Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿಧೆಡೆ ದಾಳಿ: 71 ಬಾಲ ಕಾರ್ಮಿಕರ...

ವಿವಿಧೆಡೆ ದಾಳಿ: 71 ಬಾಲ ಕಾರ್ಮಿಕರ ರಕ್ಷಣೆ!

ಶಿವಮೊಗ್ಗದಲ್ಲಿ ಮುಂದುವರಿದ ‘ಆಪರೇಷನ್ ಮುಸ್ಕಾನ್-2’ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ23 Sept 2016 10:13 PM IST
share
ವಿವಿಧೆಡೆ ದಾಳಿ: 71 ಬಾಲ ಕಾರ್ಮಿಕರ ರಕ್ಷಣೆ!

ಶಿವಮೊಗ್ಗ, ಸೆ. 23: ಬಾಲ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರಕಾರ ಆರಂಭಿಸಿರುವ ‘ಆಪರೇಷನ್ ಮುಸ್ಕಾನ್-2’ ಕಾರ್ಯಾಚರಣೆ ಜಿಲ್ಲಾದ್ಯಂತ ಮುಂದುವರಿದಿದ್ದು, ಭದ್ರಾವತಿ ಹಾಗೂ ಶಿಕಾರಿಪುರ ಪಟ್ಟಣಗಳಲ್ಲಿ ಕೆಲಸದಲ್ಲಿ ನಿರತರಾಗಿದ್ದ 71 ಬಾಲ ಕಾರ್ಮಿಕರನ್ನು ವಶಕ್ಕೆ ಪಡೆದು ರಕ್ಷಿಸಿದೆ.

ಅಧಿಕಾರಿಗಳ ವಿಶೇಷ ತಂಡವು ಸೆ. 21 ಮತ್ತು 22 ರಂದು ಭದ್ರಾವತಿ ಹಾಗೂ ಶಿಕಾರಿಪುರದ ವಿವಿಧೆಡೆ ದಿಢೀರ್ ದಾಳಿ ನಡೆಸಿ, ಕೆಲಸದಲ್ಲಿ ತೊಡಗಿದ್ದ 16 ವರ್ಷಕ್ಕಿಂತ ಕಡಿಮೆ ವಯೋಮಾನದ ಬಾಲ ಕಾರ್ಮಿಕರ ರಕ್ಷಣೆ ಮಾಡಿದೆ. ಬಳಿಕ ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಎದುರು ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

ಭದ್ರಾವತಿಯಲ್ಲಿ 29 ಹಾಗೂ ಶಿಕಾರಿಪುರದಲ್ಲಿ 42 ಬಾಲ ಕಾರ್ಮಿಕರ ಸಂರಕ್ಷಣೆ ಮಾಡಲಾಗಿದೆ. ಒಟ್ಟಾರೆ ಇಲ್ಲಿಯವರೆಗೆ ಜಿಲ್ಲೆಯಲ್ಲಿ 101 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಿಸಲಾಗಿದೆ. ಇನ್ನಷ್ಟು ದಿನಗಳ ಕಾಲ ಜಿಲ್ಲೆಯಾದ್ಯಂತ ಈ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ. ಕಾರ್ಯಾಚರಣೆ:

ಬಾಲ ಕಾರ್ಮಿಕರ ರಕ್ಷಣೆಗಾಗಿ ರಾಜ್ಯ ಸರಕಾರ ‘ಆಪರೇಷನ್ ಮುಸ್ಕಾನ್ - 2’ ಎಂಬ ಕಾರ್ಯಾಚರಣೆ ಆರಂಭಿಸಿದ್ದು, ಇದರನ್ವಯ ಜಿಲ್ಲಾ ಪೊಲೀಸ್ ಇಲಾಖೆ ನಗರದ ವಿವಿಧೆಡೆ ಕೆಲಸ ಮಾಡುತ್ತಿರುವ 16 ವರ್ಷವಯೋಮಾನದೊಳಗಿನ ಕಾರ್ಮಿಕರ ಪತ್ತೆಗೆ ಮುಂದಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ತಂಡವೊಂದನ್ನು ರಚಿಸಲಾಗಿದೆ. ತಂಡದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಬಾಲ ನ್ಯಾಯ ಮಂಡಳಿ, ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಘಟಕದವರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಈ ತಂಡವು ವಿವಿಧೆಡೆ ದಿಢೀರ್ ದಾಳಿ ನಡೆಸಿ ಬಾಲ ಕಾರ್ಮಿಕರ ಪತ್ತೆ ಕಾರ್ಯ ನಡೆಸುತ್ತಿದೆ. ಬಾಲ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡರೆ ವಿಧಿಸಬಹುದಾದ ದಂಡ - ಶಿಕ್ಷೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಈ ತಂಡ ಮಾಡುತ್ತಿದೆ. ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸ್ಥಳದ ಮುಖ್ಯಸ್ಥರ ವಿರುದ್ಧ ಕಾನೂನು ರೀತಿಯ ಕ್ರಮ ಕೂಡ ಜರಗಿಸುತ್ತಿದೆ. ಸಂಚಲನ: ಪ್ರಸ್ತುತ ಪೊಲೀಸ್ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆ ಜಿಲ್ಲೆಯಾದ್ಯಂತ ಸಂಚಲನ ಸೃಷ್ಟಿಸಿದ್ದು, 16 ವರ್ಷಕ್ಕಿಂತ ಕಡಿಮೆ ವಯೋಮಾನದವರನ್ನು ಕೆಲಸಕ್ಕೆ ನಿಯೋಜಿಸಿಕೊಂಡವರಲ್ಲಿ ತಳಮಳ ಸೃಷ್ಟಿಸಿದೆ. ಕಾರ್ಯಾಚರಣೆಯ ವಿಷಯ ತಿಳಿದು ಹಲವು ಮಂದಿ ಜನರು ತಮ್ಮ ಕಚೇರಿ, ಹೊಟೇಲ್, ಗ್ಯಾರೇಜ್‌ಗಳು ಸೇರಿದಂತೆ ಕರ್ತವ್ಯದ ಸ್ಥಳಗಳಲ್ಲಿ ಕೆಲಸಕ್ಕೆ ನಿಯೋಜಿಸಿ ಕೊಂಡಿದ್ದ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆ ಮಾಡುತ್ತಿರುವ ಮಾಹಿತಿ ತಿಳಿದು ಬಂದಿದೆ.

ಭದ್ರಾವತಿಯ 29; ಶಿಕಾರಿಪುರದ 42 ಬಾಲ ಕಾರ್ಮಿಕರು

 ಎಲ್ಲರೂ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X