Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಸಂವಿಧಾನವನ್ನು ನಂಬದವರಲ್ಲಿ...

ಭಾರತೀಯ ಸಂವಿಧಾನವನ್ನು ನಂಬದವರಲ್ಲಿ ಮಾತುಕತೆಯಿಲ್ಲ: ಶಾ

ವಾರ್ತಾಭಾರತಿವಾರ್ತಾಭಾರತಿ25 Sept 2016 11:34 PM IST
share

ಕೋಝಿಕ್ಕೋಡ್, ಸೆ.25: ಭಾರತದ ಸಂವಿಧಾನದ ಮೇಲೆ ವಿಶ್ವಾಸವಿಲ್ಲದ, ಆದರೂ ತಮ್ಮನ್ನು ಭಾರತೀಯರೆಂದು ಹೇಳಿಕೊಳ್ಳುತ್ತಿರುವವರೊಂದಿಗೆ ಕೇಂದ್ರ ಸರಕಾರವು ಮಾತುಕತೆ ನಡೆಸುವುದಿಲ್ಲ ಎಂದು ಇಂದಿಲ್ಲಿ ಹೇಳುವ ಮೂಲಕ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಸ್ಪಷ್ಟ ಸಂದೇಶವೊಂದನ್ನು ನೀಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಲ್ಲಿ ಪರಿಸ್ಥಿತಿಯು ಚಿಂತಾಜನಕ ವಾಗಿದೆಯೆಂಬುದನ್ನು ಒಪ್ಪಿಕೊಂಡ ಅವರು, ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಿಸಲು ಸಾಧ್ಯವೆಂದು ಯಾರಾದರೂ ಯೋಚಿಸು ತ್ತಿದ್ದರೆ, ಅದು ಹಗಲು ಕನಸಲ್ಲದೆ ಬೇರೇನಲ್ಲ. ಅದೆಂದೂ ಸಾಧ್ಯವಾಗದು ಎಂದಿದ್ದಾರೆ.
ಇಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಮಂಡಳಿಯ ಸಭೆಯಲ್ಲಿ ಉದ್ಘಾಟನಾ ಭಾಷಣ ಮಾಡುತ್ತಿದ್ದ ಶಾ, ಪಕ್ಷದ ಗರೀಬ್ ಕಲ್ಯಾಣ್ ಕಾರ್ಯಸೂಚಿಯನ್ನು ಪ್ರಸ್ತಾಪಿಸಿದರು. ನರೇಂದ್ರಮೋದಿ ಪ್ರಧಾನಿಯಾದಂದಿನಿಂದ ಕೇಂದ್ರ ಸರಕಾರವು ಬಡವರ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದೆ. ಮುಂದಿನ ಒಂದು ವರ್ಷವನ್ನು ಗರೀಬ್ ಕಲ್ಯಾಣ್ ವರ್ಷವನ್ನಾಗಿ ಆಚರಿಸಲಾಗುವುದೆಂದು ತಿಳಿಸಿದರು.
ಪ್ರಧಾನಿ ಹಾಗೂ ಇತರ ಹಿರಿಯ ನಾಯಕರಿದ್ದ ಸಭೆಯಲ್ಲಿ ಅವರು ತನ್ನ ಭಾಷಣದ ಹೆಚ್ಚು ಭಾಗವನ್ನು ಇಂದು 100ನೆ ಜನ್ಮ ಜಯಂತಿ ಆಚರಿಸಲ್ಪಡುತ್ತಿರುವ ಪಕ್ಷದ ಸಿದ್ಧಾಂತಕಾರ ದಿವಂಗತ ದೀನದಯಾಳ್ ಉಪಾಧ್ಯಾಯ ಹಾಗೂ ಅವರ ಅಂತ್ಯೋದಯ ಮತ್ತು ಸಮಗ್ರ ಮಾನವತಾ ತತ್ವಗಳಿಗೆ ಮೀಸಲಿರಿಸಿದರು.
ಕಾಶ್ಮೀರ ಹಿಂಸಾಚಾರ ಹಾಗೂ ಉರಿ ಭಯೋತ್ಪಾದಕ ದಾಳಿಗಳನ್ನುಲ್ಲೇಖಿಸಿದ ಶಾ, ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದ್ದು, ವಿಶ್ವದ ಯಾವುದೇ ಶಕ್ತಿಗೂ ಅದನ್ನು ನಮ್ಮಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲವೆಂದು ಒತ್ತಿ ಹೇಳಿದರು.
ಬಿಜೆಪಿ ನೇತೃತ್ವದ ಸರಕಾರ ಶಾಂತಿಯ ಎಲ್ಲ ಮಾರ್ಗಗಳ ಬಗ್ಗೆ ಚರ್ಚಿಸಲು ಬಯಸುತ್ತಿದೆ. ಆದರೆ, ತಮ್ಮನ್ನು ಭಾರತೀಯರೆಂದು ಪರಿಗಣಿಸುವವರೊಂದಿಗೆ ಮಾತ್ರ ಅದು ಮಾತುಕತೆ ನಡೆಸುತ್ತದೆ. ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಯಾರೊಂದಿಗೂ ಮಾತುಕತೆ ನಡೆಸುವುದಿಲ್ಲವೆಂದು ಅವರು ತಿಳಿಸಿದರು.
ಭಾರತದ ಸಂವಿಧಾನದ ಚೌಕಟ್ಟಿನೊಳಗೆ ಮಾತುಕತೆ ಅಸಾಧ್ಯವೆಂದು ಒತ್ತಿ ಹೇಳುತ್ತಿರುವ ಪ್ರತ್ಯೇಕತಾವಾದಿಗಳಿಗೆ ಇದು ಸ್ಪಷ್ಟ ಸಂದೇಶವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X