Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಡಿತರ ಗೊಂದಲಗಳಿಗೆ ಅಧಿಕಾರಿಗಳೇ ಕಾರಣ:...

ಪಡಿತರ ಗೊಂದಲಗಳಿಗೆ ಅಧಿಕಾರಿಗಳೇ ಕಾರಣ: ಸಚಿವ ಖಾದರ್

ಆಹಾರ ಸಚಿವರಿಂದ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ25 Sept 2016 10:30 PM IST
share
ಪಡಿತರ ಗೊಂದಲಗಳಿಗೆ ಅಧಿಕಾರಿಗಳೇ ಕಾರಣ: ಸಚಿವ ಖಾದರ್

ತೀರ್ಥಹಳ್ಳಿ,ಸೆ.25: ರಾಜ್ಯಾದ್ಯಂತ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ವಿಚಾರದಲ್ಲಿ ಬಹಳಷ್ಟು ಗೊಂದಲಗಳು ಕೇಳಿಬರುತ್ತಿವೆೆ. ಈ ವಿಚಾರಗಳಲ್ಲಿ ಗೊಂದಲ ಉಂಟಾಗಲು ಅಧಿಕಾರಿಗಳು ಮಾಡಿದ ತಪ್ಪೇ ಕಾರಣವಾಗಿದ್ದು, ಈ ತಪ್ಪಿನಿಂದ ಜನಪ್ರತಿನಿಧಿಗಳ ಮೇಲೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಬೋಗಸ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದ್ದು, ಕೂಪನ್ ವ್ಯವಸ್ಥೆ ಜಾರಿಗೆ ಬಂದ ಮೇಲೆ ಬೋಗಸ್ ಕಾರ್ಡ್‌ಗಳಿಗೆ ಕಡಿವಾಣ ಬಿದ್ದಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಪಟ್ಟಣದ ತಾಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಆಹಾರ ಮತ್ತು ಸರಬರಾಜು ಇಲಾಖೆ ವತಿಯಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪಡಿತರ ಚೀಟಿ ಹೊಂದಿದವರು ಬಹಳಷ್ಟು ಮಂದಿ ಆಧಾರ್ ಕಾರ್ಡ್ ನೋಂದಣಿ ಮಾಡಿಕೊಂಡಿಲ್ಲ. ಶೀಘ್ರವೇ ಆಧಾರ್ ಕಾರ್ಡ್ ಮಾಡಿಸಿಕೊಳ್ಳುವ ಅಗತ್ಯತೆ ಇದೆ. ಈಗಾಗಲೇ ಪಡಿತರ ವ್ಯವಸ್ಥೆ ಸುಗಮವಾಗಲು ಕೂಪನ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದರು.

ರಾಜ್ಯದಲ್ಲಿ ಸೀಮೆಎಣ್ಣೆ ಮುಕ್ತ ಮಾರುಕಟ್ಟೆ ಮಾಡಲು ಚಿಂತನೆ ನಡೆಸಲಾಗಿದೆ. ಕೇಂದ್ರ ಸರಕಾರದ ಉಜ್ವಲ್ ಯೋಜನೆಯಡಿಯಲ್ಲಿ ಗ್ಯಾಸ್ ಉಳ್ಳವರಿಗೆ ಸೀಮೆ ಎಣ್ಣೆ ನೀಡುತ್ತಿಲ್ಲ. ಸೀಮೆ ಎಣ್ಣೆಯ ಸಮಸ್ಯೆಗೆ ಕೇಂದ್ರ ಸರಕಾರವೇ ಕಾರಣವಾಗಿದ್ದು, ರಾಜ್ಯ ಸರಕಾರ ಮುಂದಿನ ದಿನಗಳಲ್ಲಿ ಉಜ್ವಲ ಯೋಜನೆಯ ಸೀಮೆ ಎಣ್ಣೆ ವಂಚಿತರಿಗೆ ಉಚಿತ ಗ್ಯಾಸ್ ನೀಡುವ ಬಗ್ಗೆ ಹಾಗೂ ಎರಡು ಸೋಲಾರ್ ದೀಪ ನೀಡುವ ಬಗ್ಗೆ ವಿಶೇಷ ಯೋಜನೆ ರೂಪಿಸಿದೆ ಎಂದರು.

ಇಲಾಖೆಯಲ್ಲಿ ಸುಧಾರಣೆಯಾಗಬೇಕಾದರೆ ಬದಲಾವಣೆಯಾಗಬೇಕು. ಬದಲಾವಣೆ ಆಗಬೇಕಾದರೆ ಜನತೆ ಮನೋಭಾವ ಬದಲಾಯಿಸಿಕೊಳ್ಳಬೇಕಾಗಿದೆ. ಆನ್‌ಲೈನ್ ಮೂಲಕ ಪಡಿತರ ಚೀಟಿಯನ್ನು ಪಡೆಯುವಂತೆ ಈಗಾಗಲೇ ಇಲಾಖೆ ತಿಳಿಸಿದ್ದು, ಆನ್‌ಲೈನ್ ಮೂಲಕ ಪಡಿತರ ಚೀಟಿ ಪಡೆದರೆ ಮೂರು ದಿನದಲ್ಲಿ ಅಧಿಕಾರಿಗಳ ಕೈಸೇರಿ 10 ದಿನಗಳ ನಂತರ ಗ್ರಾಹಕರಿಗೆ ಅಂಚೆ ಮೂಲಕ ಪಡಿತರ ಚೀಟಿ ದೊರೆಯುತ್ತದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಇಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳ ಬೇಕು. ಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿನ ಗುಣಮಟ್ಟದ ಬಗ್ಗೆ ಚರ್ಚಿಸಲು, ತಾಲೂಕು, ಜಿಲ್ಲಾ ಹಾಗೂ ನಗರ ಮಟ್ಟಗಳಲ್ಲಿ ಜಾಗೃತಿ ಸಮಿತಿಯನ್ನು ರಚಿಸಲಾಗಿದೆ ಎಂದರು.

 ಪ್ರತೀ 15 ದಿನಗಳಿಗೊಮ್ಮೆ ತಾಲೂಕಿನಲ್ಲಿ ಆಹಾರ ಅದಾಲತ್ ಹಾಗೂ ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಆಹಾರ ಅದಾಲತ್ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಭೆಯಲ್ಲಿ ಕ್ಷೇತ್ರದ ಶಾಸಕ ಕಿಮ್ಮನೆ ರತಾಕರ, ತಾಪಂ ಅಧ್ಯಕ್ಷೆ ನವಮಣಿ, ತಹಶೀಲ್ದಾರ್ ಲೋಕೇಶಪ್ಪ, ಪಪಂ ಅಧ್ಯಕ್ಷ ಸಂದೇಶ್ ಜವಳಿ, ತಾಪಂ ಪ್ರಭಾರ ಅಧಿಕಾರಿ ಡಾ. ಮಂಜುನಾಥ್‌ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X