Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ...

ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ24 Sept 2016 11:20 PM IST
share
ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಉಪ್ಪಿನಂಗಡಿ,ಸೆ.24: ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ 2015-16ನೇ ಸಾಲಿನಲ್ಲಿ 84,16,58,463.77 ಕೋಟಿ ವ್ಯವಹಾರ ನಡೆಸಿ, 43,38,365.05 ಲಕ್ಷ ರೂಪಾಯಿ ಲಾಭ ಗಳಿಸಿದೆ. ಪ್ರಸಕ್ತ ಸಾಲಿನಲ್ಲಿಯೂ ಸಂಘದ ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದ್ದು, ಈ ಬಾರಿಯೂ ಸಂಘವು ಸಾಲ ವಸೂಲಾತಿಯಲ್ಲಿ ಶೇ.100 ಸಾಧನೆ ಮಾಡಿದೆ ಎಂದು ಸಂಘದ ಅಧ್ಯಕ್ಷ ಎಸ್.ತೋಯಜಾಕ್ಷ ಶೆಟ್ಟಿ ತಿಳಿಸಿದರು.

ಸಂಘದ ಸಭಾಂಗಣದಲ್ಲಿ ಸೆ.24ರಂದು ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು ವರ್ಷಾಂತ್ಯದಲ್ಲಿ 1260 ಎ ದರ್ಜೆಯ ಹಾಗೂ 2763 ಸಿ ದರ್ಜೆಯ ಸದಸ್ಯರನ್ನು ಹೊಂದಿದ್ದು, 99,47,592 ಲಕ್ಷ ರೂಪಾಯಿ ಪಾಲು ಬಂಡವಾಳವನ್ನು ಹೊಂದಿದೆ. ಇದು ಕಳೆದ ವರ್ಷಕ್ಕಿಂತ ಶೇ.8.38 ವೃದ್ಧಿಯಾಗಿದೆ. ಸಾಲ ಮತ್ತು ಮಾರಾಟ ಜೋಡಣೆಯಂತೆ ರೈತರ ಕೃಷಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ವರದಿ ವರ್ಷದಲ್ಲಿ 3,46,87,784 ಕೋಟಿ ರೂಪಾಯಿ ಮೌಲ್ಯದ 129 ಟನ್ ಅಡಿಕೆಯನ್ನು ಕ್ಯಾಂಪ್ಕೋ ಮೂಲಕ ವ್ಯವಹಾರ ನಡೆಸಿದೆ. ಸಂಘವು ವರ್ಷಾಂತ್ಯಕ್ಕೆ 8,68,38,500.05 ಕೋಟಿ ಠೇವಣಾತಿಯಿದ್ದು, ಠೇವಣಾತಿ ಸಂಗ್ರಹದಲ್ಲಿ ಶೇ.18.23 ವೃದ್ಧಿಯಾಗಿದೆ. 10 ವರ್ಷದಲ್ಲಿ ಸತತವಾಗಿ ಸಂಘವು ಶೇ.100 ಸಾಲ ವಸೂಲಾತಿ ಮಾಡುತ್ತಿದೆ. ಈ ಯಶಸ್ಸಿಗೆ ಸಂಘದ ಸದಸ್ಯರು, ಗ್ರಾಹಕರು, ಠೇವಣಿದಾರರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಂಘದ ಸಿಬ್ಬಂದಿ ಕಾರಣವಾಗಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘದ ಹಿರಿಯ ಸದಸ್ಯರಾದ ಬಾಬು ಪೂಜಾರಿ ಕುರಿಯ, ಬಾಬು ಮೂಲ್ಯ, ಜನಾರ್ದನ ಆಚಾರ್ಯ, ವಿಠಲ ರೈ, ರಮಾನಾಥ ನಾಯಕ್, ನಾರಾಯಣ ಭಟ್, ಈಶ್ವರ ಭಟ್, ರಾಮಣ್ಣ ನಾಯಕ್ ನೂಜಿನಡ್ಕ, ಸಂಜೀವ, ವಿಜಯಕುಮಾರ್, ಜೊಸೇಫ್ ಪಿರೇರಾ, ಹೀನಾನ್ ಫೆರ್ನಾಂಡೀಸ್, ತುಕ್ರ ಮುಗೇರ, ರಕ್ಮ ಪೂಜಾರಿ, ನಾರಾಯಣ ಶೆಟ್ಟಿ, ವೀರಪ್ಪ ಗೌಡ, ಕೃಷ್ಣ ಅಗರ್ತಬೈಲು, ಮುಹಮ್ಮದ್ ಕುಂಞಿ ಕುರಿಯ, ತಿಮ್ಮಪ್ಪ ಪೂಜಾರಿ, ಮಾಯಿಲಪ್ಪ ನಾಯ್ಕ, ಗಿರಿಯಪ್ಪ ಆಚಾರ್ಯ, ಶಿವಪ್ಪ ಮೂಲ್ಯ, ಪದ್ಮಾವತಿ, ಗಿರಿಜಾ, ಬಾಬು ನಾಯ್ಕ ಹೊಳೆಬದಿ, ನರಸಿಂಹ ನಾಯಕ್ ಪೆರ್ನೆ, ಯಮುನಾ, ತಿಮ್ಮಪ್ಪ ಗೌಡ, ಶಂಕರ ನಾರಾಯಣ ಭಟ್, ಭೀಪಾತುಮ ಕಡಂಬು ಅವರನ್ನು ಸನ್ಮಾನಿಸಲಾಯಿತು.

  ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಅಬ್ದುಲ್ ಶಾಫಿ, ನಿರ್ದೇಶಕರಾದ ಡಾ. ರಾಜಗೋಪಾಲ್ ಶರ್ಮ, ಗೋಪಾಲ ಶೆಟ್ಟಿ ಎಸ್., ನೀಲಪ್ಪ ಗೌಡ, ತನಿಯಪ್ಪ ಪೂಜಾರಿ, ಲಕ್ಷ್ಮಣ ನಾಯ್ಕ, ಜಯಲಕ್ಷ್ಮಿ, ರೇವತಿ, ಗ್ರೇಟ್ಟಾ ಪಿಂಟೋ ಹಾಗೂ ಆರ್ಥಿಕ ಬ್ಯಾಂಕ್‌ನ ಪ್ರತಿನಿಧಿ ಯೊಗೀಶ್ ಎಚ್. ಉಪಸ್ಥಿತರಿದ್ದರು. ಸಂಘದ ಸದಸ್ಯರಾದ ಉಮಾನಾಥ ಶೆಟ್ಟಿ, ಶ್ರೀಧರ್ ಗೌಡ, ವಿಶ್ವನಾಥ್ ಶೆಟ್ಟಿ, ಮಿತ್ರದಾಸ್ ರೈ, ಸುಂದರ ರೈ, ಮೋನಪ್ಪ ಗೌಡ, ಶಶಿಕಲಾ, ಕುಸುಮಾಧರ ಗೌಡ, ಕೃಷ್ಣ ನಾಯಕ್, ನರಸಿಂಹ ನಾಯಕ್, ಶಂಕರ್ ಭಟ್, ನಾರಾಯಣ ಭಟ್, ಪ್ರಕಾಶ್ ನಾಯಕ್, ನವೀನ್ ಬರೆಪ್ಪಾಡಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಡಿ. ವರದಿ ವಾಚಿಸಿದರು. ಸಂಘದ ಅಧ್ಯಕ್ಷ ತೋಯಜಾಕ್ಷ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X