Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡಾನೆ ಹಾವಳಿ ತಡೆಗೆ ಗ್ರಾಮಸ್ಥರ ಒತ್ತಾಯ

ಕಾಡಾನೆ ಹಾವಳಿ ತಡೆಗೆ ಗ್ರಾಮಸ್ಥರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 Sept 2016 10:02 PM IST
share
ಕಾಡಾನೆ ಹಾವಳಿ ತಡೆಗೆ ಗ್ರಾಮಸ್ಥರ ಒತ್ತಾಯ

 ಸಿದ್ದಾಪುರ, ಸೆ.23: ಸಿದ್ದಾಪುರ ಗ್ರಾಮ ಪಂಚಾಯತ್‌ನ ಗ್ರಾಮ ಸಭೆಯು ಅಧ್ಯಕ್ಷ ಎಂ.ಕೆ. ಮಣಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷ ಎಂ.ಕೆ. ಮಣಿ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಹೆಚ್ಚು ಗಮನವಹಿಸುತ್ತಿದ್ದೇವೆ. ಬೀದಿದೀಪ, ಕುಡಿಯುವ ನೀರು, ಮುಖ್ಯ ರಸ್ತೆಯಲ್ಲಿ ಇಂಟರ್ ಲಾಕ್, ಮನೆ ನಿರ್ಮಾಣ ಸೇರಿದಂತೆ ಬಯಲು ಮುಕ್ತ ಗ್ರಾಮವನ್ನಾಗಿಸಲು ಶೌಚಾಲಯ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಪ್ಲಾಸ್ಟಿಕ್ ಮುಕ್ತ ಪರಿಸರ ಕಾರ್ಯ ಮುಂದಾಗುವುದಾಗಿ ಹೇಳಿದ ಅವರು, ಗ್ರಾಮಸ್ಥರು ಸಹಕರಿಸಬೇಕೆಂದು ಮನವಿ ಮಾಡಿದರು. 

ಕಾರ್ಮಿಕ ಮುಖಂಡ ರಮೇಶ್ ಮಾತನಾಡಿ, ಕಂದಾಯ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಗ್ರಾಮ ಸಭೆಗೆ ಗೈರಾಗುತ್ತಿದ್ದು, ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ಹೇಳಿದರು. ಶಿಕ್ಷಣ ಇಲಾಖೆಯಿಂದ ಬಡ ವಿದ್ಯಾರ್ಥಿಗಳಿಗೆ ಸಿಗಬೇಕಾದ ಆರ್‌ಟಿಇ ಉಚಿತ ಶಿಕ್ಷಣ ಶ್ರೀಮಂತರ ಪಾಲಾಗುತ್ತಿದ್ದು, ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ, ಪರಿಶೀಲನೆ ನಡೆಸಿ ಬಡ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಅಧಿಕಾರಿ ಲಿಖಿತವಾಗಿ ದೂರು ನೀಡುವಂತೆ ತಿಳಿಸಿದರು.

ಬಿಜೆಪಿ ಮುಖಂಡ ಮನೋಹರ ಮಾತನಾಡಿ, ಸಿದ್ದಾಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿಯಿಂದ ಕಾರ್ಮಿಕರು ಶಾಲಾ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದರು.

  ಈ ಸಂದರ್ಭ ಉಪ ವಲಯ ಅರಣ್ಯಾಧಿಕಾರಿ ದೇವಯ್ಯ ಮಾತನಾಡಿ, ಈ ಭಾಗದಲ್ಲಿರುವ 4ಪುಂಡಾನೆಗಳನ್ನು ಹಿಡಿಯಲು ಮುಂದಾಗಿದು,್ದ ದಸರಾಕ್ಕೆ ತೆರಳಿರುವ ಸಾಕಾನೆ ಬಂದ ನಂತರ ಕಾರ್ಯಾಚರಣೆ ಮಾಡುವುದಾಗಿ ಹೇಳಿದ ಅವರು, ಕಾಡಾನೆ ಹಾವಳಿ ಭಾಗದಲ್ಲಿರುವ ವಿದ್ಯಾರ್ಥಿಗಳು ಶಾಲೆಗೆ ತೆರಳಲು ವಾಹನ ವ್ಯವಸ್ಥೆ ಮಾಡುವುದಾಗಿ ಹೇಳಿದರು. ಎಸ್‌ಡಿಪಿಐ ಮುಖಂಡ ಮುಸ್ತಫಾ ಮಾತನಾಡಿ, ಕಳೆದ 40 ವರ್ಷಗಳಿಂದ ಕಸ ವಿಲೇವಾರಿಗೆ ಸೂಕ್ತ ಜಾಗ ಕಂಡುಕೊಳ್ಳಲಾಗದೆ ಜನಪ್ರತಿನಿಧಿಗಳು ಮೌನವಾಗಿದ್ದಾರೆ. ಆಡಳಿತ ಮಂಡಳಿ ಶಾಶ್ವತ ಜಾಗ ಕಂಡುಕೊಳ್ಳಲು ಮುಂದಾಗಿದ್ದು, ಜಿಲ್ಲಾ ಪಂಚಾಯತ್ ಸದಸ್ಯರು ಸಹಕರಿಸಬೇಕೆಂದು ಮನವಿ ಮಾಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ವರದಿ ಮಂಡಿಸಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಡಾ. ತಮ್ಮಯ್ಯ ಉಪಸ್ಥಿತರಿದ್ದರು.

 ಸರಕಾರಗಳ ಯೋಜನೆಗಳನ್ನು ಗ್ರಾಮಸ್ಥರಿಗೆ ಮನವರಿಕೆ ಮಾಡಿ ಸದುಪಯೋಗ ಪಡಿಸಿ ಕೊಳ್ಳಬೇಕು. ಗುಹ್ಯ, ಕರಡಿಗೊಡು, ಸಿದ್ದಾಪುರ ಗ್ರಾಮಗಳಿಗೆ ಸೇತುವೆ, ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗಿದ್ದು, ರಸ್ತೆ ದುರಸ್ತಿ ಕಾರ್ಯ ಸದ್ಯದಲ್ಲೇ ನಡೆಯಲಿದೆ. ಕಸ ವಿಲೇವಾರಿ, ನಿವೇಶನ ಸಮಸ್ಯೆಗಳನ್ನು ಬಗೆಹರಿಸಲು ರಾಜಕೀಯ ರಹಿತವಾಗಿ ಸಚಿವರ ಬಳಿ ನಿಯೋಗ ತೆರಳುವುದಾಗಿ ಜಿಪಂ ಸದಸ್ಯೆ ಸರಿತಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X