Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಹಾರಕ್ರಮದ ಮೇಲೆ ನಿರಂತರ ದಬ್ಬಾಳಿಕೆ:...

ಆಹಾರಕ್ರಮದ ಮೇಲೆ ನಿರಂತರ ದಬ್ಬಾಳಿಕೆ: ಭಾಸ್ಕರ್ ಪ್ರಸಾದ್

‘ಚಲೋ ಉಡುಪಿ’ ಜಾಥಾ ಕರಪತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ25 Sept 2016 10:57 PM IST
share
ಆಹಾರಕ್ರಮದ ಮೇಲೆ ನಿರಂತರ ದಬ್ಬಾಳಿಕೆ: ಭಾಸ್ಕರ್ ಪ್ರಸಾದ್

ಉಡುಪಿ, ಸೆ.25: ‘ದನದಲ್ಲಿ ಕೋಟಿ ದೇವರುಗಳಿದ್ದಾರೆ’ ಎಂದು ಸುಳ್ಳು ಹೇಳಿ ಸ್ವ-ಹಿತಾಸಕ್ತಿಗಾಗಿ ಜನರ ಆಹಾರದ ಕ್ರಮದ ಮೇಲೆ ನಿರಂತರ ದಬ್ಬಾಳಿಕೆ ನಡೆಸಲಾಗುತ್ತಿದೆ. ಇದು ಈಗ ಜನರನ್ನು ಕೊಲೆ ಮಾಡುವಷ್ಟು ಮುಂದುವರಿದಿದೆ. ಮನುಷ್ಯನ ಪ್ರಾಣಕ್ಕಿಂತ ದನದ ಜೀವ ಮುಖ್ಯ ಎಂಬ ಕ್ರೂರಮಟ್ಟಕ್ಕೆ ತಲುಪಿದೆ. ಆದ್ದರಿಂದ ನಾವು ಆಹಾರದ ಆಯ್ಕೆಯ ಹಕ್ಕನ್ನು ಉಳಿಸಬೇಕಾಗಿದೆ ಎಂದು ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ಸಂಚಾಲಕ ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.

ಸಮಿತಿಯ ನೇತೃತ್ವದಲ್ಲಿ ಅ.4ರಿಂದ 9ರವರೆಗೆ ನಡೆಯಲಿರುವ ಸ್ವಾಭಿಮಾನಿ ಸಂಘರ್ಷ ಜಾಥಾ ಚಲೋ 'ಉಡುಪಿ-ಆಹಾರ ನಮ್ಮ ಆಯ್ಕೆ, ಭೂಮಿ ನಮ್ಮ ಹಕ್ಕು' ಇದರ ಕರಪತ್ರವನ್ನು ರವಿವಾರ ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.

ಆಹಾರದ ಆಯ್ಕೆ ಮತ್ತು ಭೂಮಿಯ ಹಕ್ಕಿಗಾಗಿ ಹಮ್ಮಿಕೊಂಡಿರುವ ಚಲೋ ಉಡುಪಿ ಚಳವಳಿಯು ಕರ್ನಾಟಕದ ಇತಿಹಾಸದ ಪುಟದಲ್ಲಿ ದಾಖಲಾಗುವ ರೀತಿಯಲ್ಲಿ ರೂಪುಗೊಳ್ಳುತ್ತಿದೆ. ಈ ಹೋರಾಟದಲ್ಲಿ ರಾಜ್ಯದ 200ಕ್ಕೂ ಅಧಿಕ ಪ್ರಗತಿಪರ ಸಂಘಟನೆಗಳು ಕೈಜೋಡಿಸಿವೆ ಎಂದು ಅವರು ತಿಳಿಸಿದರು.
ಅ.4ರಂದು ಬೆಂಗಳೂರಿನಿಂದ ಆರಂಭಗೊಳ್ಳುವ ಈ ಜಾಥಾವು ಅ.9ಕ್ಕೆ ಉಡುಪಿಯಲ್ಲಿ ಸಮಾಪನಗೊಳ್ಳಲಾಗಿದೆ. ಅಂದು ಉಡುಪಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಬೀಡಿನಗುಡ್ಡೆಯ ಮಹಾತ್ಮಗಾಂಧಿ ಬಯಲು ರಂಗಮಂದಿರದಲ್ಲಿ ಮಹಾ ಸಮಾವೇಶವನ್ನು ನಡೆಸಲಾಗುವುದು. ಊನಾದಲ್ಲಿ ದಲಿತರ ಬಹೃತ್ ಸಮಾವೇಶದ ಮುಂದಾಳತ್ವ ವಹಿಸಿದ್ದ ಯುವ ನಾಯಕ ಜಿಗ್ನೇಶ್ ಮೇವಾನಿ ಆಗಮಿಸಲಿದ್ದು, 20ರಿಂದ 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಈ ಚಳವಳಿಯು ಒಟ್ಟು ಮೂರು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಚಲೋ ಉಡುಪಿ. ಎರಡನೆ ಹಂತದಲ್ಲಿ 30 ಜಿಲ್ಲೆಗಳಲ್ಲಿ ಸಭೆ, ಸಂವಾದ, ಸುದ್ದಿಗೋಷ್ಠಿಗಳನ್ನು ನಡೆಸುವುದು. ಮೂರನೆ ಹಂತದಲ್ಲಿ ಸರಕಾರಕ್ಕೆ ಎಚ್ಚರಿಕೆ ಗಂಟೆ ನೀಡುವುದಕ್ಕಾಗಿ ಬೆಂಗಳೂರಿನಲ್ಲಿ ಮಹಾ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
 
ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜ್ಯ ಪ್ರ.ಕಾರ್ಯ ದರ್ಶಿ ಕೆ.ಎಲ್.ಅಶೋಕ್ ಮಾತನಾಡಿ, ಱಚಲೋ ಉಡುಪಿೞಈ ದಶಕದ ಹೊಸ ಚಳವಳಿ. ಈ ಚಳವಳಿಯಲ್ಲಿ ತೋಡಗಿಸಿಕೊಳ್ಳಲು ಯುವ ತಲೆಮಾರು ಹೊಸ ಆಶಯದೊಂದಿಗೆ ಮುನ್ನುಗ್ಗುತ್ತಿದೆ. ದಲಿತ, ಎಡಪಂಥೀಯ ಸಂಘಟನೆಗಳು, ರಾಜ್ಯದ ಶ್ರೇಷ್ಠ ಸಾಹಿತಿ, ಬರಹಗಾರರು, ಕಲಾವಿದರು ಈ ಚಳವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ವೇದಿಕೆಯ ಜಿಲ್ಲಾಧ್ಯಕ್ಷ ಜಿ.ರಾಜಶೇಖರ್, ಪ್ರೊ.ಫಣಿರಾಜ್, ದಿನಕರ ಎಸ್.ಬೆಂಗ್ರೆ, ದಸಂಸ ಮುಖಂಡರಾದ ಶ್ಯಾಮ್‌ರಾಜ್ ಬಿರ್ತಿ, ಸುಂದರ್ ಮಾಸ್ಟರ್, ಶ್ಯಾಮಸುಂದರ್ ತೆಕ್ಕಟ್ಟೆ, ಸುಂದರ್ ಕಪ್ಪೆಟ್ಟು, ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಖಲೀಲ್ ಅಹ್ಮದ್, ಖತೀಬ್ ಅಬ್ದುಲ್ ರಶೀದ್, ಸಲಾವುದ್ದೀನ್ ಅಬ್ದುಲ್ಲಾ, ಹುಸೈನ್ ಕೋಡಿಬೆಂಗ್ರೆ, ಕನಕದಾಸ ಸೇವಾ ಸಮಿತಿಯ ಹನು ಮಂತಪ್ಪ, ರಾಘವ ಮೊಗವೀರ, ವಿಚಾರವಾದಿ ವೇದಿಕೆಯ ಬಾಲಕೃಷ್ಣ ಪರ್ಕಳ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X