Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಅವ್ಯವಸ್ಥೆಗಳ ಆಗರವಾಗಿದೆ...

ಕಾಸರಗೋಡು : ಅವ್ಯವಸ್ಥೆಗಳ ಆಗರವಾಗಿದೆ ಜಿ.ಪಂ.ನ ಮಹಿಳಾ ವಸತಿನಿಲಯ

ವಾರ್ತಾಭಾರತಿವಾರ್ತಾಭಾರತಿ25 Sept 2016 12:30 PM IST
share
ಕಾಸರಗೋಡು : ಅವ್ಯವಸ್ಥೆಗಳ ಆಗರವಾಗಿದೆ ಜಿ.ಪಂ.ನ ಮಹಿಳಾ ವಸತಿನಿಲಯ

ಕಾಸರಗೋಡು, ಸೆ.25: ಕುಡಿಯುವ ನೀರು ಸೇರಿದಂತೆ ಯಾವುದೇ ಸೌಕರ್ಯಗಳು ಸಮರ್ಪಕವಾಗಿಲಲ್ಲದಿದ್ದರೂ ವರ್ಷಕ್ಕೆ ಮೂರು ಬಾರಿ ಬಾಡಿಗೆದರ ಏರಿಕೆಗೆ ಮಾತ್ರ ಅಧಿಕಾರಿಗಳು ಹಿಂದೆ ಬೀಳುತ್ತಿಲ್ಲ. ಇದು ಕಾಸರಗೋಡು ಜಿಲ್ಲಾ ಪಂಚಾಯತ್‌ನ ಮಹಿಳಾ ವಸತಿ ನಿಲಯದ ದುಸ್ಥಿತಿ.

ಒಂದು ವರ್ಷದಲ್ಲಿ ಮೂರು ಬಾರಿ ಎಂಬಂತೆ ಬಾಡಿಗೆಯನ್ನು 700 ರೂ.ನಿಂದ 1,200 ರೂ.ಗೆ ಏರಿಕೆ ಮಾಡಲಾಗಿದೆ. 12 ಮಂದಿ ಮಹಿಳಾ ಸರಕಾರಿ ನೌಕರರು, ಏಳು ಮಂದಿ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 31 ಮಂದಿ ವಿದ್ಯಾನಗರ ವಿದ್ಯಾಗಿರಿಯಲ್ಲಿರುವ ಈ ವಸತಿ ನಿಲಯದಲ್ಲಿದ್ದಾರೆ. ಈವರೆಗೆ 700 ರೂ. ಇದ್ದ ದರವನ್ನು 900 ರೂ.ಗೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ 1200ರೂ.ಗೆ ಹೆಚ್ಚಳ ಮಾಡಲಾಗಿದೆ. ಜೂನ್ 16 ರಿಂದ ಜುಲೈ ಮಧ್ಯದವರೆಗೆ ವಸತಿ ನಿಲಯಕ್ಕೆ ನೀರು ಸರಬರಾಜು ಸ್ಥಗಿತಗೊಂಡಿತ್ತು. ಹೀಗಾಗಿ ಹೊರಗಿನಿಂದ ಬಕೆಟ್‌ಗಳಲ್ಲಿ ನೀರು ತಂದು ಬಳಕೆ ಮಾಡಲಾಗುತ್ತಿತ್ತು. ಆದರೂ ನೀರಿನ ಬಿಲ್ ರೂಪದಲ್ಲಿ 16,919 ರೂ. ಪಾವತಿಸಲಾಗಿದೆ.

ವಸತಿ ನಿಲಯದಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ಬಿರುಕು ಬಿಟ್ಟ ಶೌಚಾಲಯ, ಸೋರುತ್ತಿರುವ ಅಡುಗೆ ಕೋಣೆ, ಸ್ವಿಚ್ ಹಾಕಿದಾಗ ಶಾಕ್ ಹೊಡೆಯುವ ವಯರಿಂಗ್ ಅವ್ಯವಸ್ಥೆ, ಮುರಿದು ಬಿದ್ದ ಕಿಟಿಕಿ ಗಳು ಹೀಗೆ ಹತ್ತು ಹಲವು ಸಮಸ್ಯೆಗಳು ಇಲ್ಲಿವೆ. ತ್ಯಾಜ್ಯ ಸಂಸ್ಕರಣೆಗೆ ವ್ಯವಸ್ಥೆ ಇಲ್ಲದೆ ಇರುವುದರಿಂದ ಸೊಳ್ಳೆಗಳ ಕಾಟ ತೀವ್ರಗೊಂಡಿದೆ. ಅಡುಗೆ ಕೋಣೆಯಲ್ಲಿ ಮಿಕ್ಸಿ, ಗ್ರೈಂಡರ್ ಮೊದಲಾದವುಗಳು ಕೆಟ್ಟು ಹೋಗಿದೆ. ವಸತಿ ನಿಲಯದ ಗೇಟ್ ಬಳಿ ವಿದ್ಯುತ್ ದೀಪ ಇಲ್ಲ. ಆದರೂ ಬಾಡಿಗೆ ದರವನ್ನು ಮಾತ್ರ ಏರಿಸಲಾಗುತ್ತಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಉದ್ಯೋಗ ಮಾಡಲು ಸಾಧ್ಯವಾಗದ ಸ್ಥಿತಿ ತಲೆದೋರಿದೆ. ಸೌಲಭ್ಯ ಕಲ್ಪಿಸಿ ಬಾಡಿಗೆ ಏರಿಕೆ ಮಾಡುತ್ತಿದ್ದಲ್ಲಿ ಸಮಸ್ಯೆ ತಲೆದೋರುತ್ತಿರಲಿಲ್ಲ. ಆದರೆ ಸೂಕ್ತ ಸೌಲಭ್ಯಗಳಿಲ್ಲದೆ ಬಾಡಿಗೆ ಹೆಚ್ಚಳ ವಸತಿ ನಿಲಯದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X