Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಹ್ಯಾದ್ರಿ ಕಲಾ, ವಿಜ್ಞಾನ ಕಾಲೇಜ್‌ಗೆ...

ಸಹ್ಯಾದ್ರಿ ಕಲಾ, ವಿಜ್ಞಾನ ಕಾಲೇಜ್‌ಗೆ ‘ಎ’ ಗ್ರೇಡ್

ಶೈಕ್ಷಣಿಕ ಗುಣಮಟ್ಟದ ವೌಲ್ಯಾಂಕ

ವಾರ್ತಾಭಾರತಿವಾರ್ತಾಭಾರತಿ23 Sept 2016 9:56 PM IST
share
ಸಹ್ಯಾದ್ರಿ ಕಲಾ, ವಿಜ್ಞಾನ ಕಾಲೇಜ್‌ಗೆ ‘ಎ’ ಗ್ರೇಡ್

ಶಿವಮೊಗ್ಗ, ಸೆ.23: ನಗರದ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ಅಮೃತ ಮಹೋತ್ಸವದ ವರ್ಷದಲ್ಲಿ ನ್ಯಾಕ್ ವೌಲ್ಯ ಮಾಪನದಲ್ಲಿ ‘ಎ’ ಗ್ರೇಡ್ ದೊರೆತಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಜೋಗನ್ ಶಂಕರ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜುಲೈ 25 ರಿಂದ 27ರವರೆಗೆ ನ್ಯಾಕ್ ಸಮಿತಿ ಸಹ್ಯಾದ್ರಿ ಕಾಲೇಜಿಗೆ ಭೇಟಿ ನೀಡಿತ್ತು. ಈ ಸಂದಭರ್ದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಮಾಹಿತಿಗಳನ್ನು ಪಡೆದು ಶೈಕ್ಷಣಿಕ ಗುಣಮಟ್ಟದ ವೌಲ್ಯಾಂಕವನ್ನು ನಿರ್ಧರಿಸಿದೆ. 2008-09ರ ಸಾಲಿನಲ್ಲಿ ಮೊದಲ ಬಾರಿಗೆ ಕಾಲೇಜಿಗೆ ‘ಎ’ ಗ್ರೇಡ್ ದೊರೆತಿತ್ತು ಎಂದು ವಿವರಿಸಿದರು.

ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಸತತ 2 ಬಾರಿ ‘ಎ’ ಗ್ರೇಡ್ ಪಡೆದ ಏಕೈಕ ಕಾಲೇಜು ಇದಾಗಿದೆ. ಈ ಕಾಲೇಜಿನಲ್ಲಿ 21 ಪ್ರಾಧ್ಯಾಪಕರು ಸಂಶೋಧನಾ ಮಾರ್ಗದರ್ಶಕರಾಗಿದ್ದಾರೆ. ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವನ್ನು ಕಾಲೇಜು ನೀಡುತ್ತಿದೆ. ಹಲವು ವಿಶೇಷ ಐಚ್ಛಿಕ ವಿಷಯಗಳನ್ನು ಇಲ್ಲಿ ಬೋಧಿಸಲಾಗುತ್ತಿದೆ ಎಂದ ಅವರು, ದೇಶದ 146 ಕಾಲೇಜುಗಳಲ್ಲಿ ಈ ಕಾಲೇಜಿಗೆ ‘ಕಾಲೇಜ್ ವಿದ್ ಪೊಟೆನ್ಷಿಯಲ್ ಫಾರ್ ಎಕ್ಸಲೆನ್ಸ್’ ಎಂಬ ಮಾನ್ಯತೆಯನ್ನು ಯುಜಿಸಿ ನೀಡಿದೆ ಎಂದರು.

ಈ ಹಿನ್ನೆಲೆಯಲ್ಲಿ ಕಾಲೇಜಿನ ಬೆಳವಣಿಗೆಗಾಗಿ ಯುಜಿಸಿಯು 1 ಕೋಟಿ ರೂ. ಅನುದಾನವನ್ನು ನೀಡಿದೆ. ಅದರಂತೆ ಮಹಾನಗರ ಪಾಲಿಕೆ, ಜಿಪಂ, ಎಂಎಲ್‌ಎ, ಎಂಎಲ್ಸಿ, ವಿವಿಧ ಪ್ರಾಧಿಕಾರಗಳು ಮತ್ತು ಜಿಲ್ಲಾಡಳಿತ ಮೂಲಸೌಕರ್ಯಕ್ಕಾಗಿ ವಿವಿಧ ರೀತಿಯಲ್ಲಿ ಸಹಾಯ ನೀಡಿವೆ ಎಂದು ಹೇಳಿದರು.

ಪ್ರಾಚಾರ್ಯ ಗೌಡರ ಶಿವಣ್ಣ ಮಾತನಾಡಿ, ಕಾಲೇಜಿನಲ್ಲಿ ಈ ವರ್ಷದಿಂದ ‘ಸಹ್ಯಾದ್ರಿ ಡೇ ಕೇರ್ ಕ್ಲಿನಿಕ್’ ಆರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅನುದಾನದಡಿ 15 ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ಮಲ್ಟಿ ಜಿಮ್ ಸ್ಥಾಪಿಸಲಾಗಿದೆ. ಎಂಎಲ್ಸಿ ಭಾನುಪ್ರಕಾಶ್ 3 ಲಕ್ಷ ರೂ. ಅನುದಾನ ನೀಡಿದ್ದು, ಇದರಿಂದ ಮಳೆಕೊಯ್ಲು ನಿರ್ಮಿಸಲಾಗಿದೆ. ಇನ್ನೋರ್ವ ಎಂಎಲ್ಸಿ ಗಣೇಶ್ ಕಾರ್ಣಿಕ್ ನೀಡಿದ 3 ಲಕ್ಷ ರೂ. ಅನುದಾನದಲ್ಲಿ ವಾಹನ ಪಾರ್ಕಿಂಗ್ ನಿರ್ಮಿಸಲಾಗಿದೆ. ಕಾಲೇಜಿನ ಪ್ರಾಧ್ಯಾಪಕ ಪ್ರೊ. ಪ್ರಕಾಶ್ ಮರುಗನಳ್ಳಿ ತಮ್ಮ ತಂದೆಯ ಹೆಸರಿನಲ್ಲಿ 2.75 ಲಕ್ಷ ರೂ. ವೆಚ್ಚದಲ್ಲಿ ಉದ್ಯಾನವನವನ್ನು ನಿರ್ಮಿಸಿದ್ದಾರೆ ಎಂದು ವಿವರಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X