ ಅವರು ತುದಿಗಾಲಲ್ಲೇ ನಿಂತಿದ್ದರು. ಆಗಾಗ ಪಾಟೀಲ್ ಹತ್ತಿರವಿದ್ದ ಪತ್ರಕರ್ತನಿಂದ ಕಾಗದ ಹಾಗೂ ಪೆನ್ ತೆಗೆದುಕೊಂಡು ಅಂಕಿ-ಅಂಶ ಉತ್ತರಗಳನ್ನೊಳಗೊಂಡ ಚೀಟಿಯನ್ನು ತನ್ನ ವಕೀಲರಿಗೆ ಕಳುಹಿಸುತ್ತಿದ್ದರು. ಕರ್ನಾಟಕದ ವಕೀಲರಿಗೆ ನ್ಯಾಯಮೂರ್ತಿಗಳು ಪ್ರಶ್ನೆಗಳನ್ನು ಕೇಳಿದಾಗೆಲ್ಲ ಅವರು ಉತ್ತರವನ್ನು ಪಿಸುಗಟ್ಟುತ್ತಿದ್ದರು. ಒಂದು ಹಂತದಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಪಾಟೀಲ್, ಉತ್ತರವನ್ನು ಗಟ್ಟಿಯಾಗಿಯೇ ಉಚ್ಚರಿಸಿದ್ದರು. ವಿಚಾರಣೆಗೆ ಹಾಜರಾಗಿ, ಇಡೀ ದಿನ ನ್ಯಾಯಾಲಯದಲ್ಲಿ ನಿಲ್ಲುವುದು ಅವರಿಗೆ ಅಗತ್ಯವಿರಲಿಲ್ಲ. ಆದರೆ, ಪಾಟೀಲರು ಮಾಡಿದ್ದರು. ಅದು ಕರ್ನಾಟಕಕ್ಕಾಗಿ ಅವರ ನಿಷ್ಠೆ ಹಾಗೂ ಒಳಗೊಳ್ಳುವಿಕೆಯನ್ನು ತೋರಿಸಿದೆಯೆಂದು ಅರವಿಂದ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X