Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿನಿಯರಿಗೆ ಲೆಂಗಿಕ ಕಿರುಕುಳ...

ವಿದ್ಯಾರ್ಥಿನಿಯರಿಗೆ ಲೆಂಗಿಕ ಕಿರುಕುಳ ನೀಡಿದ ಆರೋಪ

ಡಿಡಿಪಿಐ ಕಚೇರಿಗೆ ಮುತ್ತಿಗೆ, ಶಿಕ್ಷಕನ ವರ್ಗಾವಣೆಗೆ ಪಾಲಕರ ಪಟ್ಟು

ವಾರ್ತಾಭಾರತಿವಾರ್ತಾಭಾರತಿ24 Sept 2016 10:14 PM IST
share

  ಕಾರವಾರ, ಸೆ.24: ನಗರದ ಹಿಂದೂ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಆಮಾತುಗೊಂಡು ಮರು ನೇಮಕ ಗೊಂಡಿರುವ ಶಿಕ್ಷಕನ್ನು ವರ್ಗಾಯಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ಡಿಡಿಪಿಐ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ.

ಇಲ್ಲಿನ ಹಿಂದೂ ಪ್ರೌಢ ಶಾಲೆಯ ಕನ್ನಡ ಪ್ರಾಧ್ಯಾಪಕ ಬಸವರಾಜ್ ಕಂದಾರಿ ಎಂಬವರೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಮಾನತುಗೊಂಡು ಮರು ನೇಮಕಗೊಂಡವರು.

ಶಿಕ್ಷಕ ಕಂದಾರಿ ಕಳೆದ ಫೆ.10 ರಂದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿ ಅಮಾನತು ಮಾಡಲಾಗಿತ್ತು. ಆದರೆ, ಆರೋಪಿ ಅಧ್ಯಾಪಕ ಶಾಲೆಗೆ ಹಾಜರಾಗಿರುವುದನ್ನು ಕಂಡ ವಿದ್ಯಾರ್ಥಿಗಳ ಪೋಷಕರು ಕಾರವಾರ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಬಸವರಾಜ್ ಕಂದಾರಿ ಅವರು ಮರಳಿ ಶಾಲೆಗೆ ಬಂದಿರುವುದರಿಂದ ಮಕ್ಕಳಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ನಮ್ಮ ಮಕ್ಕಳು ಶಾಲೆಗೆ ಹೋದರೂ ತರಗತಿಗೆ ಹಾಜರಾಗುತ್ತಿಲ್ಲ ಶಾಲೆಗೆ ತೆರಳಲು ಭಯವಾಗುತ್ತಿದೆ ಎನ್ನುತ್ತಿದ್ದಾರೆ ಎಂದು ನಿರ್ದೇಶಕರ ಗಮನಕ್ಕೆ ತಂದ ಪಾಲಕರು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಕ ಕಂದಾರಿಯವರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಎಂದು ಪಟ್ಟು ಹಿಡಿದರು.

 ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಿಕ್ಷಕ ಕಂದಾರಿ ಈ ಹಿಂದೆ ಪುತ್ತೂರು ತಾಲೂಕಿನ ಗೊಟ್ಟೆಂಪಾಡಿ ಶಾಲೆಯೊಂದರಲ್ಲಿ ಕರ್ತವ್ಯದಲ್ಲಿರುವಾಗ ಅಲ್ಲಿಯೂ ಇದೇ ರೀತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕಾರಣ ಇಲ್ಲಿಗೆ ವರ್ಗಾಯಿಸಲಾಗಿತ್ತು. ಇಲ್ಲಿಯೂ ಅದೇ ಪ್ರವೃತ್ತಿ ಮುಂದುವರಿಸಿರುವ ಕಂದಾರಿಯನ್ನು ಶೀಘ್ರ ಹಿಂದೂ ಪ್ರೌಢಶಾಲೆಯಿಂದ ವರ್ಗಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

ನಡೆದಿದ್ದೇನು:    ಕಳೆದ ಫೆ.10ರಂದು ಹಿಂದೂ ಹೈಸ್ಕೂಲ್ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದ ಕಾರಣ ನಗರ ಠಾಣೆಯ ಪೊಲೀಸರು ಶಿಕ್ಷಕ ಬಸವರಾಜ್ ಕಂದಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದರು. ಡಿಡಿಪಿಐ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಹುದ್ದೆಯಿಂದ ಸರಿಯಬೇಕೆಂಬ ದೃಷ್ಟಿಯಿಂದ ಇಲ್ಲ ಸಲ್ಲದ ಆರೋಪ ತನ್ನ ಮೇಲೆ ಹಾಕಲಾಗುತ್ತಿದೆ. ವಿದ್ಯಾರ್ಥಿಗಳ ತಲೆ ಕೆಡಿಸಿದ್ದಾರೆ. ಮುಖ್ಯೊಪಾಧ್ಯಾಯ ಹುದ್ದೆ ಬಿಟ್ಟುಕೊಡು ಎಂದು ಸಾಕಷ್ಟು ಜೀವ ಬೆದರಿಕೆ ಕರೆಗಳು ಬಂದಿವೆ. ಕಳೆದ 2-3 ತಿಂಗಳಿಂದ ವೇತನ ನೀಡಿಲ್ಲ. ಇದರಿಂದಾಗಿ ಜೀವನ ನಿರ್ವಹಣೆ ದುಸ್ತರವಾಗಿದೆ. ಅಮಾನತು ಅವಧಿ ಮುಗಿದ ಬಳಿಕ ಶಾಲೆಗೆ ಹಾಜರಾಗಲು ಬಿಟ್ಟಿಲ್ಲ. ಹಾಜರಾಗದಿದ್ದರೆ ವಿನಾಕಾರಣ ನೋಟಿಸು ನೀಡುತ್ತಾರೆ. ಹಾಜರಾದ ಮೇಲೆ ಮತ್ತೆ ಮಕ್ಕಳಿಂದ ಹೆದರಿಸಿ, ಪಾಲಕರನ್ನು ತನ್ನ ಮೇಲೆ ಎತ್ತಿ ಕಟ್ಟಿದ್ದಾರೆ. ಯಾವುದೂ ಬೇಡ ಎಂದು ಬೇರೆ ಕಡೆ ತೆರಳಿದದರೆ ಅಲ್ಲಿಗೂ ದೂರವಾಣಿ ಮೂಲಕ ಕರೆ ಮಾಡಿ ತನ್ನ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ. ತಾವು ಯಾವುದೇ ತಪ್ಪು ಮಾಡಿಲ್ಲ.

ಬಸವರಾಜ್ ಕಂದಾರಿ, ಹಿಂದೂ ಪ್ರೌಢಶಾಲೆಯ ಶಿಕ್ಷಕ ಶಿಕ್ಷಕ ಕಂದಾರಿ ವಿರುದ್ಧ ತಾವು ಕ್ರಮಕೈಗೊಳ್ಳುವ ಅಧಿಕಾರವಿಲ್ಲ. ಶಾಲಾ ಆಡಳಿತ ಮಂಡಳಿ ಈ ಬಗ್ಗೆ ಕ್ರಮಕೈಗೊಳ್ಳಬೇಕು. ಪಾಲಕರು ನೀಡಿದ ದೂರನ್ನು ಮೇಲಧಿಕಾರಿಗೆ ಕಳುಹಿಸಿ, ಪತ್ರ ಬರೆಯುತ್ತೇನೆ. ಶಿಕ್ಷಕ ಬಸವರಾಜ್ ಕಂದಾರಿ ಮೇಲಿರುವ ಆರೋಪದ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X