Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ. 27ರಂದು ಪಡುಬಿದ್ರೆ ಬೀಚ್‌ನಲ್ಲಿ...

ಸೆ. 27ರಂದು ಪಡುಬಿದ್ರೆ ಬೀಚ್‌ನಲ್ಲಿ ವಿಶ್ವಪ್ರವಾಸೋದ್ಯಮ ದಿನ

ವಾರ್ತಾಭಾರತಿವಾರ್ತಾಭಾರತಿ23 Sept 2016 6:23 PM IST
share

ಪಡುಬಿದ್ರೆ, ಸೆ.23: ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಮಿತಿ ಸಹಯೋಗದಲ್ಲಿ ಸೆಪ್ಟೆಂಬರ್ 27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಪಡುಬಿದ್ರೆ ಬೀಚ್‌ನಲ್ಲಿ ನಡೆಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ತಿಳಿಸಿದರು.

ಕಾಪು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು.

ಪ್ರವಾಸೋಧ್ಯಮಕ್ಕೆ ವಿಫುಲ ಅವಕಾಶ

ಉತ್ತಮ ಕರಾವಳಿ ಪ್ರದೇಶವನ್ನು ಹೊಂದಿರುವ ಉಡುಪಿ ಜಿಲ್ಲೆಯ ಪಡುಬಿದ್ರೆ, ಕಾಪು, ಮಲ್ಪೆ, ತ್ರಾಸಿ-ಮರವಂತೆ ಬೀಚ್‌ಗಳ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದೆ. ಒತ್ತಿನೆಣೆ ಬೀಚ್ ನಿರ್ವಹಣೆಯನ್ನು ಖಾಸಗಿ ನಿರ್ವಹಣೆಗೆ ನೀಡಲಾಗುವುದು. ಕರಾವಳಿ ತೀರದ ಬೀಚ್‌ಗಳ ನಿರ್ವಹಣಾ ಉಸ್ತುವಾರಿಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಲಾಗಿದೆ ಕಾಪು ಬೀಚ್ ಅನ್ನು ಜ್ಯೋತಿ ಅಡ್ವಟೈಸರ್ಸ್, ಮಲ್ಪೆಹಾಗೂ ತ್ರಾಸಿ-ಮರವಂತೆ ಬೀಚ್ ಅನ್ನು ಉಡುಪಿಯ ಡಯಲ್ ಮಂತ್ರ ಸಂಸ್ಥೆ ನಿರ್ವಹಿಸಲಿದೆ. ಪಡುಬಿದ್ರೆ ಬೀಚ್‌ಅನ್ನು ಐದು ವರ್ಷಗಳ ಅವಧಿಗೆ ಅಸೋಸಿಯೇಶನ್ ಆಫ್ ಕೋಸ್ಟಲ್ ಟೂರಿಸಂಗೆ ವಹಿಸಲಾಗಿದೆ. ಬೀಚ್‌ಗಳ ಸ್ವಚ್ಛತೆಗಾಗಿ 75 ಲಕ್ಷ ರೂ. ವೆಚ್ಚದ ಬೀಚ್‌ಕ್ಲೀನ್ ಯಂತ್ರವನ್ನು ಖರೀದಿಸಲಾಗಿದೆ. ಕೇಂದ್ರ ಸರಕಾರದ 1.45 ಕೋಟಿ ರೂ. ಅನುದಾನದಲ್ಲಿ ಪಡುಬಿದ್ರೆ ಬೀಚ್‌ನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಬನಾನ ಸ್ಕೇಟಿಂಗ್, ಮೋಟಾರ್ ಬೈಕಿಂಗ್ ಹಾಗೂ ಸರ್ಫಿಂಗ್ ನಡೆಸಲು ಪಡುಬಿದ್ರೆ ಬೀಚ್‌ನಲ್ಲಿ ಜಾಗ ಗುರುತಿಸಲಾಗಿದೆ ಎಂದರು.

ಅಸೋಸಿಯೇಶನ್ ಆಫ್ ಕೋಸ್ಟಲ್ ಟೂರಿಸಂ ಅಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿ, ವಿದೇಶಿ ನೇರ ಬಂಡವಾಳಕ್ಕೆ ಕೇಂದ್ರ ಸರಕಾರ ಮುಕ್ತ ಅವಕಾಶ ನೀಡಿದ ಹಿನ್ನಲೆಯಲ್ಲಿ ಪ್ರವಾಸೋದ್ಯಮ ಇನ್ನಷ್ಟು ಬೆಳೆಯಲು ಸಹಕಾರಿಯಾಗಿದೆ. ಸುಮಾರು ಮೂರು ಕಿ. ಮೀ. ಉತ್ತಮ ಬೀಚ್ ಹೊಂದಿರುವ ಪಡುಬಿದ್ರೆ ಸಮುದ್ರ ಪ್ರದೇಶ ಹಾಗೂ ಕಾಮಿನಿ ಹೊಳೆಯ ಹಿನ್ನೀರಿನಲ್ಲಿ ಜಲ ಸಾಹಸ ಕ್ರೀಡೆಗಳು ನಡೆಸಲು ಅನುಕೂಲಕರವಾಗಿವೆ. ಎರಡು ಜಿಲ್ಲೆಗಳ ಮಧ್ಯದಲ್ಲಿರುವ ಪಡುಬಿದ್ರೆ ಪ್ರವಾಸೋದ್ಯಮಕ್ಕೆ ಅನುಕೂಲಕರವಾದ ಪ್ರದೇಶವಾಗಿದೆ ಎಂದರು.

ಪುರುಷರು ಹಾಗೂ ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆ, ಬೈಕ್ ಸ್ಟಂಟ್ ಶೋ, ಇಂಪೋರ್ಟೆಡ್ ಬೈಕ್‌ಗಳ ಪ್ರದರ್ಶನ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ವರ್ಷದಿಂದ ಇದನ್ನು ಉತ್ಸವಗಳ ರೀತಿಯಲ್ಲಿ ಏಳು ದಿನಗಳ ಕಾಲ ನಡೆಸಲಾಗುವುದು.

ಸೆ.27ರಂದು ಪಡುಬಿದ್ರೆ ಬೀಚ್‌ನಲ್ಲಿ ನಡೆಯುವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಸೆರೆ ಹಿಡಿವ ಬೀಚ್‌ನ ಉತ್ತಮ ಸೆಲ್ಫಿ ಚಿತ್ರಗಳಿಗೆ ಬಹುಮಾನ ನೀಡಲಾಗುವುದು. ಅದಕ್ಕಾಗಿ ಫೇಸ್‌ಬುಕ್ ಖಾತೆ ತೆರೆದು ಅದರಲ್ಲಿ ಚಿತ್ರಗಳನ್ನು ಅಪ್ ಲೋಡ್ ಮಾಡಿ ಹೆಚ್ಚಿನ ಲೈಕ್ ಪಡೆಯುವ ಚಿತ್ರಕ್ಕೆ ಬಹುಮಾನ ನೀಡಲಾಗುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹರ್ಷರಾಜ್ ಶೆಟ್ಟಿ, ಗೌರವ ಶೇಣವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X