Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 25 ವರ್ಷದ ಬಳಿಕ ವಿಟ್ಲದ ವ್ಯಕ್ತಿ ಪತ್ತೆ:...

25 ವರ್ಷದ ಬಳಿಕ ವಿಟ್ಲದ ವ್ಯಕ್ತಿ ಪತ್ತೆ: ಸಂಬಂಧವನ್ನು ಪೋಣಿಸಿದ ಫೇಸ್‌ಬುಕ್

ರಶೀದ್ ವಿಟ್ಲರಶೀದ್ ವಿಟ್ಲ22 Sept 2016 12:22 AM IST
share
25 ವರ್ಷದ ಬಳಿಕ ವಿಟ್ಲದ ವ್ಯಕ್ತಿ ಪತ್ತೆ: ಸಂಬಂಧವನ್ನು ಪೋಣಿಸಿದ ಫೇಸ್‌ಬುಕ್



ವಿಟ್ಲ, ಸೆ.21: ಸುಮಾರು 25 ವರ್ಷದ ಹಿಂದೆ ವಿಟ್ಲ ಸಮೀಪದ ಬುಳೇರಿಕಟ್ಟೆಯಿಂದ ನಾಪತ್ತೆಯಾಗಿದ್ದ ಟೈಲರ್ ವೃತ್ತಿಯ ವ್ಯಕ್ತಿ ‘ಫೇಸ್‌ಬುಕ್’ನಿಂದಾಗಿ ಪತ್ತೆಯಾಗಿದ್ದಾರೆ. ವಿಪರ್ಯಾಸವೇನೆಂದರೆ, ಕುಟುಂಬಸ್ಥರು ಮೊದಲು ಕಂಡದ್ದು ಅವರ ಪ್ರಜ್ಞಾಹೀನತೆ, ಕ್ಷಣಾರ್ಧದಲ್ಲಿ ಅವರ ಮೃತದೇಹ!.
ಸೆ.16ರಂದು ‘ಬೆಂಗಳೂರು ಸಿಟಿ ಪೊಲೀಸ್’ ಎಂಬ ಫೇಸ್‌ಬುಕ್ ಪುಟದಲ್ಲಿ ಪಾನ್‌ಕಾರ್ಡ್ ಇಮೇಜ್‌ನೊಂದಿಗೆ ಒಂದು ಪೋಸ್ಟ್ ಹಾಕಲಾಗಿತ್ತು. ಈ ಚಿತ್ರದಲ್ಲಿ ಕಾಣುವ ವೈ. ಜಯರಾಮ ಭಟ್ ಎಂಬವರು ಪ್ರಜ್ಞೆ ತಪ್ಪಿರುವ ಸ್ಥಿತಿಯಲ್ಲಿ ಬೆಂಗಳೂರು ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ವಾರಸುದಾರರು ಇದ್ದಲ್ಲಿ ಸಂಪರ್ಕಿಸಲು ಮನವಿ ಮಾಡಲಾಗಿತ್ತು. ಇದು ವಾಟ್ಸಾಪ್‌ನಲ್ಲೂ ಹರಿದಾಡಿತು.
ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ಗಣೇಶ್ ಕಂಬಾರ್ ಅವರ ಕಣ್ಣಿಗೂ ಈ ಚಿತ್ರ ಬಿತ್ತು. ‘ಇವರು ಹೌದೋ... ಅಲ್ಲವೋ’ ಎಂದು ಒಂದು ಕ್ಷಣ ಅನುಮಾನಗೊಂಡ ಗಣೇಶ್ ತಕ್ಷಣ ತನ್ನ ಸ್ನೇಹಿತನ ಜೊತೆ ಹನುಮಂತ ನಗರ ಪೊಲೀಸರನ್ನು ಸಂಪರ್ಕಿಸಿ, ಬಳಿಕ ಆಸ್ಪತ್ರೆಗೆ ಧಾವಿಸಿದಾಗ ಅಲ್ಲಿ ಪ್ರಜ್ಞಾಹೀನರಾಗಿ ಮಲಗಿದ್ದವರು ತನ್ನ ಹುಟ್ಟೂರಿನ ಟೈಲರ್ ವೃತ್ತಿಯ ವೈ. ಜಯರಾಮ ಭಟ್ ಎಂಬುದನ್ನು ಖಚಿತಪಡಿಸಿಕೊಂಡರು.

ಗಣೇಶ್ ಕಂಬಾರ್ ವಿಟ್ಲ ಸಮೀಪದ ಬಲ್ನಾಡು ಗ್ರಾಮದ ಬುಳೇರಿಕಟ್ಟೆ ನಿವಾಸಿ. ಅವರದೇ ಊರಿನ ಜನಾರ್ದನ ಭಟ್‌ರ ಪುತ್ರ ವೈ. ಜಯರಾಮ ಭಟ್ ಬುಳೇರಿಕಟ್ಟೆಯಲ್ಲಿ ಟೈಲರ್ ಆಗಿದ್ದರು. ಗಣೇಶ್ ಕಂಬಾರ್ 10ನೆ ತರಗತಿ ಮುಗಿಸಿ ಪಿಯುಸಿ ಪದಾರ್ಪಣೆ ಮಾಡುವುದರಲ್ಲಿದ್ದರು. ಚಡ್ಡಿಯ ಬದಲು ಪ್ರಥಮವಾಗಿ ಪ್ಯಾಂಟ್ ಹಾಕಬೇಕಿತ್ತು. ಗಣೇಶ್‌ಗೆ ಅದೇ ಮೊದಲ ಬಾರಿ ಹಾಕುವ ಪ್ಯಾಂಟನ್ನು ಹೊಲಿದುಕೊಟ್ಟವರು ಟೈಲರ್ ಜಯರಾಮ ಭಟ್. ಆವಾಗ ಬುಳೇರಿಕಟ್ಟೆ ಪ್ರದೇಶದಲ್ಲಿ ಅವರೊಬ್ಬರೇ ಟೈಲರ್. ಗಣೇಶ್‌ಗೆ ಇದೀಗ 45ರ ಹರೆಯವಾದರೆ, ಜಯರಾಮ ಭಟ್ ಗೆ 52 ವರ್ಷ. ಅಂದಹಾಗೆ, ಜಯರಾಮ ಭಟ್ ಮದುವೆಯಾದ ಬಳಿಕ ಬುಳೇರಿಕಟ್ಟೆಯ ಮನೆಯಿಂದ ದಿಢೀರ್ ನಾಪತ್ತೆಯಾಗಿದ್ದರು. ಕಳೆದ 25 ವರ್ಷದಿಂದ ಅವರ ಮತ್ತು ಕುಟುಂಬದ ಕೊಂಡಿ ಕಳಚಿತ್ತು. ಜಯರಾಮ ಭಟ್‌ರ ತಂದೆ ಮತ್ತು ಹಿರಿಯ ಸಹೋದರ ನಿಧನರಾಗಿದ್ದಾರೆ. ಜಯರಾಮ ಭಟ್ ಆಸ್ಪತ್ರೆಯಲ್ಲಿರುವುದನ್ನು ಕಿರಿಯ ಸಹೋದರ ಚಂದ್ರಶೇಖರ ಭಟ್‌ರಿಗೆ ಗಣೇಶ್ ಕಂಬಾರ್ ಫೋನ್ ಮೂಲಕ ತಿಳಿಸಿದ್ದು, ಅದರಂತೆ ಕಳೆದ ಶನಿವಾರ ಬೆಂಗಳೂರಿಗೆ ತೆರಳಿದ ಚಂದ್ರಶೇಖರ ಭಟ್ 28 ವರ್ಷಗಳ ಹಿಂದೆ ಕಾಣೆಯಾಗಿದ್ದ ತನ್ನ ಸಹೋದರ ಜಯರಾಮ ಭಟ್‌ರನ್ನು ಆಸ್ಪತ್ರೆಯಲ್ಲಿ ಕಂಡರೂ ಮಾತನಾಡಲು ಸಾಧ್ಯವಾಗಲಿಲ್ಲ. ಯಾಕೆಂದರೆ, ಜಯರಾಮ ಭಟ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕುಟುಂಬದ ಸದಸ್ಯ ಕಾಣಲು ಸಿಕ್ಕಿದರೂ ಆ ಖುಷಿ ಹೆಚ್ಚು ಹೊತ್ತು ಇರಲಿಲ್ಲ. ಅಂದರೆ, ಜಯರಾಮ ಭಟ್ ಇಹಲೋಕ ತ್ಯಜಿಸಿದ್ದರು. ಒಟ್ಟಿನಲ್ಲಿ ಯುವಕನಾಗಿದ್ದಾಗ ಮನೆಬಿಟ್ಟು ಹೋಗಿದ್ದ ಜಯರಾಮ ಭಟ್ 25 ವರ್ಷಗಳ ನಂತರ ಮನೆಯವರಿಗೆ ಕಾಣಲು ಸಿಕ್ಕರೂ ಆ ಸಂಭ್ರಮ ವಿಷಾದದಲ್ಲಿ ಅಂತ್ಯ ಕಂಡಿತು.

ಹನುಮಂತ ನಗರದ 50 ಫೀಟ್ ರಸ್ತೆಯಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದಾರೆಂದು ಸೆ.15ರ ಸಂಜೆ 4:30ಕ್ಕೆ ಠಾಣೆಗೆ ಕರೆಬಂತು. ತಕ್ಷಣ ನಾವಲ್ಲಿಗೆ ತೆರಳಿ ಆ ವ್ಯಕ್ತಿಯನ್ನು ಬನ್ನೇರುಘಟ್ಟ ಆರ್.ವಿ.ಎಂ. ಆಸ್ಪತ್ರೆಗೆ ದಾಖಲಿಸಿದೆವು. ವ್ಯಕ್ತಿಯ ಕಿಸೆಯಲ್ಲಿ ಪಾನ್‌ಕಾರ್ಡ್ ಬಿಟ್ಟು ಬೇರೇನೂ ಇರಲಿಲ್ಲ. ಅದನ್ನು ‘ಬೆಂಗಳೂರು ಸಿಟಿ ಪೊಲೀಸ್’ನ ‘ಫೇಸ್‌ಬುಕ್’ ಪುಟದಲ್ಲಿ ಹಾಕಲಾಗಿತ್ತು. ಸೆ.16ರಂದು ಇಬ್ಬರು ಪರಿಚಯಸ್ಥರೆಂದು ಹೇಳಿ ಠಾಣೆಗೆ ಬಂದಿದ್ದರು. ನಂತರ ಮನೆಯವರು ಸೆ.17ರಂದು ಬಂದರು. 2 ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು’ ಎಂದು ಹನುಮಂತನಗರ ಪೊಲೀಸ್ ಇನ್‌ಸ್ಪೆಕ್ಟರ್ ದಿಲೀಪ್ ಕುಮಾರ್ ಕೆ.ಎಚ್. ತಿಳಿಸಿದ್ದಾರೆ.

share
ರಶೀದ್ ವಿಟ್ಲ
ರಶೀದ್ ವಿಟ್ಲ
Next Story
X