Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೊರಬ ಪಪಂ ಜೆಡಿಎಸ್ ತೆಕ್ಕೆಗೆ

ಸೊರಬ ಪಪಂ ಜೆಡಿಎಸ್ ತೆಕ್ಕೆಗೆ

ಇತಿಹಾಸ ಸೃಷ್ಟಿಸಿದ ಬೀಬಿ ಝುಲೇಖಾ

ವಾರ್ತಾಭಾರತಿವಾರ್ತಾಭಾರತಿ22 Sept 2016 10:09 PM IST
share
ಸೊರಬ ಪಪಂ ಜೆಡಿಎಸ್ ತೆಕ್ಕೆಗೆ

ಸೊರಬ, ಸೆ.22: ಇಲ್ಲಿನ ಪಟ್ಟಣ ಪಂಚಾಯತ್‌ಗೆ ಗುರುವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್‌ನ ಬೀಬಿಝುಲೇಖಾ ಪಯಾಝ್ ಅಹ್ಮದ್ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ರತ್ನಮ್ಮ ನಾಗಪ್ಪಮಾಸ್ತರ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಗಳಾಗಿ ಜೆಡಿಎಸ್‌ನ ಬೀಬಿ ಝುಲೇಖಾ ಹಾಗೂ ಪಕ್ಷೇತರ ಅಭ್ಯರ್ಥಿ ಶ್ರೀರಂಜನಿ ನಾಮಪತ್ರ ಸಲ್ಲಿಸಿದ್ದರು. ಅಂತೆಯೇ ಉಪಾಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಏಕ ಮಾತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಪಪಂ ನ 11 ಕ್ಷೇತ್ರಗಳಲ್ಲಿ ಜೆಡಿಎಸ್, ಕೆಜೆಪಿ, ಕಾಂಗ್ರೆಸ್‌ಗಳ ತಲಾ ಮೂವರು ಸದಸ್ಯರು ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಚುನಾಯಿತರಾಗಿದ್ದರು. ಮೊದಲ ಅವಧಿಯ ತರುವಾಯ ಎರಡನೆ ಅವಧಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ನ ಬೀಬಿ ಝುಲೇಖಾ ಅವರಿಗೆ ಶಾಸಕ ಮಧುಬಂಗಾರಪ್ಪ ಸೇರಿದಂತೆ ಒಟ್ಟು 7 ಸದಸ್ಯರು ಕೈ ಎತ್ತುವ ಮೂಲಕ ಬೆಂಬಲ ಸೂಚಿಸಿದರು. ಪಕ್ಷೇತರ ಅಭ್ಯರ್ಥಿ ಶ್ರೀರಂಜನಿ 2 ಮತಗಳನ್ನು ಪಡೆದರು. ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಹಶೀಲ್ದಾರ್ ಎಲ್.ಬಿ. ಚಂದ್ರಶೇಖರ್ ಅವರು ಬೀಬಿ ಝುಲೇಖಾ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ರತ್ನಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಮಾಡಿ ಘೋಷಿಸಿದರು. ಚುನಾವಣಾ ಕರ್ತವ್ಯದಲ್ಲಿ ಪಪಂ ಮುಖ್ಯಾಧಿಕಾರಿ ಟಿ. ಬಾಲಚಂದ್ರ ಹಾಗೂ ಸಿಬ್ಬಂದಿ ಸಹಕರಿಸಿದರು.

ನಾಟಕೀಯ ಬೆಳವಣಿಗೆ: ಚುನಾವಣಾ ಪ್ರಕ್ರಿಯೆ ಇರುವ ಕುರಿತು ಮಾಹಿತಿ ಇದ್ದರೂ ಪಪಂ ಸದಸ್ಯ ಮಹೇಶ್ ಗೌಳಿ ಗೈರಾಗುವ ಮೂಲಕ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದರೆ. ಕಾಂಗ್ರೆಸ್‌ನ ಎಂ.ಡಿ. ಉಮೇಶ್ ಹಾಗೂ ಸುಜಾಯತುಲ್ಲಾ ಸಭೆಯ ಅವಧಿಗಿಂತ ತಡವಾಗಿ ಬಂದರು. ಸಭೆಗೆ ತಡವಾಗಿ ಬಂದಿದ್ದರಿಂದ ಚುನಾವಣಾಧಿಕಾರಿ ಮತಚಲಾಯಿಸಲು ಅವಕಾಶ ಕಲ್ಪಿಸಲಿಲ್ಲ. ಕೊಂಚ ಸಮಯ ಚುನಾವಣಾಧಿಕಾರಿ ಹಾಗೂ ಸದಸ್ಯರ ನಡುವೆ ಮತದಾನಕ್ಕಾಗಿ ಚರ್ಚೆ ನಡೆಯಿತಾದರೂ ಚುನಾವಣಾ ನಿಯಾಮಾವಳಿಗಳಂತೆ ಚುನಾವಣಾಧಿಕಾರಿ ಮತದಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಜೊತೆಯಲ್ಲಿ ಕಾಂಗ್ರೆಸ್‌ನಿಂದ ಚುನಾಯಿತರಾಗಿದ್ದ ಮಂಚಿ ಹನುಮಂತಪ್ಪ ಹಾಗೂ ಕೆಜೆಪಿಯಿಂದ ಆಯ್ಕೆಯಾಗಿದ್ದ ನೇತ್ರಾವತಿ ಕುಮಾರ್ ಹಾಗೂ ರತ್ನಮ್ಮನವರು ಜೆಡಿಎಸ್ ಅಧ್ಯಕ್ಷ ಅಭ್ಯರ್ಥಿಯ ಪರವಾಗಿ ಕೈ ಎತ್ತುವ ಮೂಲಕ ಬೆಂಬಲ ಸೂಚಿಸಿದ ಫಲವಾಗಿ ಬೀಬಿ ಝುಲೇಖಾ ಅಧ್ಯಕ್ಷ ಗಾದಿ ಅಲಂಕರಿಸಿದರು. ಒಟ್ಟಾರೆ ನಾಟಕೀಯ ಬೆಳವಣಿಗೆಯಲ್ಲಿ ಜೆಡಿಎಸ್‌ನ ಶಾಸಕ ಮಧುಬಂಗಾರಪ್ಪನವರ ಚಾಣಾಕ್ಷತನ ಮತ್ತೊಮ್ಮೆ ಸಾಬೀತಾಗಿದೆ. ಮುಂದುವರಿದ ಮಧು ಚಾಣಾಕ್ಷತನ

ಪಟ್ಟಣದಲ್ಲಿ ಹಲವು ಕುತೂಹಲಗಳಿಗೆ ಕಾರಣವಾಗಿದ್ದ ಸೊರಬ ಪಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕ ಮಧುಬಂಗಾರಪ್ಪ ಅವರ ರಾಜಕೀಯ ತಂತ್ರಗಳು ಫಲ ನೀಡಿದ್ದು, ಈ ಹಿಂದೆ ನಡೆದ ಗ್ರಾಪಂ, ಜಿಪಂ ಹಾಗೂ ಇತ್ತೀಚೆಗೆ ತಾಪಂ ಚುನಾವಣೆಯಲ್ಲಿಯೂ ಜೆಡಿಎಸ್ ಮೇಲುಗೈ ಸಾಧಿಸಿತ್ತು. ಒಟ್ಟು ಜೆಡಿಎಸ್ 11 ಸದಸ್ಯರ ಪೈಕಿ ಕೇವಲ ಮೂರು ಸದಸ್ಯರನ್ನು ಹೊಂದಿದ್ದರೂ ಸಹ ಅಧ್ಯಕ್ಷಗಾದಿ ಅಲಂಕರಿಸುವಲ್ಲಿ ಮಧು ತಮ್ಮ ಕ್ಷೇತ್ರದಲ್ಲಿ ತಮ್ಮ ಪಾರಪತ್ಯವನ್ನು ಮೆರೆದಿದ್ದಾರೆ.

ಕಾರ್ಯಕರ್ತರ ಸಂಭ್ರಮ:

ಪಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಹಾಗೂ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಶಾಸಕ ಮಧುಬಂಗಾರಪ್ಪ, ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಅವರಿಗೆ ಶುಭಕೋರಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.

ಮೊದಲ ಬಾರಿಗೆ ಅಲ್ಪಸಂಖ್ಯಾತ ಮಹಿಳೆ ಆಯ್ಕೆ:

ಬೀಬಿ ಝುಲೇಖಾ ಅವರಿಗೆ ಜೆಡಿಎಸ್ ಪಕ್ಷ ಅವಕಾಶ ಕಲ್ಪಿಸಿದ್ದು, ಅನಿರೀಕ್ಷಿತ ಬೆಳವಣಿಗೆಗಳ ಪರಿಣಾಮ ಸೊರಬ ಪಟ್ಟಣ ಪಂಚಾಯತ್‌ನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಮಹಿಳೆಯೋರ್ವರು ಅಧ್ಯಕ್ಷ ಗದ್ದುಗೆ ಏರುವಂತಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X