Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಅಂಗನವಾಡಿಗಳಲ್ಲಿ ಉತ್ತಮ ಸೌಲಭ್ಯ...

ಸರಕಾರಿ ಅಂಗನವಾಡಿಗಳಲ್ಲಿ ಉತ್ತಮ ಸೌಲಭ್ಯ ಅಗತ್ಯ

ವಾರ್ತಾಭಾರತಿವಾರ್ತಾಭಾರತಿ22 Sept 2016 10:05 PM IST
share

ಕಾರವಾರ, ಸೆ.22: ಪಾಲಕರು ತಮ್ಮ ಮಕ್ಕಳನ್ನು ಕಿಂಡರ್ ಗಾರ್ಟನ್‌ಗಳಿಗೆ ಸೇರಿಸುತ್ತಿದ್ದಾರೆ. ಇದರಿಂದ ಸರಕಾರಿ ಅಂಗನವಾಡಿಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಂಗನವಾಡಿಗಳಲ್ಲಿ ಕಿಂಡರ್ ಗಾರ್ಟನ್‌ನಷ್ಟೇ ಸೌಲಭ್ಯ ಕಲ್ಪಿಸಬೇಕು ಎಂದು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಇಲ್ಲಿನ ತಾಲೂಕು ಪಂಚಾಯತ್‌ನಲ್ಲಿ ಗುರುವಾರ ನಡೆದ ಸಭೆಯಲ್ಲಿ ಸರ್ವ ಸದಸ್ಯರು ನಿರ್ಣಯ ಕೈಗೊಂಡರು. 

ತಾಲೂಕು ಪಂಚಾಯತ್ ಅಧ್ಯಕ್ಷೆ ಪ್ರಮಿಳಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆದವು. ಸರಕಾರಿ ಅಂಗನವಾಡಿಯಲ್ಲಿ ಯಾವುದೇ ಸೌಲಭ್ಯಗಳು ಇಲ್ಲದೆ ಇರುವುದರಿಂದ ಅನೇಕ ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಕಡಿಮೆ ಮಕ್ಕಳಿರುವ ಅಂಗನವಾಡಿಗಳನ್ನು ಬೇರೆಡೆ ಸ್ಥಳಾಂತರಿಸುವ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಎಚ್. ನಾಯ್ಕ ವಿಷಯ ಪ್ರಸ್ತಾಪಿಸಿ, ಅಂಗನವಾಡಿಗಳ ಮೇಲ್ಛಾವಣಿಗಳು ಸೋರುತ್ತಿದೆ. ಆಟಿಕೆ ಸಾಮಗ್ರಿಗಳು ಸೇರಿದಂತೆ ಯಾವುದೇ ವ್ಯವಸ್ಥೆಗಳಿಲ್ಲದ ಕಾರಣ ಖಾಸಗಿ ಕಿಂಡರ್ ಗಾರ್ಟನ್‌ಗಳಿಗೆ ಮಕ್ಕಳನ್ನು ಕಳುಹಿಸಲಾಗುತ್ತಿದೆ. ಅಂಗನವಾಡಿಗಳಿಗೆ ಉತ್ತಮ ಸೇವೆಗಳನ್ನು ಕಲ್ಪಿಸಿದರೆ ಮಕ್ಕಳ ಸಂಖ್ಯೆಯೂ ಹೆಚ್ಚುತ್ತದೆ ಎಂದು ಪ್ರಸ್ತಾಪಿಸಿದರು. ಮುಡಗೇರಿ ಗ್ರಾಪಂ ವ್ಯಾಪ್ತಿಯ ಸಾನ ಮುಡಗೇರಿ ಅಂಗನವಾಡಿ ಕಟ್ಟಡ ಕಾಮಗಾರಿ ಕಳಪೆಯಾಗಿದೆ. ಸ್ಲಾಬ್‌ಗೆ ನೀರು ಹಾಕದೇ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ಸುರೇಂದ್ರ ಗಾಂವಕರ್ ಆಕ್ಷೇಪಿಸಿದರು. ಸ್ಥಳ ಪರಿಶೀಲನೆ ನಡೆಸುವಂತೆ ಸಿಡಿಪಿಒಗೆ ಸೂಚಿಸಿದರು.

 ಅನುಸೂಚಿತ ಬುಡಕಟ್ಟು ಮತ್ತು ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಿಂದ ತಾಲೂಕಿನ ಜನರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಜಿಪಂ ಸದಸ್ಯ ಶಾಂತಾ ಬಾಂದೇಕರ್ ಆಕ್ಷೇಪ ವ್ಯಕ್ತಪಡಿಸಿದರು. ಅರ್ಜಿ ಸಲ್ಲಿಸಲು ಇರುವ ನಿಯಮಾವಳಿಗಳನ್ನು ಸಡಿಲಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಅರಣ್ಯ ಅಧಿಕಾರಿ ಕೆ.ಡಿ. ನಾಯ್ಕ, ನಿಯಮಾವಳಿ ಸಡಿಲಿಕೆ ಸರಕಾರದ ಮಟ್ಟದಲ್ಲಿ ಆಗಬೇಕಾಗಿದೆ ಎಂದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಕೃಷ್ಣ ಮೆಹತಾ, ಚೈತ್ರಾ ಕೊಠಾರಕರ್, ತಾಪಂ ಉಪಾಧ್ಯಕ್ಷ ರವೀಂದ್ರ ಪವಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X